Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಂತುಹುಳು ಸಮಸ್ಯೆ ಬಗ್ಗೆ ನಿರ್ಲಕ್ಷಿಸದಿರಿ :ಬಂಡಗರ
(ರಾಜ್ಯ ) ಜಿಲ್ಲೆ

ಜಂತುಹುಳು ಸಮಸ್ಯೆ ಬಗ್ಗೆ ನಿರ್ಲಕ್ಷಿಸದಿರಿ :ಬಂಡಗರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ರಕ್ತಹೀನತೆ ಮತ್ತು ಅಪೌಷ್ಠಿಕ ಕಾರಣದಿಂದ ಬಳಲಿದಂತೆ ಕಾಣುವ ಮಕ್ಕಳಲ್ಲಿ ಜಂತು ಹುಳು ಸಾಧ್ಯತೆ ಇರುತ್ತದೆ. ಈ ಸಮಸ್ಯೆ ಇದ್ದವರಿಗೆ ಸೇವಿಸುವ ಆಹಾರದ ಶೇ.೩೦ರಿಂದ ೪೦ರಷ್ಟು ಭಾಗ ಜಂತು ಹುಳುಗಳ ಪಾಲಾಗುತ್ತದೆ. ಹೀಗಾಗಿ ರಕ್ತಹೀನತೆ, ದೇಹದ ತೂಕ ಹಾಗೂ ನೆನಪಿನ ಶಕ್ತಿ ಕಡಿಮೆಯಾಗುವುದರ ಜತೆಗೆ ನಾನಾ ಸಮಸ್ಯೆಗಳು ಕಾಡುತ್ತವೆ. ಹೀಗಾಗಿ ಮಾತ್ರೆಗಳ ವಿತರಣೆ ಅಗತ್ಯವಿದೆ. ಮಕ್ಕಳಲ್ಲಿ ಕಂಡು ಬರುವ ಜಂತುಹುಳು ಸಮಸ್ಯೆ ಬಗ್ಗೆ ನಿರ್ಲಕ್ಷಿಸದಿರಿ…! ಎಂದು ರೇವತಗಾಂವ ಸಮುದಾಯ ಆರೋಗ್ಯಾಧಿಕಾರಿ ಶ್ರೀಧರ ಬಂಡಗರರವರು ಹೇಳಿದರು.
ರೇವತಗಾಂವ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಕೋಚಿಂಗ್ ಕ್ಲಾಸ್‌ನಲ್ಲಿ ಬುಧವಾರದಂದು ‘ರಾಷ್ಟ್ರೀಯ ಜಂತುಹುಳು ನಿರ್ಮೂಲನಾ’ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಜಂತುಹುಳು ಮಾತ್ರೆಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು. ಜಂತುಹುಳು ಎಂದರೆ ಮಾನವನ ಕರುಳಿನಿಂದ ಪೋಷಕಾಂಶಗಳನ್ನು ಹೀರಿಕೊಂಡು ಜೀವಿಸುವ ಪರಾವಲಂಬಿಗಳು. ಅಲ್ಲದೆ ಜಂತುಹುಳುವಿನ ಸೋಂಕಿನಿAದಾಗಿ ಮಕ್ಕಳ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ತಿಳಿಸಿದರು.
ಈ ವೇಳೆಯಲ್ಲಿ ಕೋಚಿಂಗ್ ಕ್ಲಾಸ್‌ನ ಸಂಚಾಲಕರಾದ ಮಲ್ಲು ಮಾನೆಯವರು ಮಾತನಾಡುತ್ತ. ಮಕ್ಕಳಲ್ಲಿ ಜಂತು ಹುಳುಗಳ ಬಾಧೆಯಿಂದ ರಕ್ತ ಹೀನತೆ ಹಾಗೂ ಅವರ ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳಬಹುದು. ಅವರ ಬುದ್ದಿಶಕ್ತಿ ಕಡಿಮೆಯಾಗಬಹುದು. ಶಾಲಾ ಹಾಜರಾತಿ ಕಡಿಮೆಯಾಗಿ ಕ್ರಮೇಣ ಶಾಲೆಯಿಂದ ಹೊರಬೀಳುವ ಸಾಧ್ಯತೆ ಇದೆ. ರಾಜ್ಯಾದ್ಯಂತ ೧ ರಿಂದ ೨ ವರ್ಷದ ಮಕ್ಕಳಿಗೆ ಅರ್ಧ ಮಾತ್ರೆ ಹಾಗೂ ೨ ರಿಂದ ೧೯ ವರ್ಷದ ವರೆಗಿನ ಮಕ್ಕಳಿಗೆ ಒಂದೊಂದು ಮಾತ್ರೆಗಳನ್ನು ಪ್ರತಿವರ್ಷ, ವರ್ಷಕ್ಕೆ ಎರಡು ಬಾರಿ ಜಂತು ಹುಳು ನಿರ್ಮೂಲನೆಯ ಅಲ್ಬೆಂಡಝೋಲ್ ಮಾತ್ರೆಗಳನ್ನು ನೀಡಿ, ಈ ಹೊಟ್ಟೆ ಹುಳುಗಳ ನಿರ್ಮೂಲನೆಗಾಗಿ ಸರ್ಕಾರವು ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನವನ್ನು ಆಚರಿಸುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಾದ ಸುವರ್ಣ ಅಂಕಲಗಿ, ಶೋಭಾ ಪೂಜಾರಿ ಸೇರಿದಂತೆ ಕೋಚಿಂಗ್ ಕ್ಲಾಸ್‌ನ ಮಾರ್ಗದರ್ಶಕರಾದ ಎಸ್.ಎಂ.ಮಾಳಿ, ವಿ.ಆರ್.ದಶವಂತ, ಬೈಲಪ್ಪ ಹೇರೂರ, ಶಿವಾನಂದ ಅರಸಗೊಂಡ, ಪ್ರೀಯಂಕಾ ವಾಲಿಕಾರ, ದೀಪಾ ಹಾವಿನಾಳ, ಸಾವಿತ್ರಿ ದಾಭೆ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.