ವಿಜಯಪುರ: ಜಮೀನಿನ ತತ್ಕಾಲ್ ಪೋಡಿ ಮಾಡಲು ಲಂಚ ಪಡೆಯುತ್ತಿದ್ದ ಸರ್ವೇಯರ್ ಮತ್ತು ಖಾಸಗಿ ವ್ಯಕ್ತಿ ಲೋಕಾಯುಕ್ತರ ಬಲೆಗೆ ಸಿಲುಕಿದ ಘಟನೆ ವಿಜಯಪುರದಲ್ಲಿ ನಡೆದಿದೆ.
ಪ್ರಕಾಶ ಸಿಂಗೆ ಎಬುವರು ತಮ್ಮ ನಾಲ್ಕು ಎಕರೆ ಜಮೀನಿನ ತತ್ಕಾಲ ಪೋಡಿ ಮಾಡಲು ಅರ್ಜಿ ಸಲ್ಲಿಸಿದ್ದರು. ಆದರೆ, ಈ ಕೆಲಸಕ್ಕಾಗಿ ಸರ್ವೇಯರ್ ಮಲ್ಲಪ್ಪ ಜಂಬಗಿ ಮತ್ತು ಖಾಸಗಿ ಸಹಾಯಕ ಗುರುದತ್ತ ಬಿರಾದಾರ ಅವರು ರೂ. 47,500 ಲಂಚ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಪ್ರಕಾಶ ಸಿಂಗೆ ಲೋಕಾಯುಕ್ತರ ಮೊರೆ ಹೋಗಿದ್ದರು.
ಈ ಮಧ್ಯೆ ತತ್ಕಾಲ ಪೋಡಿ ಮಾಡಿಕೊಡಲು ಲಂಚ ಪಡೆಯುವಾಗ ಧಾಳಿ ನಡೆಸಿದ ಪೊಲೀಸರು ಸರ್ವೇಯರ್ ಮಲ್ಲಪ್ಪ ಜಂಬಗಿ ಮತ್ತು ಖಾಸಗಿ ಸಹಾಯಕ ಗುರುದತ್ತ ಬಿರಾದಾರ ಅವರನ್ನು ಬಂಧಿಸಿದ್ದಾರೆ. ಅಲ್ಲದೇ, ರೂ. 47,500 ಹಣವನ್ನು ವಶಪಡಿಸಿಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

