Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಚೌಕಟ್ಟನ್ನು ಮೀರಿ ಯೋಚಿಸಿ
ವಿಶೇಷ ಲೇಖನ

ಚೌಕಟ್ಟನ್ನು ಮೀರಿ ಯೋಚಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

-ಪ್ರೊ.ಧರ್ಮರಾಜ ಕುಂಬಾರ ಉಪನ್ಯಾಸಕರು ಮತ್ತು ಉದ್ಯೋಗ ತರಬೇತಿ ಅಧಿಕಾರಿ

ಒಬ್ಬ ನಾಯಕನಾಗಲಿ, ವಿದ್ಯಾರ್ಥಿಯಾಗಲಿ, ಅಥವಾ ಒಂದು ಸಂಸ್ಥೆಯ ಚುಕ್ಕಾಣಿ ಹಿಡಿದಂತ ನಾಯಕನೇ ಆಗಲಿ ಯಾವತ್ತೂ ಚೌಕಟ್ಟನ್ನು ಮೀರಿ ಯೋಚಿಸುವ ಶಕ್ತಿ ಹೊಂದಿರಬೇಕು ಅದನ್ನೇ ನಾವು Thinking out of box ಎನ್ನುತ್ತೇವೆ.
ಏಕೆಂದರೆ ಚೌಕಟ್ಟಿನ ಹೊರಗೆ ಯೋಚಿಸುವುದು ಸೃಜನಶೀಲತೆ ಮತ್ತು ನಾವೀನ್ಯತೆಯನ್ನು ನಮ್ಮೊಳಗೆ ನಮ್ಮ ಅರಿವಿಲ್ಲದಂತೆಯೇ ಬೆಳೆಯಲು ನಮಗೆ ಸಹಾಯ ಮಾಡುತ್ತದೆ, ಇದು ಸಾಮಾನ್ಯವಾಗಿ ಹೊಸ ಮತ್ತು ಸುಧಾರಿತ ಯೋಚನೆಗಳೊಂದಿಗೆ ಅತ್ಯುತ್ತಮ ಸೇವೆ ನೀಡಲು ಕಾರಣವಾಗುತ್ತದೆ. ಅದಲ್ಲದೆ ಸಮಸ್ಯೆಗಳನ್ನು ಅತ್ಯುತ್ತಮ ರೀತಿಯಲ್ಲಿ ಪರಿಹರಿಸುವ ಮೂಲಕ ಸಂವಹನ ಕೌಶಲ್ಯವನ್ನು ಕೂಡ ಪರಿಣಾಮಕಾರಿಯಾಗಿಸುತ್ತದೆ.Thinking out of Box ಎನ್ನುವುದು ಸುಲಭವಲ್ಲ ಏಕೆಂದರೆ ನಾವು ನಮ್ಮ comfort zone ಇಂದ ಮೊದಲು ಹೊರಗೆ ಬರಬೇಕು. ಚೌಕಟ್ಟಿನೊಳಗೆ ಎಲ್ಲರೂ ಆರಾಮವಾಗಿ ಇರುತ್ತಾರೆ. ಒಬ್ಬ ಮನುಷ್ಯ ಚೌಕಟ್ಟನ್ನು ಮೀರಿ ಹೊರಗೆ ಬಂದಾಗ ಸಮಸ್ಯೆಗಳಿಗೆ ವಿಭಿನ್ನ ರೀತಿಯಲ್ಲಿ ಪರಿಹಾರ ಕೊಂಡುಕೊಳ್ಳುತ್ತಾನೆ. ಅದೇ ರೀತಿ ಒಬ್ಬ ನಾಯಕ ಯಶಸ್ವಿ ನಾಯಕನಾಗುತ್ತಾನೆ. ಹೆಚ್ಚಿನ ಜನರು ಸವಾಲುಗಳನ್ನು ಸ್ವೀಕರಿಸಲು ಇಷ್ಟಪಡದ ಕಾರಣ ಚೌಕಟ್ಟನ್ನು ಮೀರಿ ಯೋಚಿಸಲು ಹಿಂದೇಟು ಹಾಕುತ್ತಾರೆ. ಚೌಕಟ್ಟನ್ನು ಮೀರಿ ಯೋಚಿಸುವುದು ಅಷ್ಟು ಸುಲಭವಲ್ಲ ಏಕೆಂದರೆ ಅದಕ್ಕೆ ಪೂರಕವಾದ ವಾತಾವರಣ ಮತ್ತು ಮೇಲಾಧಿಕಾರಿಗಳ ಬೆಂಬಲ ಕೂಡ ಅಷ್ಟೇ ಅತ್ಯಗತ್ಯ. ಅದಲ್ಲದೆ ಸಮಾಜವು ಅಲಿಖಿತ ನಿಯಮಗಳಿಂದ ತುಂಬಿದೆ, ಅದನ್ನು ನಮ್ಮಲ್ಲಿ ಅನೇಕರು ಚಿಕ್ಕ ವಯಸ್ಸಿನಿಂದಲೇ ಅನುಸರಿಸಲು ಕಲಿಸುತ್ತಾರೆ.


ಚೌಕಟ್ಟನ ಮೀರಿ ಯೋಚಿಸುವುದರಿಂದ ನಮಗೆ ಹಲವಾರು ಲಾಭಗಳು ಇವೆ-
1.ಸಮಸ್ಯೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಪರಿಹರಿಸಲು ಸಹಾಯ ಮಾಡುತ್ತದೆ.
2.ನಮಗೆ ಅರಿವಿಲ್ಲದೆ ನಮ್ಮ ಕಾರ್ಯ ಕ್ಷಮತೆಯನ್ನು ಹೆಚ್ಚಿಸುತ್ತದೆ.
3.ತಂಡದ ಸದಸ್ಯರೊಂದಿಗೆ ಸಂವಹನ ಕಲೆಯನ್ನು ಉತ್ತಮಗೊಳಿಸುತ್ತದೆ
4.ನಮ್ಮ ಸ್ಪರ್ಧಿಗಳಿಗಿಂತ ಬಲಶಾಲಿಯಾಗಿ ಕಾಣುತ್ತೇವೆ.
ಉದಾಹರಣೆಗೆ ನೀವು ಈಗ ಶೇರು ಮಾರುಕಟ್ಟೆಯಲ್ಲಿ ಕೆಲವೊಂದು ಶೇರುಗಳನ್ನು ತೆಗೆದುಕೊಂಡಿದ್ದೀರಿ ಎಂದು ತಿಳಿದುಕೊಳ್ಳಿ, ಆದರೆ ಕೆಲವು ಸಮಯಗಳ ನಂತರ ಶೇರು ಮಾರುಕಟ್ಟೆಯಲ್ಲಿ ಶೇರುಗಳ ಬೆಲೆ ಕುಸಿಯುತ್ತದೆ ಎಂದಿಟ್ಟುಕೊಳ್ಳಿ. ಈಗ ನೀವು ಷೇರುಗಳನ್ನು ಹೆಚ್ಚಿನ ಬೆಲೆ ಮಾರುವದಗೋಸ್ಕರ ಕಾಯುತ್ತಾ ಕುಳಿತುಕೊಳ್ಳುವುದು ಮೂರ್ಖತನ ಅದರ ಬದಲಿಗೆ ನೀವು ನಷ್ಟವನ್ನು ಸರಿದೂಗಿಸಲು ಕಡಿಮೆ ಬೆಲೆಗೆ ಇನ್ನಷ್ಟು ಷೇರುಗಳನ್ನು ಕೊಂಡುಕೊಂಡರೆ ಅದು ಜಾಣತನ. ಮುಂದೆ ಅತಿ ಕಡಿಮೆ ಅವಧಿಯಲ್ಲಿ ನೀವು ಷೇರುಗಳನ್ನು ಮಾರುವ ಮೂಲಕ ಲಾಭಾಂಶವನ್ನು ಪಡೆದುಕೊಳ್ಳಬಹುದು.
ಹಾಗಾದ್ರೆ ಚೌಕಟ್ಟನ್ನು ಮೀರಿ ಯೋಚಿಸುವ ಸಲುವಾಗಿ ನಾವೇನು ಮಾಡಬೇಕು-
1.ಇತರರು ಏನು ಯೋಚಿಸುತ್ತಾರೆ ಎಂಬುದನ್ನು ನಿರ್ಲಕ್ಷಿಸಿ.
2.ನಿಮ್ಮ ಮೇಲೆ ನಿಮಗೆ ನಂಬಿಕೆ ಇರಲಿ.
3.ವಿವಿಧ ಕ್ಷೇತ್ರಗಳ ನಾಯಕರ ಬಗ್ಗೆ ಅಧ್ಯಯನ ಮಾಡಿ ಮತ್ತು ಅವರು ಯಶಸ್ವಿಯಾಗಲು ಏನು ಮಾಡಿದರು ಎಂಬುದನ್ನು ತಿಳಿದುಕೊಳ್ಳಿ.
ಸಾಮಾನ್ಯವಾಗಿ ನಾವು ಯಾಕೆ ವಿಫಲಗೊಳ್ಳುತ್ತೇವೆ ಎಂದರೆ ಒಂದು ಸಮಸ್ಯೆ ಎದುರಾದಾಗ ಅದನ್ನು ನಾವು ಹಿಂದೆ ಹೇಗೆ ಸಮಸ್ಯೆಯನ್ನು ಪರಿಹರಿಸಿದ್ದೇವೆ ಎಂಬುವುದನ್ನು ನೋಡಿಕೊಂಡು ಅದೇ ಮಾದರಿಯಲ್ಲಿ ಸಮಸ್ಯೆಯನ್ನು ಪರಿಹರಿಸಲು ಪ್ರಾರಂಭಿಸುತ್ತೇವೆ ಆದರೆ ಅದು ತಪ್ಪು. ಏಕೆಂದರೆ ಸಮಸ್ಯೆ ಅದೇ ಇರಬಹುದು ಆದರೆ ಸನ್ನಿವೇಶ ಮತ್ತು ಸಮಯ ಎಲ್ಲವೂ ಬದಲಾಗಿದೆ ಎಂಬುದನ್ನು ಮರೆಯುತ್ತೇವೆ.

– ಪ್ರೊ.ಧರ್ಮರಾಜ ಕುಂಬಾರ
ಉಪನ್ಯಾಸಕರು ಮತ್ತು ಉದ್ಯೋಗ ತರಬೇತಿ ಅಧಿಕಾರಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.