Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಗತ್ತಿನಲ್ಲಿ ಭಕ್ತಿ-ಭಾವ ಕಡಿಮೆಯಾಗಬಾರದು
(ರಾಜ್ಯ ) ಜಿಲ್ಲೆ

ಜಗತ್ತಿನಲ್ಲಿ ಭಕ್ತಿ-ಭಾವ ಕಡಿಮೆಯಾಗಬಾರದು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಜಗತ್ತಿನಲ್ಲಿ ಭಕ್ತಿ ಭಾವ ಕಡಿಮೆಯಾದರೆ ಸಮಾಜಕ್ಕೆ ಕಂಟಕವಾಗುತ್ತದೆ. ಈ ನಿಟ್ಟಿನಲ್ಲಿ ಭಕ್ತಿ ಭಾವ ಕಡಿಮೆಯಾಗದಂತೆ ಜನರು ಗಮನ ಹರಿಸುವುದು ತುಂಬಾ ಅಗತ್ಯವಿದೆ ಎಂದು ಸಿಂದಗಿಯ ಸಾರಂಗಮಠದ ಡಾ.ಪ್ರಭುಸಾರಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲೂಕಿನ ಉತ್ನಾಳ ಗ್ರಾಮದ ಮಹಾಲಕ್ಷ್ಮೀದೇವಿಯ ೩೧ ನೇ ಜಾತ್ರಾಮಹೋತ್ಸವದಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಧರ್ಮಸಭೆ, ಮುತ್ತೈದೆಯರ ಉಡಿ ತುಂಬುವ ಕಾರ್ಯಕ್ರಮ, ಶ್ರೀಮಠದ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಮಠ-ಮಾನ್ಯಗಳು ಭಕ್ತರಿಗೆ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತವೆ. ಇಂತಹ ಕಾರ್ಯಕ್ರಮಗಳಲ್ಲಿ ಜನರು ಹೆಚ್ಚು ಭಾಗವಹಿಸುವ ಮೂಲಕ ಧರ್ಮ ಮತ್ತು ಸಂಸ್ಕ್ರತಿಯನ್ನು ಅರಿತು ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸುಂದರವಾದ ಜೀವನವನ್ನು ತಮ್ಮದಾಗಿಸಿಕೊಳ್ಳಬೇಕು. ಈಚೆಗೆ ಧರ್ಮ ಮತ್ತು ಸಂಸ್ಕ್ರತಿ ಮೊದಲಿನಂತೆ ಉಳಿಯುತ್ತಿಲ್ಲ. ಇದನ್ನು ಹೀಗೆ ಮುಂದುವರಿಯಲು ಬಿಟ್ಟರೆ ಸಮಾಜಕ್ಕೆ ಕಂಟಕವಾಗುತ್ತದೆ. ಇದನ್ನು ಅರಿತುಕೊಂಡು ಪ್ರತಿಯೊಬ್ಬರೂ ಧರ್ಮ, ಸಂಸ್ಕ್ರತಿಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ತೊಡಗಿಕೊಳ್ಳಬೇಕೆಂದರು.
ಪ್ರತಿವರ್ಷ ಉತ್ನಾಳದ ಹಿರೇಮಠವು ಮಹಾಲಕ್ಷ್ಮೀದೇವಿ ಜಾತ್ರಾಮಹೋತ್ಸವದಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕ್ರತಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಎಲ್ಲ ಜನರಿಗೆ ಒಳಿತು ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು.
ಸಾನಿಧ್ಯ ವಹಿಸಿದ್ದ ಶಹಾಪುರದ ಸೂಗೂರೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಭೂಮಿಯಲ್ಲಿ ಜನ್ಮವೆತ್ತಿದ ಪ್ರತಿಯೊಂದು ಜೀವರಾಶಿಗೆ ಬದುಕು ನೀಡುವ ತಾಯಿ ಪೂಜನೀಯ. ಇಂತಹ ತಾಯಿಗೆ ಉಡಿ ತುಂಬುವ ಮೂಲಕ ಅವಳಿಗೆ ಕೃತಜ್ಞತೆಯನ್ನು ಸಲ್ಲಿಸಬೇಕು. ಭೂ ತಾಯಿಗೂ ಎಳ್ಳಅಮವಾಸ್ಯೆ ದಿನದಂದು ಉಡಿ ತುಂಬಿದರೆ, ಜೀವಂತ ತಾಯಂದಿರಿಗೆ ಪ್ರತಿಯೊಂದು ಪುಣ್ಯ ಕಾರ್ಯದಲ್ಲಿ ಉಡಿ ತುಂಬುವ ಮೂಲಕ ಧನ್ಯತಾ ಭಾವ ಅನುಭವಿಸುವದನ್ನು ನೋಡುತ್ತೇವೆ. ಈ ಜಾತ್ರಾಮಹೋತ್ಸವದಲ್ಲಿ ಸಾವಿರಾರು ಮುತ್ತೈದೆಯರಿಗೆ ಪ್ರತಿವರ್ಷ ಉಡಿ ತುಂಬುವ ಕಾರ್ಯ ನಡೆಯುತ್ತಿರುವದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ನಾಗಣಸೂರಿನ ಬೊಮ್ಮಲಿಂಗೇಶ್ವರ, ಬೃಹನ್ಮಠದ ಶ್ರೀಕಂಠ ಶಿವಾಚಾರ್ಯರು, ಕಲಕೇರಿಗೆಯ ಮಡಿವಾಳೇಶ್ವರ ಶಿವಾಚಾರ್ಯರು, ಕರಭಂಟನಾಳದ ಶಿವಕುಮಾರ ಸ್ವಾಮೀಜಿ ಇದ್ದರು. ನೇತೃತ್ವವನ್ನು ಶ್ರೀಮಠದ ಮಹಾಲಕ್ಷ್ಮೀದೇವಿ ಆರಾಧಕ ಶಿವಪುತ್ರಯ್ಯ ಹಿರೇಮಠ ವಹಿಸಿದ್ದರು.
ನಿವೃತ್ತ ಎಸ್ಪಿ ಬಿ.ಐ.ಬೆಳ್ಳುಬ್ಬಿ,ಪ್ರಭು ಎಂ., ಎಸ್.ಎಸ್.ಗೊಳಸಂಗಿ, ಎಂ.ಬಿ.ಜಮಖಂಡಿ, ಬಿ.ಬಿ.ಬೋಸ್ಲೆ, ಶರಣಯ್ಯ ಹಿರೇಮಠ, ರವಿಕುಮಾರ ನಾಗೂರ, ಶರಣು ಮನ್ನಿಕಟ್ಟಿ, ಅಂಕಣಕಾರ ಪ್ರಶಾಂತ ರಿಪ್ಪನಪೇಟ, ಶರಣು ಸಜ್ಜನ, ಡಾ.ಪ್ರಶಾಂತ ಕಮತಗಿ, ಡಾ.ಸುನೀಲ ಪಾಟೀಲ, ಮಲ್ಲು ಅಲ್ಲಾಪುರ, ಶಶಿಕಲಾ ಹಿರೇಮಠ,ಗುರುಬಸಯ್ಯ ಕಟಗೇರಿಮಠ, ಬಸವರಾಜ ಬಿರಾದಾರ, ಮಲ್ಲಿಕಾರ್ಜುನ ಸಜ್ಜನ, ಡಾ.ಅಮರೇಶ ಮಿಣಜಗಿ ಇತರರು ಇದ್ದರು.
ಎಂ.ಎಸ್.ಸಜ್ಜನ ಸ್ವಾಗತಿಸಿದರು. ಎಂ.ಬಿ.ಟಕ್ಕಳಕಿ ನಿರೂಪಿಸಿದರು. ಸಂಗಮೇಶ ಹಿರೇಮಠ ವಂದಿಸಿದರು.
ಇದೇ ಸಂದರ್ಭದಲ್ಲಿ ಶ್ರೀಮಠದ ಶಿವಪುತ್ರಯ್ಯ ಹಿರೇಮಠ ಅವರ ಸುಪುತ್ರ ಡಾ.ಮಹಾಂತೇಶ ಹಿರೇಮಠ ಅವರು ಆಯುರ್ವೇದದಲ್ಲಿ ಎಂಡಿ ಪದವಿ ಪಡೆದ ಹಿನ್ನೆಲೆಯಲ್ಲಿ ಅವರನ್ನು ವಿವಿಧ ಶ್ರೀಗಳ ಸಾನಿಧ್ಯದಲ್ಲಿ ಸನ್ಮಾನಿಸಲಾಯಿತು.
ನೂರಾರು ಮುತ್ತೈದೆಯರಿಗೆ ಶಶಿಕಲಾ ಹಿರೇಮಠ ಅಮ್ಮನವರ ಸಾನಿಧ್ಯದಲ್ಲಿ ಉಡಿ ತುಂಬುವ ಕಾರ್ಯ ನೆರವೇರಿತು.
ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ ಮಹಾಲಕ್ಷ್ಮೀದೇವಿ ಮೂರ್ತಿಗೆ ವಿಶೇಷ ರುದ್ರಾಭಿಷೇಕ, ಕುಂಕುಮಾರ್ಚನೆ, ಪೂಜೆ, ಚಂಡಿಹೋಮ, ಪಲ್ಲಕ್ಕಿ ಉತ್ಸವ ಸೇರಿದಂತೆ ವಿವಿಧ ಪೂಜಾ ಕಾರ್ಯಗಳು ಜರುಗಿದವು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
  • ಸಾರವಾಡ ಸುತ್ತಮುತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯಕ್ಕೆ ಬದ್ಧ
    In (ರಾಜ್ಯ ) ಜಿಲ್ಲೆ
  • ದೇಹ ದಾರ್ಡ್ಯ ಸ್ಪರ್ಧೆ: ಎಸ್.ಎಸ್.ಬಿ. ಪ್ರತಿಭೆ ಪ್ರಜ್ವಲ ಗೆ ಬೆಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.