ಬಸವನಬಾಗೇವಾಡಿ: ಪಟ್ಟಣದಲ್ಲಿ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಅಡಿಯಲ್ಲಿ ನಡೆಯುತ್ತಿರುವ ಬಸವೇಶ್ವರ ದೇವಾಲಯ ಆಂಗ್ಲ ಮಾಧ್ಯಮ ಶಾಲೆಗೆ ಅಗತ್ಯವಿರುವ ಎರಡು ಬಸ್ಗಳನ್ನು ಕೂಡಲಸಂಗಮ ಅಭಿವೃದ್ಧಿ ಮಂಡಳಿ ನೀಡಿದೆ. ಈ ಶಾಲೆಗೆ ಸುತ್ತಮುತ್ತಲಿಂದ ಬರುವ ವಿದ್ಯಾರ್ಥಿಗಳಿಗೆ ಈ ಬಸ್ಗಳು ನೆರವಾಗುತ್ತವೆ ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿ ಆಯುಕ್ತ, ಹುನಗುಂದ ತಹಸೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.
ಪಟ್ಟಣದ ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಅಡಿಯಲ್ಲಿರುವ ಬಸವೇಶ್ವರ ದೇವಾಲಯ ಅಂತರಾಷ್ಟ್ರೀಯ ಶಾಲೆಗೆ ನೂತನವಾಗಿ ಬಂದಿರುವ ಎರಡು ಬಸ್ಗಳ ಪೂಜೆ ನೆರವೇರಿದ ನಂತರ ಚಾಲನೆ ನೀಡಿ ಮಾತನಾಡಿದ ಅವರು, ಈ ಭಾಗದ ಮಕ್ಕಳಿಗೆ ಉತ್ತಮ ಆಂಗ್ಲ ಮಾಧ್ಯಮ ಶಾಲೆ ಇರದೇ ಇರುವದನ್ನು ಗಮನಿಸಿದ ಆಗಿನ ಮಂಡಳಿ ವಿಶೇಷಾಽಕಾರಿ, ನಿವೃತ್ತ ಐಎಎಸ್ ಅಧಿಕಾರಿ ಡಾ.ಎಸ್.ಎಂ.ಜಾಮದಾರ ಅವರು ಈ ಶಾಲೆಯನ್ನು ಆರಂಭಿಸುವ ಮೂಲಕ ಈ ಭಾಗದ ಮಕ್ಕಳಿಗೆ ಉತ್ತಮ ಆಂಗ್ಲ ಮಾಧ್ಯಮ ಶಾಲೆ ನೀಡಿದ್ದಾರೆ. ಈ ಶಾಲೆಯು ಪ್ರಗತಿಯತ್ತ ನಡೆಯುತ್ತಿದೆ. ಇದೀಗ ಮಂಡಳಿಯು ಈ ಶಾಲೆಗೆ ಬರುವ ಸುತ್ತಮುತ್ತಲಿನ ಮಕ್ಕಳಿಗೆ ನೆರವಾಗುವ ಉದ್ದೇಶದಿಂದ ಎರಡು ಬಸ್ಗಳನ್ನು ನೀಡಿದೆ.ಎಲ್.ಕೆ.ಜಿ., ಯು.ಕೆ.ಜಿ. ಮಕ್ಕಳಿಗೆ ಉಚಿತವಾಗಿ ಬಸ್ ಸೌಲಭ್ಯ ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಬಸ್ ಸೌಲಭ್ಯ ಒದಗಿಸಲಾಗುವುದು. ಶಾಲೆಗೆ ಬೇಕಾಗುವ ಅಗತ್ಯ ಸೌಲಭ್ಯಗಳನ್ನು ಮಂಡಳಿಯಿಂದ ನೀಡಲಾಗುವದು. ಮುಂದಿನ ದಿನಗಳಲ್ಲಿ ಶಿಕ್ಷಕ ಬಾಂಧವರು ಉತ್ತಮ ಗುಣಮಟ್ಟ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ತಯಾರು ಮಾಡಬೇಕೆಂದರು.
ಗೌರಿಶಂಕರ ಚರಂತಿಮಠ ಬಸ್ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಂಡಳಿಯ ತಹಸೀಲ್ದಾರ ಜೆ.ಎಸ್.ಚಿನಿವಾಲರ, ಲೆಕ್ಕ ಅಧಿಕ್ಷಕ ಬಸವರಾಜ ಕಳ್ಳಿ, ಶಾಲೆಯ ಪ್ರಾಚಾರ್ಯೆ ಆರ್.ಎಂ.ರೋಣದ, ಎಸ್.ಎಂ.ಬಿಸ್ಟಗೊಂಡ, ಎಸ್.ಎ.ತಾಂಬೆ, ಎ.ಕೆ.ಕುಲಕರ್ಣಿ, ಜೆ.ಬಿ.ಕರಭಂಟನಾಳ, ವೈ.ಡಿ.ದೊಡ್ಡಮನಿ, ಎಸ್.ಪಿ.ಸಾಳುಂಕೆ,ಮಹೇಶ ಹುಮನಾಬಾದ, ಬಿ.ಎನ್.ಹಂಚಲಿ, ಅಮಿತ ಕಮ್ಮಾರ, ಮಹೇಶ ಪತ್ತಾರ, ಎಂ.ಟಿ.ಸಂಗಮ ಇತರರು ಇದ್ದರು. ಈ ಸಂದರ್ಭದಲ್ಲಿ ಹಾಜರಿದ್ದ ವಿದ್ಯಾರ್ಥಿಗಳು ಶಾಲೆಗೆ ಬಸ್ ಬಂದಿರುವದನ್ನು ಕಂಡು ಸಂಭ್ರಮಿಸಿದರು.
ನಂತರ ಕೂಡಲಸಂಗಮ ಅಭಿವೃದ್ಧಿ ಮಂಡಳಿ ಆಯುಕ್ತ ನಿಂಗಪ್ಪ ಬಿರಾದಾರ ಅವರು ವಿದ್ಯಾರ್ಥಿಗಳೊಂದಿಗೆ ಬಸ್ನಲ್ಲಿ ಒಂದು ಸುತ್ತು ಹೋಗಿ ಬಂದರು.
Subscribe to Updates
Get the latest creative news from FooBar about art, design and business.
Related Posts
Add A Comment

