Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಂಬಗಿ, ಮಾದಾಳ ಕೆರೆ ನೀರು ತುಂಬುವಂತೆ ರೈತ ಸಂಘ ಆಗ್ರಹ
(ರಾಜ್ಯ ) ಜಿಲ್ಲೆ

ಜಂಬಗಿ, ಮಾದಾಳ ಕೆರೆ ನೀರು ತುಂಬುವಂತೆ ರೈತ ಸಂಘ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೨ ದಿನದಲ್ಲಿ ಕೆರೆಗೆ ನೀರು ತುಂಬಿಸದಿದ್ದರೆ ಸಾವಿರಾರು ರೈತರೊಂದಿಗೆ ಕೆರೆಯಲ್ಲಿಯೆ ಕುಳಿತು ಧರಣಿ ಸತ್ಯಾಗ್ರಹದ ಎಚ್ಚರಿಕೆ

ವಿಜಯಪುರ: ಜಂಬಗಿ ಕೆರೆ ಜಿಲ್ಲೆಯಲ್ಲಿಯೇ ೨ನೇ ಅತೀದೊಡ್ಡ ಕೆರೆಯಾಗಿದ್ದು, ಹಾಗೂ ಹುಣಶ್ಯಾಳ (ಮಾದಾಳ) ಕೆರೆಗಳಲ್ಲಿ ನೀರು ತುಂಬಿದರೆ ಸುತ್ತಮುತ್ತಲಿನ ೫-೬ ಹಳ್ಳಿಗಳ ರೈತರಿಗೆ ಜನ ಜಾನುವಾರುಗಳಿಗೆ ಕುಡಿಯಲು ನೀರಿನ ಅನುಕೂಲವಾಗುವುದು ಮಾತ್ರವಲ್ಲದೇ, ಅಂತರ್ಜಲ ಮಟ್ಟ ಹೆಚ್ಚಾಗಿ ನೀರಿನ ಮೂಲಗಳು ಅಭಿವೃದ್ಧಿ ಹೊಂದುತ್ತವೆ. ಇದರಿಂದ ರೈತರಿಗೆ ಕೃಷಿ ಚಟುವಟಿಕೆ ಮಾಡಲು ಅನುಕೂಲವಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಆಹೇರಿ ಗ್ರಾಮದ ಮಾಜಿ ಗ್ರಾ.ಪಂ ಚೇರಮನ್ ಬಸವರಾಜ ಗಾಣಿಗೇರ ಮಾತನಾಡಿ, ಜಿಲ್ಲೆಯ ಎಲ್ಲಾ ಕೆರೆಗಳು ತುಂಬುತ್ತಿದ್ದರೂ ಜಂಬಗಿ ಹಾಗೂ ಹುಣಶ್ಯಾಳ ಕೆರೆ ಮಾತ್ರ ತುಂಬದೇ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಲ್ಲಿಯವರೆಗೆ ಕೆರೆ ನೀರು ತುಂಬದೇ ಪುರಾಣ ಹೇಳುತ್ತಿದ್ದಾರೆ, ಕೇಳಿದರೆ ನಿಮಗೆ ನೀರು ಬರುವುದಿಲ್ಲ, ನೀವು ಮೇಲಿನ ಅಧಿಕಾರಿಗಳಿಗೆ ಕೇಳಿ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದರು.
ವಿಜಯಪುರ ತಾಲೂಕಾ ಉಪಾಧ್ಯಕ್ಷ ಮಹಾದೇವಪ್ಪ ತೇಲಿ ಅವರು ಮಾತನಾಡಿ, ೨ ದಿನದಲ್ಲಿ ಕೆರೆ ನೀರು ತುಂಬಿಸದಿದ್ದರೆ ಸಾವಿರಾರು ರೈತರೊಂದಿಗೆ ಕೆರೆಯಲ್ಲಿಯೆ ಕುಳಿತು ಧರಣಿ ಸತ್ಯಾಗ್ರಹ ಮಾಡಲಾಗುವುದು. ರೈತರ ನಿರ್ಣಯದಿಂದ ಅದು ಮುಂದೆ ಅಮರಣ ಉಪವಾಸ ಸತ್ಯಾಗ್ರಹ ಮಾಡಬಹುದು, ಅದಕ್ಕೆ ಅವಕಾಶ ನೀಡದೇ ಜಿಲ್ಲಾಧಿಕಾರಿಗಳು ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಕೆರೆ ತುಂಬಿಸುವಂತೆ ಆದೇಶ ನೀಡಬೇಕಾಗಿ ಸಮಸ್ತ ರೈತರೊಂದಿಗೆ ಆಗ್ರಹಿಸುತ್ತಾ ಇದ್ದೇವೆ ಎಂದರು.
ಈ ವೇಳೆ ಜಿಲ್ಲಾ ಗೌರವಾಧ್ಯಕ್ಷ ಕಲ್ಲಪ್ಪ ಪಾರಶೆಟ್ಟಿ, ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ, ತಾಲೂಕಾ ಉಪಾಧ್ಯಕ್ಷ ಪ್ರಕಾಶ ತೇಲಿ, ಸದಸ್ಯರಾದ ಪ್ರಭು ಕಾರಜೋಳ, ಬಸವರಾಜ ಮಸೂತಿ, ಶರಣಪ್ಪ ಜಮಖಂಡಿ, ಜಯಸಿಂಗ ರಜಪೂತ, ಸಂತೋಷ ಮುಡಗಿ, ಅನಮೇಶ ಜಮಖಂಡಿ, ರಾಮಸಿಂಗ ರಜಪೂತ, ಅಮೀತ ಡಿಗ್ಗಾಯಿ, ಮಹಾಂತೇಶ ಮಾಗಣಗೇರಿ, ಬಸವರಾಜ ಭೈರವಾಡಗಿ, ಆತ್ಮಾನಂದ ಭೈರವಾಡಗಿ, ರೇವಣಸಿದ್ಧ ಪೂಜಾರಿ, ಸಿದ್ಧಪ್ಪ ಕಾರಜೋಳ, ಸಂಗಪ್ಪ ಕೊಣಸಿರಸಗಿ, ಯಲ್ಲಪ್ಪ ದಿನ್ನಿ, ಬಸವಂತ ತೇಲಿ, ಗಣೇಶ ಸಮಗಾರ, ಕಲ್ಲಪ್ಪ ಸೋಲಾಪುರ, ಲಚ್ಚಾರಾಮ ರಜಪೂತ ಸೇರಿದಂತೆ ಅನೇಕರು ಇದ್ದರು.

” ಜಿಲ್ಲೆಯ ಎಲ್ಲಾ ೧೪೯ ಕೆರೆಗಳನ್ನು ತುಂಬಿದ್ದೇವೆ ಎಂದು ಹೇಳುತ್ತಿರುವ ಅಧಿಕಾರಿಗಳು ಖುದ್ದಾಗಿ ಸಮೀಕ್ಷೆ ಮಾಡಿ ಇದರಲ್ಲಿ ಅರ್ಧ ಮಾತ್ರ ಕೆರೆ ನೀರು ತುಂಬಿರುತ್ತಾರೆ, ಉಳಿದ ಅರ್ಧ ಕೆರೆ ತುಂಬದೇ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ, ಇದರಿಂದ ಜನ ಜಾನುವಾರುಗಳಿಗೆ ಈ ಭೀಕರ ಬೇಸಿಗೆಯಲ್ಲಿ ಕುಡಿಯಲು ನೀರು ಸಿಗದೇ ಸಾಕಷ್ಟು ಕಷ್ಟ ಅನುಭವಿಸುವಂತಾಗಿದೆ. ಕೂಡಲೇ ಜಿಲ್ಲಾಧಿಕಾರಿಗಳು ಜಿಲ್ಲೆಯ ೧೪೯ ಕೆರೆಗಳನ್ನು ತುಂಬಿಸಿ ರೈತರಿಗೆ ಅನುಕೂಲಮಾಡಬೇಕು.”
– ಸಂಗಮೇಶ ಸಗರ,
ಜಿಲ್ಲಾಧ್ಯಕ್ಷರು, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.