Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ
ವಿಶೇಷ ಲೇಖನ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

“ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ”- ವಿವೇಕಾನಂದ. ಎಚ್.ಕೆ. ಬೆಂಗಳೂರು

ಈ ವರ್ಷದ ಬೇಸಿಗೆಯ ತಾಪಮಾನ ಬಹುತೇಕ ಇಡೀ ಕರ್ನಾಟಕದ ಜನರನ್ನು ಅಲುಗಾಡಿಸಿ ಬಿಟ್ಟಿತು. ಅದರಲ್ಲೂ ಮಧ್ಯಮ, ಕೆಳಮಧ್ಯಮ ಮತ್ತು ಬಡವರ್ಗದ ಜನರು ತಾಪಮಾನದ ಏರಿಕೆಯಿಂದ ತತ್ತರಿಸಿ ಹೋದರು. ಕೆಲವು ಜೀವಗಳು ಹೊರಟೇ ಹೋದವು. ಇನ್ನೊಂದಷ್ಟು ಜನ ಅನಾರೋಗ್ಯಗಳಿಗೆ ತುತ್ತಾದರು. ಪ್ರಾಣಿಪಕ್ಷಿಗಳು ಕಣ್ಣ ಮುಂದೆಯೇ ತುಂಬಾ ಒದ್ದಾಡಿದವು..
ಈಗ ಎರಡು ಮೂರು ದಿನದಿಂದ ಸ್ವಲ್ಪಮಟ್ಟಿಗೆ ಉಷ್ಣಾಂಶ ಕಡಿಮೆಯಾಗಿದೆ. ಆದರೆ ಆ ತಾಪಮಾನದ ಹೊಡೆತ ನಮಗೆ ಒಂದು ಬಹುದೊಡ್ಡ ಪಾಠವಾಗಬೇಕು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿ ವರ್ಷ ಹೀಗೆ ಒಂದೊಂದು ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಜಾಸ್ತಿಯಾಗುತ್ತಾ ಹೋಗುತ್ತದೆ ಎಂದು ಯಾರೋ ಬರೆದ ಒಂದು ಲೇಖನ ಪ್ರಸಾರವಾಗುತ್ತಿದೆ. ಅದು ಎಷ್ಟರಮಟ್ಟಿಗೆ ನಿಜವೋ ಗೊತ್ತಿಲ್ಲ. ಆದರೆ ಮುಂದೆಯೂ ಪರಿಸರವನ್ನು ಹೀಗೇ ನಿರ್ಲಕ್ಷಿಸಿದರೆ ಖಂಡಿತವಾಗಿಯೂ ತಾಪಮಾನದ ಹೊಡೆತಕ್ಕೆ ನಾವೆಲ್ಲರೂ ನಾಶವಾಗುವುದು ನಿಶ್ಚಿತ. ಅದಕ್ಕಾಗಿ ಆ ಹಂತ ತಲುಪುವ ಮುನ್ನವೇ ನಾವೆಲ್ಲ ಎಚ್ಚೆತ್ತುಕೊಳ್ಳಬೇಕಾಗಿದೆ ಮತ್ತು ಆ ನಿಟ್ಟಿನಲ್ಲಿ ಒಂದಷ್ಟು ಕೆಲಸ ಮಾಡಬೇಕಾಗಿದೆ..


ಮುಖ್ಯವಾಗಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ, ಈ ವರ್ಷದ ಈಗ ಪ್ರಾರಂಭವಾಗಿರುವ ಮಳೆಗಾಲದಲ್ಲಿ ಕನಿಷ್ಠ ಒಂದು ಲಕ್ಷ ಗಿಡಗಳನ್ನು ಬೆಳೆಸುವ ಪ್ರತಿಜ್ಞೆ ಮಾಡಬೇಕು. ಹಾಗೆಯೇ ಹೋಬಳಿ ಮಟ್ಟದಲ್ಲಿ 10 ಲಕ್ಷ ಗಿಡಗಳು, ತಾಲೂಕು ಮಟ್ಟದಲ್ಲಿ 50 ಲಕ್ಷದಷ್ಟು ಗಿಡಗಳು ಮತ್ತು ಗ್ರೇಡ್-ಒನ್ ನಗರಗಳಲ್ಲಿ ಅಂದರೆ ಜಿಲ್ಲಾಮಟ್ಟದಲ್ಲಿ ಒಂದು ಕೋಟಿ ಗಿಡಮರಗಳನ್ನು ನೆಡುವ ಕಾರ್ಯಕ್ರಮವನ್ನು ತತ್ ಕ್ಷಣದಿಂದಲೇ ಹಮ್ಮಿಕೊಳ್ಳಬೇಕು. ಸರ್ಕಾರ ಮತ್ತು ಸ್ವಯಂಸೇವಾ ಸಂಸ್ಥೆಗಳ ಜಂಟಿ ನೇತೃತ್ವದಲ್ಲಿ ಇದನ್ನು ಆರಂಭಿಸಬೇಕು. ಅಂದರೆ ಇಡೀ ರಾಜ್ಯದಲ್ಲಿ ನೂರಾರು ಕೋಟಿ ಗಿಡಗಳನ್ನು ಈ ಮಳೆಗಾಲದ ಸಮಯದಲ್ಲಿ ನೆಟ್ಟರೆ ಕನಿಷ್ಠ ಅದರಲ್ಲಿ ತೀರಾ ಕಡಿಮೆ ಎಂದರೂ 30 ರಿಂದ 40 ಶೇಕಡಾ ಗಿಡಗಳು ಉಳಿಸಿ ಬೆಳೆಸುವಲ್ಲಿ ಯಶಸ್ವಿಯಾದರೆ ಎಷ್ಟೋ ಕೋಟಿ ಮರಗಳು ಬೆಳೆಯುತ್ತವೆ. ಇಡೀ ರಾಜ್ಯದಲ್ಲಿ ಅರಣ್ಯ ಪ್ರದೇಶ ತುಂಬಾ ಹೆಚ್ಚಾಗುತ್ತದೆ..
ಆಗ ಆಮ್ಲಜನಕ ಹೆಚ್ಚಾಗುತ್ತದೆ. ಮಳೆಯ ಕೊರತೆ ಕಡಿಮೆಯಾಗುತ್ತದೆ. ತಾಪಮಾನದ ಕುಸಿತ, ಮನಸ್ಸಿನ ಆಹ್ಲಾದ, ಆರೋಗ್ಯ ಎಲ್ಲವುಗಳಲ್ಲಿ ಕೆಲವೇ ವರ್ಷದಲ್ಲಿ ಕ್ರಾಂತಿಕಾರಕ ಬದಲಾವಣೆ ಉಂಟು ಮಾಡುತ್ತದೆ‌..
ಇಷ್ಟನ್ನು ಸಹ ನಮ್ಮಿಂದ ಮಾಡಲು ಸಾಧ್ಯವಿಲ್ಲವೇ ! ಪ್ರಕೃತಿ ತನ್ನ ಕಷ್ಟ ಸಹಿಸಿ ನಮಗೆ ಸಹಾಯ ಮಾಡುತ್ತದೆ. ನಾವು ಆ ಪರಿಸರವನ್ನು ಉಳಿಸಲು ಇಷ್ಟೂ ಪ್ರಯತ್ನ ಪಡದಿದ್ದರೆ ನಮಗೆ ಕ್ಷಮೆಯೇ ಇಲ್ಲ..
ಯಾರು ಏನು ಮಾಡುತ್ತಿರೋ ಗೊತ್ತಿಲ್ಲ. ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಸರ್ಕಾರ ಮತ್ತು ಸ್ವಯಂಸೇವಾ ಸಂಸ್ಥೆಗಳು ಹಾಗೂ ಸಾಮಾನ್ಯ ಜನರು ದಯವಿಟ್ಟು ಇದನ್ನು ಒಂದು ದೊಡ್ಡ ಅಭಿಯಾನವಾಗಿ ಪ್ರಾರಂಭಿಸಿ, ಮಳೆಗಾಲದಲ್ಲಿ ಗಿಡ ನೆಟ್ಟರೆ, ನೀರು ಉಣಿಸುವ ತೊಂದರೆಯೂ ಇರುವುದಿಲ್ಲ. ಸಹಜವಾಗಿಯೇ ಮಳೆ ನೀರಿನಲ್ಲಿ ಅವು ಬೆಳೆಯುತ್ತವೆ. ಸ್ವಲ್ಪ ಸಸಿ ದೊಡ್ಡದಾಗುವವರೆಗೂ ಒಂದಷ್ಟು ಜಾಗೃತಿ ವಹಿಸಿದರೆ ಸಾಕು..
ಯೋಚಿಸಿ, ಏನನ್ನಾದರೂ ಮಾಡಿ. ಮುಂದಿನ ವರ್ಷಕ್ಕೆ ಇಷ್ಟೊಂದು ತಾಪಮಾನ ಹೆಚ್ಚಾಗದೆ ನಿಯಂತ್ರಿಸಲು ನಮ್ಮ ನಮ್ಮ ಕರ್ತವ್ಯ ನಿರ್ವಹಿಸೋಣ. ಈ ವರ್ಷದ ಭೀಕರ ಬಿಸಿಲನ್ನು ಮರೆಯುವುದು ಬೇಡ. ಅದು ಸದಾ ನೆನಪಾಗಿ ಗಿಡ ಬೆಳೆಸುವ ಕೆಲಸ ವೇಗ ಪಡೆಯಲಿ..
ಹಾಗೆಯೇ, ಫ್ಲೈ ಓವರ್ ಗಳು,
ಅನಾವಶ್ಯಕವಾದ ಉದ್ದುದ್ದ, ಹೆಚ್ಚು ಅಗಲದ ರಸ್ತೆಗಳು ಮುಂತಾದವುಗಳನ್ನು ಕಡಿಮೆ ಮಾಡಿ, ಆ ಜಾಗದಲ್ಲಿ ಕೆರೆಕಟ್ಟೆಗಳು, ಇಂಗು ಗುಂಡಿಗಳು ಮುಂತಾದ ನೀರಾವರಿ ಯೋಜನೆಗಳು, ನೀರಿನ ಸಂಗ್ರಹ ಕಾಲುವೆಗಳ ಬಗ್ಗೆ ಹೆಚ್ಚು ಗಮನಹರಿಸುವಂತೆ ಸ್ಥಳೀಯ ಜನರು ಅಲ್ಲಿನ ಆಡಳಿತ ಮತ್ತು ರಾಜಕೀಯ ವ್ಯವಸ್ಥೆಯನ್ನು ಒತ್ತಾಯಿಸಬೇಕಾಗುತ್ತದೆ. ಅಭಿವೃದ್ಧಿಯ ಪರಿಕಲ್ಪನೆಯನ್ನು ನಾವು ಬದಲಾಯಿಸಿಕೊಳ್ಳದಿದ್ದರೆ ಇಡೀ ದೇಶ ಸಿಮೆಂಟ್ ಕಾಡಾಗಿ ತಾಪಮಾನ, ಬರಗಾಲ ನಮ್ಮನ್ನು ನಿರಂತರವಾಗಿ ಕಾಡುತ್ತದೆ. ನಮ್ಮ ಮುಂದಿನ ಪೀಳಿಗೆಗೆ ನಾವು ಅತ್ಯಂತ ಅಪಾಯಕಾರಿ ವಾತಾವರಣವನ್ನು ಕೊಡುಗೆಯಾಗಿ ನೀಡಿದಂತಾಗುತ್ತದೆ.
ಅವರು ನಮ್ಮನ್ನು ಕ್ಷಮಿಸುವುದಿಲ್ಲ..

– ವಿವೇಕಾನಂದ. ಎಚ್.ಕೆ. ಬೆಂಗಳೂರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ
    In ವಿಶೇಷ ಲೇಖನ
  • ’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ
    In (ರಾಜ್ಯ ) ಜಿಲ್ಲೆ
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.