Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೊನ್ನೆಯಿಂದ ಆರಂಭಿಸಿದ ಕಾರ್ಯ ಖಂಡಿತ ಯಶಸ್ವಿ :ನ್ಯಾ.ಕುಂದರ್
(ರಾಜ್ಯ ) ಜಿಲ್ಲೆ

ಸೊನ್ನೆಯಿಂದ ಆರಂಭಿಸಿದ ಕಾರ್ಯ ಖಂಡಿತ ಯಶಸ್ವಿ :ನ್ಯಾ.ಕುಂದರ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನ್ಯಾಯಾಧೀಶ ಸಂತೋಷ ಎಸ್ ಕುಂದರ್ ರಿಗೆ ಕಾವ್ಯಾರ್ಪಣೆ ಮೂಲಕ ಬೀಳ್ಕೊಡುಗೆ

ವಿಜಯಪುರ: ಸೊನ್ನೆಯಿಂದಲೇ ಪರಿಶ್ರಮಿಸಿ ಆರಂಭಿಸಿದ ಕಾರ್ಯ ನೂರಕ್ಕೆ ನೂರು ಯಶಸ್ವಿ ಆಗಲು ಸಾಧ್ಯವಾಗುತ್ತದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾಯಾಧೀಶ ಸಂತೋಷ ಎಸ್ ಕುಂದರ್ ಅವರು ಹೇಳಿದರು.
ನ್ಯಾಯಾಧೀಶರಾದ ಕುಂದರ ಅವರು ವರ್ಗಾವಣೆ ಆಗಿರುವ ನಿಮಿತ್ಯ ಅವರಿಗೆ ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರೊಬೊನೊ, ಪೆನಲ್, ಡಿಫೆನ್ಸ್ ಕೌಂಸಿಲ್, ಮದ್ಯಸ್ಥಗಾರ ವಕೀಲರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಸಭಾಂಗಣದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಕಾವ್ಯಾರ್ಪಣೆ ಮತ್ತು ಸನ್ಮಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.
ಸಮಾಜದಲ್ಲಿರುವ ವಿವಿಧ ಕಾಯಕ ನಿರತರು ತಮ್ಮ ಕಾರ್ಯವನ್ನು ಪ್ರಮಾಣಿಕವಾಗಿ ನೂರಕ್ಕೆ ನೂರರಷ್ಟು ಅದರಲ್ಲೇ ತಲ್ಲೀನರಾಗಿ ಶ್ರಮಿಸಿದರೆ ಯಶಸ್ಸು ಹುಡುಕಿಕೊಂಡು ಬರುತ್ತದೆ, ನಾವು ಮಾಡುವ ಕೆಲಸ ಸಮಾಜಕ್ಕೆ ದಾರಿ ದೀಪವಾಗಬೇಕು ಎಂದ ಅವರು ವಿಜಯಪುರದ ಜನರ ಹೃದಯ ವಿಶಾಲತೆ ಮೆಚ್ಚುವಂತಹದ್ದು, ಇಲ್ಲಿಯ ಉತ್ತಮ ಸಂಸ್ಕಾರ ಶ್ಲಾಘನಿಯ ಎಂದು ಬಣ್ಣಿಸಿದ ಅವರು ವಿಜಯಪುರ ಜಿಲ್ಲಾ ಕಾನೂನು ಸೇವ ಪ್ರಾಧಿಕಾರಕ್ಕೆ ಪ್ರೊಬೊನೊ ವಕಿಲರನ್ನು ಅಂದರೆ ಯಾವುದೇ ಗೌರವ ಧನವಿಲ್ಲದೇ ಉಚಿತವಾಗಿ ಕಾನೂನು ಸೇವೆ ಮಾಡುವ ಜನಸ್ನೇಹಿ [ಪ್ರೊಬೊನೊ] ವಕೀಲರನ್ನು ನನ್ನ ಕಾರ್ಯಾವಧಿಯಲ್ಲಿ ನೇಮಿಸಿದ್ದು, ಅದರಲ್ಲೂ ಹಿರಿಯ ನ್ಯಾಯವಾದಿ ಮಲ್ಲಿಕಾರ್ಜುನ ಭೃಂಗಿಮಠ ಅವರು ಜಿಲ್ಲೆಯಲ್ಲಿ ಪ್ರಥಮವಾಗಿ ಪ್ರೊಬೊನೊ ವಕೀಲರಾಗಿ ನೇಮಕವಾದ ವಕೀಲರಾಗಿದ್ದಾರೆ. ಅಲ್ಲದೇ ಇತರೇ ಇಬ್ಬರನ್ನು ಸಹ ನೇಮಿಸಲಾಗಿದ್ದು, ರಾಜ್ಯ ಕಾನೂನು ಸೇವಾ ಪ್ರಾಧಿಕಾರದಿಂದ ನೇಮಕಾತಿ ಮಾನ್ಯವಾಗಿದ್ದು ವಿಶೇಷವಾಗಿದೆ ಎಂದ ಅವರು ಜಿಲ್ಲೆಯಲ್ಲಿ ಕಾನೂನು ಸೇವಾ ಪ್ರಾಧಿಕಾರ ಜನಸ್ನೇಹಿ ಆಗಿ ಕಾರ್ಯ ನಿರ್ವಹಿಸಿದ್ದು ಜನರು ಸಹ ಉತ್ತಮ ಸಹಕಾರ ನೀಡಿದ್ದಾರೆ ಎಂದರು.
ಇನ್ನೋರ್ವ ಹಿರಿಯ ಶ್ರೇಣಿ ನ್ಯಾಯಾಧೀಶೆ ಶ್ರೀಮತಿ ಕೆ ಉಮಾ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ವಿಜಯಪುರಕ್ಕೆ ಬರುವಾಗ ಇಲ್ಲಿನ ಭಾಷೆ ಮತ್ತು ಜನರ ಕುರಿತು ಸ್ವಲ್ಪ ಆತಂಕ ಮನದಲ್ಲಿತ್ತು ಆದರೆ ಇಲ್ಲಿ ಬಂದು ಮೂರು ವರ್ಷ ಸೇವೆ ಸಲ್ಲಿಸಿದ ನಂತರ ಇಲ್ಲಿನ ಜನರಲ್ಲಿ ನ್ಯಾಯದ ಬಗ್ಗೆ ನ್ಯಾಯಾಲಯದ ಬಗ್ಗೆ ಇರುವ ಗೌರವ ಹೆಮ್ಮೆ ಕಂಡು ನಮಗೆ ಇನ್ನು ಉತ್ತಮವಾಗಿ ಕೆಲಸ ಮಾಡಲು ಸಾಧ್ಯವಾಯಿತು ಎಂದರು.
ಹಿರಿಯ ಪ್ರೊಬೋನೋ ನ್ಯಾಯವಾದಿ ಮಲ್ಲಿಕಾರ್ಜುನ ಜಿ ಭೃಂಗಿಮಠ ಅವರು ಕಾವ್ಯಭಾಷೆಯಲ್ಲೇ ಮಾತನಾಡಿ, ನ್ಯಾಯಾಧೀಶರಾದ ಕುಂದರ ಅವರು ಜಿಲ್ಲೆಯಲ್ಲಿ ಆಡದೇ ಕೆಲಸ ಮಾಡಿ ತೋರಿಸಿದ ಸಾಧಕರು, ಅವರ ಅವಧಿಯಲ್ಲಿ ಪ್ರಾಧಿಕಾರವು ಜನರಿಗೆ ಕಾನೂನು ಅರಿವು ನೆರವು ನೀಡುವುದರ ಜೊತೆಗೆ ಅಲ್ಲಲ್ಲಿ ಇದ್ದ ಸಾಮಾಜಿಕ ಸಮಸ್ಸೆಗಳನ್ನು ಬಗೆ ಹರಿಸುವಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ವಿಜಯಪುರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಇತಿಹಾಸದಲ್ಲೇ ಪ್ರೊಬೊನೋ ವಕೀಲರನ್ನು ನೇಮಿಸಲು ಕಾರಣಿಗರಾದ ಕೀರ್ತಿ ಇವರ ಅವಧಿಗೆ ಸಲ್ಲುತ್ತದೆ ಎಂದರು.
ನ್ಯಾಯವಾದಿಗಳಾದ ಆರ್.ಎಸ್. ನಂದಿ, ಲಾಹೋರಿ, ಬಸವರಾಜ ಮಠ ಹಾಗೂ ಮಸೂತಿ ಮಾತನಾಡಿದರು.
ಕಾನೂನು ಮಹಾವಿದ್ಯಾಯದ ಪ್ರಾಚಾರ್ಯೆ ಸುಮಾ ದೇಸಾಯಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ವಕೀಲರ ಸಂಘದ ಗೌರವ ಕಾರ್ಯದರ್ಶಿ ಅಶೋಕ ಜೈನಾಪೂರ ವಂದಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿಗಳಾದ ಕೆ.ಎಫ್. ಅಂಕಲಗಿ, ರಾಜು ಬಿದರಿ ಮುಂತಾದವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.