ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಹಿರೇಮಠದ ಶತಾಯುಷಿ ಲಿಂ.ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ೪೧ ನೇ ಪುಣ್ಯಸ್ಮರಣೋತ್ಸವ ಹಾಗೂ ಪಂಚಭಾಷಾ ಪಂಡಿತರಾಗಿದ್ದ ಲಿಂ.೨೦೦೮ ಜಗದ್ಗುರು ಡಾ.ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ ೧೧ ನೇ ಜಾತ್ರಾಮಹೋತ್ಸವದಂಗವಾಗಿ ಮೇ. ೨೩ ರಿಂದ ರೋಣ ತಾಲೂಕಿನ ಹೊನ್ನಿಗನೂರಿನ ವಿರುಪಾಕ್ಷ ಶಾಸ್ತ್ರೀ ಅವರಿಂದ ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಪುರಾಣವನ್ನು ಪ್ರತಿನಿತ್ಯ ಸಂಜೆ ೭ ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಮೇ. ೨೩ ರಂದು ಸಂಜೆ ೭ ಗಂಟೆಗೆ ಪುರಾಣ ಪ್ರಾರಂಭೋತ್ಸವದ ಸಾನಿಧ್ಯವನ್ನು ಶ್ರೀಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ವಹಿಸುವರು. ಅತಿಥಿಗಳಾಗಿ ಜೆಡಿಎಸ್ ಮುಖಂಡ ಅಪ್ಪುಗೌಡ ಪಾಟೀಲ ಆಗಮಿಸುವರು. ಅಧ್ಯಕ್ಷತೆಯನ್ನು ವ್ಹಿಡಿಸಿಸಿ ಬ್ಯಾಂಕಿನ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ ವಹಿಸುವರು. ಮನಗೂಳಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಜನರು ಪುರಾಣ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
