ಸಿಂದಗಿ: ಜಿಲ್ಲೆಯಲ್ಲಿ ಅಹಿಂದ ಚಳುವಳಿಯನ್ನು ಜೀವಂತವಾಗಿಟ್ಟು ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ, ಪ್ರಾಮಾಣಿಕವಾಗಿ ಜಿಲ್ಲೆಯಾದ್ಯಂತ ಅಹಿಂದ ವರ್ಗಗಳ ಧ್ವನಿಯಾಗಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ ಹಿರಿಯ ಹೋರಾಟಗಾರರು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಅವರಿಗೆ ವಿಧಾನ ಪರಿಷತ್ ಪ್ರವೇಶಿಸಲು ಅವಕಾಶ ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೋದಿನ್ ಶಾಬಾದಿ ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲಿ ಅಹಿಂದ ಸಮುದಾಯ ರಾಜಕೀಯದಿಂದ ವಂಚಿತವಾಗಿದ್ದು, ಅಹಿಂದರ ಶಕ್ತಿಯನ್ನು ದುರ್ಬಲಗೊಳಿಸಲು ಹಲವಾರು ಕುತಂತ್ರಗಳು ನಡೆಯುತ್ತಿವೆ. ಕಾರಣ ಅಹಿಂದ ಸಮುದಾಯಗಳಿಗೆ ನ್ಯಾಯ ಒದಗಿಸಿದಂತಾಗುತ್ತದೆ. ಅಹಿಂದ ಮತಗಳಿಂದ ಅಧಿಕಾರಕ್ಕೆ ಬಂದ ಸರ್ಕಾರ ಪ್ರಾಮಾಣಿಕವಾಗಿ ದುಡಿಯುವ ಅಹಿಂದ ನಾಯಕರಿಗೆ ಅಧಿಕಾರ ನೀಡುವ ವ್ಯವಸ್ಥೆ ಮಾಡಬೇಕು. ಅಲ್ಲದೇ ಬಿಜೆಪಿಯ ಟೀಕೆಗಳಿಗೆ ಸಮರ್ಥವಾಗಿ ಉತ್ತರಿಸುವ ನಾಯಕನನ್ನು ಅಹಿಂದರ ಧ್ವನಿಯಾಗಿ ಗುರುತಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

