ಬಸವನಬಾಗೇವಾಡಿ: ಪಟ್ಟಣದ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಅಶೋಕ ಚಲವಾದಿ ಅವರ ನಿವಾಸದಲ್ಲಿ ಬುದ್ಧ ಪೂರ್ಣಿಮಯಂಗವಾಗಿ ಗುರುವಾರ ಗೌತಮ ಬುದ್ಧರ ೨೫೬೧ ನೇ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಜಯಂತಿಯಂಗವಾಗಿ ಗೌತಮ ಬುದ್ಧ, ಡಾ.ಅಂಬೇಡ್ಕರ ಅವರ ಪ್ರತಿಮೆಗಳಿಗೆ ಪೂಜೆ ಸಲ್ಲಿಸಲಾಯಿತು.
ಅಶೋಕ ಚಲವಾದಿ ಮಾತನಾಡಿ, ಬುದ್ಧ ಪೌರ್ಣಮಿಯು ಅತ್ಯಂತ ವಿಶೇಷ ಮತ್ತು ಪವಿತ್ರ ದಿನವಾಗಿದೆ. ಬುದ್ಧ ಪೌರ್ಣಮಿಯ ಭಗವಾನ್ ಬುದ್ಧನ ಜನ್ಮ, ಬೋಧನ ಮತ್ತು ಮಹಾಪರಿನಿರ್ವಾಣವನ್ನು ನೆನಪಿಸುವ ಪ್ರಮುಖ ಬೌದ್ಧ ಹಬ್ಬವಾಗಿದೆ. ಇದು ಶಾಂತಿ, ಕರುಣೆ ಮತ್ತು ಪ್ರeಯ ಆಧ್ಯಾತ್ಮಿಕ ಮೌಲ್ಯಗಳನ್ನು ಪ್ರತಿನಿಧಿಸುತ್ತದೆ ಎಂದರು. ಈ ಸಂದರ್ಭದಲ್ಲಿ ವಿಠ್ಠಲ ಚಲವಾದಿ, ಪ್ರಜ್ವಲ ನಂದಿ, ಗಂಗಾ ನಂದಿ, ಪ್ರಿಯಾಂಕಾ ನಂದಿ, ಪೂಜಾ ನಂದಿ, ಅನಿತಾ ನಂದಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

