Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾವಾ ಮಾರಾಟ ತಡೆಗೆ ಆಗ್ರಹಿಸಿ ಮಹಿಳೆಯರ ಧರಣಿ-ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಮಾವಾ ಮಾರಾಟ ತಡೆಗೆ ಆಗ್ರಹಿಸಿ ಮಹಿಳೆಯರ ಧರಣಿ-ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಪಟ್ಟಣದ ಕನಕದಾಸ ವೃತ್ತದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಹಾಗೂ ಪಾನ ಶಾಪ್‌ಗಳಲ್ಲಿ ಮಾವಾ ಎಂಬ ಮಾದಕ ಪದಾರ್ಥ ಮಾರಾಟ ತಡೆದು ಬಡ ಕುಟುಂಬಗಳ ಸಂಸಾರ ನಿರ್ವಹಣೆಗೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಮಹಿಳೆಯರು ತಹಶೀಲ್ದಾರ ಕಾರ್ಯಾಲಯದ ಮುಂದೆ ಸುಮಾರು ೪ ಗಂಟೆಗಳ ಕಾಲ ಧರಣಿ ಕುಳಿತು ಪ್ರತಿಭಟಿಸಿದರು.
ನಂತರ ಶಿರಸ್ತೇದಾರ ಡಿ.ಎಸ್.ಭೋವಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ ಕಚೇರಿಗೆ ಸೋಮವಾರ ಗಂಗಾನಗರ, ಕರಿಸಿದ್ಧೇಶ್ವರ, ರಾವುತರಾಯಗುಡಿ ಓಣಿ ಹಾಗೂ ತಾಂಡಾ ರಸ್ತೆಯ ಮಹಿಳೆಯರು ಆಗಮಿಸಿ ಕನಕದಾಸ ವೃತ್ತದಲ್ಲಿ ಮಾಡಲಾಗುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕಮಲಾ ಬಿರಾದಾರ ಮಾತನಾಡಿ, ಪಟ್ಟಣದ ಕನಕದಾಸ ವೃತ್ತದಲ್ಲಿ ಅಕ್ರಮ ಮದ್ಯ ಹಾಗೂ ಪಾನ ಶಾಪ್‌ಗಳಲ್ಲಿ ಮಾದಕ ಮಾವಾ ಮಾರಾಟದ ಫಲವಾಗಿ ಸ್ಥಳೀಯ ಯುವಕರು ಹಾಗೂ ಗಂಡಸರು ಕುಡಿಯುವ, ತಿನ್ನುವ ಚಟಕ್ಕೆ ಅಂಟಿಕೊಂಡಿದ್ದಾರೆ ಇದರಿಂದ ಮನೆ ನಿರ್ವಹಣೆ ಮಾಡುವ ಮಹಿಳೆಯರು ಅಸಹಾಯಕತೆಯಿಂದ ಬೇಸತ್ತಿದ್ದಾರೆ ಕೂಡಲೇ ತಾಲ್ಲೂಕಾಡಳಿತ ಈ ಕುರಿತು ಕ್ರಮ ವಹಿಸುವಂತೆ ಆಗ್ರಹಿಸಿದರು.
ಬೋರಮ್ಮ ಜೋಂಡಿ ಮಾತನಾಡಿ, ಅಕ್ರಮ ಮದ್ಯ ಹಾಗೂ ಮಾದಕ ಮಾವಾ ಮಾರಾಟದಲ್ಲಿ ಈಗಾಗಲೇ ಹಲವು ಯುವಕರು ಬಲಿಯಾಗಿದ್ದಾರೆ. ಇದಕ್ಕೆ ಕಡಿವಾಣ ಹಾಕದಿದ್ದರೆ ಬಡಕುಟುಂಬಗಳು ಹಾಳಾಗುವುದರಲ್ಲಿ ಸಂದೇಹವಿಲ್ಲ. ಈಗ ಮದ್ಯ ಮಾರಾಟ ಮಾಡುವ ಅಂಗಡಿ ಪಕ್ಕದಲ್ಲಿ ಶಾಲೆ, ಕಾಲೇಜುಗಳಿವೆ. ಕುಡುಕರ ಹಾವಳಿಯಿಂದ ವಿದ್ಯಾರ್ಥಿನೀಯರು ಬರಹೋಗಲು ಮುಜುಗರ ಪಡುವಂತಾಗಿದೆ. ಆದ್ದರಿಂದ ಅಬಕಾರಿ ಇಲಾಖೆ ಹಾಗೂ ತಾಲ್ಲೂಕು ಆಡಳಿತ ಈ ಕುರಿತು ತುರ್ತು ಕ್ರಮವಹಿಸಬೇಕು ಎಂದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಆಗಮಿಸಿದ ಅಬಕಾರಿ ಇಲಾಖೆಯ ಸಿಬ್ಬಂದಿಗೆ ಮಹಿಳೆಯರು ತಮ್ಮೊಂದಿಗೆ ಮದ್ಯ ಮಾರಾಟ ಸ್ಥಳಕ್ಕೆ ಬರುವಂತೆ ಒತ್ತಾಯಿಸಿದಾಗ ಅವರ ಆಗ್ರಹಕ್ಕೆ ಮಣಿದ ಸಿಬ್ಬಂದಿ ಅಕ್ರಮ ಮದ್ಯ ಮಾರಾಟ ಸ್ಥಳಕ್ಕೆ ಭೇಟಿ ನೀಡಿದರು.
ಶೇಖು ಸಣ್ಣಕ್ಕಿ, ಲಕ್ಷ್ಮೀಬಾಯಿ ಪೂಜಾರಿ, ಸುಂದ್ರಾಬಾಯಿ ಬಿರಾದಾರ(ಹಿಟ್ನಳ್ಳಿ), ಬಸಮ್ಮ ಕುಂಬಾರ, ತಾರಾಬಾಯಿ ಹಿಟ್ನಳ್ಳಿ, ಲಕ್ಷ್ಮೀ ಸಣ್ಣಕ್ಕಿ, ಸಾವಿತ್ರಿ ಸಣ್ಣಕ್ಕಿ, ವಿಜಯಲಕ್ಷ್ಮೀ ಕುಂಬಾರ, ಲತಾ ನಾಶೀಮಠ, ಮಹಾದೇವಿ ಭಾವಿಕಟ್ಟಿ, ಗಂಗಾಬಾಯಿ ಇಂಗಳಗಿ, ರೇಣುಕಾ ಕುಂಬಾರ,ಶಾರದಾ ಕುಂಬಾರ, ರೇಖಾ ಬಬಲೇಶ್ವರ, ಬಸಮ್ಮ ಹಿಕ್ಕನಗುತ್ತಿ, ಮರಿನಿಂಗವ್ವ, ನೀಲಕ್ಕ ಮಿಂಚನಾಳ, ಪಾರ್ವತಿ ರಾಮಗೊಂಡ, ಕಮಲಾ ಕುಂಬಾರ, ಕಸ್ತೂರಿ ನಾಟೀಕಾರ, ಮುದುಕವ್ವ ಪೂಜಾರಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.