ಬಸವನಬಾಗೇವಾಡಿ: ಮೂಲತಃ ತಾಲೂಕಿನ ನಾಗೋಡ ಗ್ರಾಮದವರಾದ ಸ್ಥಳೀಯ ಸಾಹಿತಿ, ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರಭಾಕರ ಖೇಡದ ಅವರು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ನೀಡುವ ಚುಟುಕು ದಾಸೋಹಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನಿಂದ ವಿವಿಧ ಸಾಹಿತ್ಯ ಅಭಿಯಾನಗಳ ಕೈಗೊಳ್ಳುವ ಮೂಲಕ ಸಾಹಿತ್ಯ ಸೇವೆ, ಸುದ್ದಿ ಸೇವೆಯ ನಿರಂತರ ಅಭಿಯಾನಗಳನ್ನು ಮಾಡಿರುವುದು, ಚುಟುಕು ಸಾಹಿತ್ಯ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ ಸಾಹಿತ್ಯಕ್ಕೆ ಕೊಡುಗೆ ನೀಡಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರಶಸ್ತಿಯನ್ನು ಮೇ. ೨೬ ರಂದು ಬೆಳಗ್ಗೆ ೧೦ ಗಂಟೆಗೆ ಶಿರಸಿಯ ನೆಮ್ಮದಿ ಆವರಣದ ರಂಗಧಾಮ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ೧೨ ನೇ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

