Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲಿಂ.ಶಿವಲಿಂಗೇಶ್ವರರು ಬಸವನಾಡಿನಲ್ಲಿ ಸದಾ ಪ್ರಾತ:ಸ್ಮರಣಿಯರು
(ರಾಜ್ಯ ) ಜಿಲ್ಲೆ

ಲಿಂ.ಶಿವಲಿಂಗೇಶ್ವರರು ಬಸವನಾಡಿನಲ್ಲಿ ಸದಾ ಪ್ರಾತ:ಸ್ಮರಣಿಯರು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ವಿರಕ್ತಮಠದ ಲಿಂ.ಶಿವಲಿಂಗೇಶ್ವರರ ಕತೃತ್ವ ಶಕ್ತಿ ಅಗಾಧವಾಗಿದೆ. ಇಂತಹ ಪೂಜ್ಯರು ಬಸವನಾಡಿನಲ್ಲಿ ಸದಾ ಪ್ರಾತ:ಸ್ಮರಣಿಯರಾಗಿದ್ದರೆ ಎಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣದ ವಿರಕ್ತಮಠದಲ್ಲಿ ಬುಧವಾರ ಬಸವಜಯಂತಿ ಆಚರಣೆ ಹಾಗೂ ಶಿವಲಿಂಗೇಶ್ವರ ಶಿವಯೋಗಿಗಳ ಪುಣ್ಯರಾಧನೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ವಿರಕ್ತ ಪರಂಪರೆಯಲ್ಲಿ ಅಗಾಧವಾದ ಶಕ್ತಿ ಇದೆ. ಮನೆಯಲ್ಲಿ ಮಗು ಅಳುತ್ತಿದ್ದರೆ ಆ ಮಗುವನ್ನ ವಿರಕ್ತಮಠದಲ್ಲಿರುವ ಶಿವಲಿಂಗೇಶ್ವರರ ಗದ್ದುಗೆಯ ಮುಂದೆ ಹಾಕಿ ಶ್ರೀಗಳ ಪ್ರಸಾದ ಹಣೆಗೆ ಹಚ್ಚಿದರೆ ಸಾಕು ಮಗು ಅಳುವನ್ನು ನಿಲ್ಲಿಸುತ್ತಿತ್ತು ಎಂದರೆ ಶಿವಲಿಂಗೇಶ್ವರ ಶಿವಯೋಗಿಗಳು ಎಂತಹ ಮಹಾನ್ ತಪಸ್ವಿಗಳಾಗಿದ್ದರು ಎನ್ನುವುದನ್ನು ನಾವೆಲ್ಲರು ಅರಿತುಕೊಳ್ಳಬೇಕೆಂದರು.
ವಿರಕ್ತ ಪರಂಪರೆಯಲ್ಲಿ ಸಾಕಷ್ಟು ಶರಣರು ಇಂತಹ ಶಕ್ತಿಯನ್ನ ಪಡೆದಿದ್ದರು. ಮಠಕ್ಕೆ ಬಂದ ಭಕ್ತರಿಗೆ ಯಂತ್ರವನ್ನು ಕಟ್ಟಿ ಅವರ ದು:ಖವನ್ನು ದೂರ ಮಾಡುವ ಶಕ್ತಿಯನ್ನು ಸಿದ್ದಗಂಗಾ ಮಠದ ಲಿಂ. ಡಾ. ಶಿವಕುಮಾರ ಸ್ವಾಮೀಜಿ ಹೊಂದಿದ್ದರು. ಅದೇ ರೀತಿಯಲ್ಲಿ ಅಗಾದ ಶಕ್ತಿ ಪಡೆದ ಶಿವಲಿಂಗೇಶ್ವರ ಶಿವಯೋಗಿಗಳು ಕಷ್ಟ ಅಂತ ಬಂದವರ ಕಷ್ಟವನ್ನು ಪರಿಹರಿಸುತ್ತಿದ್ದರು. ಈಗಾಗಲೇ ಅವರ ಚರಿತ್ರೆ ಪುಸ್ತಕ ರೂಪದಲ್ಲಿ ಲೋಕಾರ್ಪಣೆಗೊಂಡಿದೆ. ಮುಂಬರುವ ದಿನಗಳಲ್ಲಿ ಶಿವಲಿಂಗೇಶ್ವರರ ಪುರಾಣವನ್ನು ಶ್ರೀಮಠದ ಪೂಜ್ಯರು ಬರೆಸಿದರೆ ನಾಡಿನುದ್ದಕ್ಕೂ ಎಲ್ಲರೂ ಅದನ್ನ ಕೇಳಿ ಪಾವನರಾಗುತ್ತಾರೆ ಎಂದರು.
ಸಾಹಿತಿ ಲ.ರು. ಗೊಳಸಂಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 12ನೇ ಶತಮಾನದ ವಿಶ್ವಗುರು ಬಸವೇಶ್ವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡ ಶಿವಲಿಂಗೇಶ್ವರ ಶಿವಯೋಗಿಗಳು ಬಸವೇಶ್ವರರ ತತ್ವ ಆದರ್ಶಗಳನ್ನ ಜಾರಿಗೆ ತರುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ್ದರು. ಅಗಾಧ ಶಕ್ತಿಯನ್ನು ಹೊಂದಿರುವ ಶಿವಯೋಗಿಗಳು ಸಾಕಷ್ಟು ಪವಾಡಗಳನ್ನು ಮಾಡಿದ್ದರು. ಕಾಯಕ ದಾಸೋಹಕ್ಕೆ ಮಹತ್ವ ನೀಡಿದ ಶಿವಯೋಗಿಗಳು ಬಾಗೇವಾಡಿಯ ಭಾಗ್ಯವಾಗಿದ್ದರು ಎಂದರು.
ರಾಜ್ಯ ಸಹಕಾರಿ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ದಾನಗಳಲ್ಲಿ ಶ್ರೇಷ್ಠ ದಾನ ರಕ್ತ ದಾನ ಶಿವಯೋಗಿಗಳ ಪುಣ್ಯರಾಧಾನೆ ನಿಮಿತ್ಯ ಸಾಕಷ್ಟು ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದಾಗುತ್ತಿರುವ ಕಾರ್ಯ ಶ್ಲಾಘನೀಯ. ಸಮಾಜಕ್ಕಾಗಿ ಶ್ರಮಿಸಿದವರಿಗೆ ಸಾವಿಲ್ಲ. ಸಮಾಜಕ್ಕಾಗಿ ದುಡಿದವರು ಅಜರಾಮರವಾಗುತ್ತಾರೆ ಎನ್ನುವುದಕ್ಕೆ ಶಿವಲಿಂಗೇಶ್ವರ ಶ್ರೀಗಳು ಸಾಕ್ಷಿಯಾಗಿದ್ದಾರೆ ಎಂದರು.
ಶಿಕ್ಷಕ ಎಚ್.ಬಿ.ಬಾರಿಕಾಯಿ ಉಪನ್ಯಾಸ ನೀಡಿದರು. ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ವಹಿಸಿದ್ದರು. ಮುಖಂಡರಾದ ಶಿವನಗೌಡ ಬಿರಾದಾರ, ಶಿವಾನಂದ ಈರಕಾರ ಮುತ್ಯಾ, ಡಾ, ಸುನೀಲ ಚವ್ಹಾಣ, ಬಸವರಾಜ ಹಾರಿವಾಳ, ಬಸಣ್ಣ ದೇಸಾಯಿ, ಮುರಗೆಪ್ಪ ಚಿಂಚೊಳಿ, ರವಿ ಚಿಕ್ಕೊಂಡ ಇತರರು ಇದ್ದರು. ಮಹಾಂತೇಶ ಆದಿಗೊಂಡ ಸ್ವಾಗತಿಸಿದರು. ಕೊಟ್ರೇಶ ಹೆಗಡ್ಯಾಳ ನಿರೂಪಿಸಿ, ವಂದಿಸಿದರು.
ಇದೇ ಸಂದರ್ಭದಲ್ಲಿ ಶಿವಲಿಂಗೇಶ್ವರ ಶಿವಯೋಗಿಗಳ ಪುಣ್ಯಾದಾಧನೆಯಂಗವಾಗಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಶ್ರೀಮಠ ಪೂಜ್ಯರು ಸೇರಿದಂತೆ ವಿವಿಧ ಜನರು ರಕ್ತದಾನ ಮಾಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.