Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರಲ್ಲಿ ಮಂದಹಾಸ ಮೂಡಿಸಿದ ಕೃತ್ತಿಕಾ ಮಳೆ.
(ರಾಜ್ಯ ) ಜಿಲ್ಲೆ

ರೈತರಲ್ಲಿ ಮಂದಹಾಸ ಮೂಡಿಸಿದ ಕೃತ್ತಿಕಾ ಮಳೆ.

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಂಪೆರೆದ ಮಳೆ | ಕೃಷಿ ಚಟುವಟಿಕೆ ಚುರುಕು | ಉತ್ತಮ ಮಳೆ-ಬೆಳೆಯ ನಿರೀಕ್ಷೆ

– ಇಲಾಹಿ ಇ. ಜಮಖಂಡಿ
ಚಿಮ್ಮಡ: ಕಳೆದ ನಾಲ್ಕು ದಿನಗಳಲ್ಲಿ ಸುರಿದ ಮಳೆಯಿಂದ ಕೆಂಡದಂತಾಗಿದ್ದ ಈ ಭಾಗದ ವಾತಾವರಣ ತಂಪೆರೆದಂತಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಖುಷಿಯಿಂದಲೇ ಅವರು ಬಿತ್ತನೆ ಕಾರ್ಯಕ್ಕೆ ಅಣಿಯಾಗಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಜಮೀನಗಳನ್ನು ಹದಮಾಡಿ ಗದ್ದೆಗಳಲ್ಲಿ ತಿಪ್ಪೆಗೊಬ್ಬರವನ್ನು ಮಿಶ್ರಣಗೊಳಿಸಿಕೊಂಡು ಮಳೆಗಾಗಿ ಜಾತಕ ಪಕ್ಷಿಯಂತೆ ಕಾಯುತಿದ್ದ ರೈತರಿಗೆ ಕಳೆದ ಮಂಗಳವಾರ ಹಾಗೂ ಗುರುವಾರ ರಾತ್ರಿ ಸುರಿದ ಮಳೆ ಅವರಲ್ಲಿ ಆಶಾ ಭಾವನೆ ಮೂಡಿಸಿದ್ದು ವರುಣದೇವನ ಮೇಲೆ ಭಾರ ಹಾಕಿ ಬಹುತೇಕ ರೈತರು ಕೃಷಿ ಚಟುವಟಿಕೆ ಪ್ರಾರಂಭಿಸಿದ್ದಾರೆ.
ಕಳೆದ ಎಪ್ರಿಲ್ ನಲ್ಲಿಯೇ ಸುರಿಯುವ ಅಶ್ವಿನಿ, ಭರಣಿ ಮಳೆಗಳು ಕೈಕೊಟ್ಟರೂ ಮುಂಗಾರು ಪೂರ್ವ ಕೃತ್ತಿಕಾ ಮಳೆ ಪ್ರಾರಂಭಗೊಂಡಿದ್ದು ರೈತರಲ್ಲಿ ಉತ್ತಮ ಮಳೆ, ಬೆಳೆಯ ನಿರೀಕ್ಷೆ ಮೂಡಿಸಿದೆ.
ಈ ಬಾರಿಯೂ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಇಲ್ಲಿನ ಘಟಪ್ರಭಾ ಎಡದಂಡೆ ಕಾಲುವೆಗೆ ಹತ್ತು ದಿನದಗಳಂತೆ ಎರಡುಬಾರಿ ನೀರು ಹರಿಸಿದ್ದರಿಂದ ಈ ಭಾಗದ ಕೆರೆಗಳು ಭರ್ತಿಯಾಗಿದ್ದು ಬಾವಿ, ಕೊಳವೆ ಬಾವಿಗಳ ಅಂತರ್ಜಲಮಟ್ಟ ಹೆಚ್ಚಿದೆ, ಪ್ರಸಕ್ತ ಮಳೆಯೂ ಈ ಭಾಗದಲ್ಲಿ ರಣಬಿಸಿಲ ತಾಪದಿಂದ ತತ್ತರಿಸುತಿದ್ದ ಜನರಿಗೆ ಧಗೆಯಿಂದ ಮುಕ್ತಿ ದೊರೆತಂತಾಗಿದ್ದು ಬಹುತೇಕ ರೈತರು ಬಿತ್ತನೆ ಕಾರ್ಯವನ್ನು ಚುರುಕುಗೊಳಿಸಿದ್ದು. ಇದರಿಂದ ಕಳೆದ ಎರಡು ತಿಂಗಳಿನಿಂದ ಕೆಲಸವಿಲ್ಲದೆ ಕಂಗಾಲಾಗಿದ್ದ ಕೂಲಿಕಾರರಿಗೂ ಕೆಲಸ ದೊರೆತಂತಾಗಿದ್ದು ಅವರೂ ಖುಷಿಯಿಂದಲೇ ಗದ್ದೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ.

“ರೈತರು ಈಗಷ್ಟೆ ಜಮೀನು ಹದಗೊಳಿಸುವ ಕಾರ್ಯ ಆರಂಭಿಸಿದ್ದು ಕೃಷಿ ಇಲಾಖೆಯಿಂದ ಇನ್ನೆರಡು ದಿನದಲ್ಲಿ ಬಿತ್ತನೆ ಬೀಜಗಳಾದ ಹೆಸರು, ಉದ್ದು, ಸೋಯಾಬಿನ್, ಗೋವಿನಜೋಳ, ಸೇರಿದಂತೆ ಹಲವು ಬೀಜಗಳು ಹಾಗೂ ಬೆಳೆಗೆ ಅಗತ್ಯವಿರುವ ಲಘು ಪೋಷಕಾಂಶಗಳ ದಾಸ್ತಾನು ಬರಲಿದೆ. ರೈತರು ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಹೊರಗಡೆಯಿಂದ ಖರೀದಿಸುವ ಅವಶ್ಯವೆನಿಸಿದರೆ ಅಧಿಕೃತ ಪರವಾನಿಗೆ ಪಡೆದ ಮಳಿಗೆಗಳಲ್ಲಿ ಮಾತ್ರ ಖರೀದಿಸಬೇಕು ಅಧಿಕೃತ ಬಿಲ್ಲುಗಳನ್ನು ಪಡೆಯಬೇಕು.
– ಎಸ್.ಎಂ. ಬಿರಾದಾರ
ಕೃಷಿ ಅಧಿಕಾರಿಗಳು, ತೇರದಾಳ ವಲಯ.

” ಮುಂಗಾರು ಪೂರ್ವ ಮಳೆ ಸಮರ್ಪಕವಾಗಿ ಸುರಿಯುವ ಆಶಾಭಾವಣೆಯಿಂದ ಇದ್ದರೂ ಬಾವಿ, ಬೊರವೆಲ್‌ಗಳ ಆಸರೆಯಿರುವ ರೈತರು ಅರಿಷಿನ, ಕಬ್ಬು ಬಿತ್ತನೆ ಮಾಡಿದ್ದು ಮಳೆಯನ್ನೆ ನಂಬಿರೈತರು ಗೋವಿನಜೋಳ ಸೇರಿದಂತೆ ಹಲವು ಮಿಶ್ರ ಬೆಳೆಗಳ ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ ಮುಂಬರುವ ಮಳೆಗಳು ಸಮರ್ಪಕವಾಗಿ ಸುರಿದರೆ ಬರಗಾಲ ಛಾಯೆಯಿಂದ ರೈತರು ಹೊರಬರಲಿದ್ದಾರೆ.”
– ಸುರೇಶ ಅಥಣಿ ಪ್ರಗತಿಪರ ರೈತರು, ಚಿಮ್ಮಡ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ
    In (ರಾಜ್ಯ ) ಜಿಲ್ಲೆ
  • ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ
    In (ರಾಜ್ಯ ) ಜಿಲ್ಲೆ
  • ಶಾಸಕ ಮನಗೂಳಿ ಯಿಂದಅಹವಾಲು ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಇಂದು ವ್ಯಸನಮುಕ್ತ ಶಿಬಿರದ ಸಮಾರೋಪ :ಅಲ್ಲಾಪೂರ
    In (ರಾಜ್ಯ ) ಜಿಲ್ಲೆ
  • ಸಿಂದಗಿ: ಇಂದು ವಿದ್ಯುತ್ ವ್ಯತ್ಯೆಯ
    In (ರಾಜ್ಯ ) ಜಿಲ್ಲೆ
  • ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಈ ಜಗವೆಲ್ಲ..
    In ವಿಶೇಷ ಲೇಖನ
  • ಕುಡಿವ ನೀರಿನ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಶರಣ ಭೋಗಣ್ಣನವರ ಕುರಿತು ಸಂಶೋಧನೆ ಅಗತ್ಯ :ಗೋಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.