ಚಡಚಣ: ಪ್ರತಿ ವರ್ಷದಂತೆ ಈ ವರ್ಷವು ಹಾಲಳ್ಳಿ ಗ್ರಾಮದ ಖಾಜಾ ಬಂದೇನವಾಜ ಉರುಸು ಅತಿ ವೈಭವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.
ಖಾಜಾ ಬಂದೇನವಾಜ ಮುಸ್ಲಿಂ ಸೂಫಿ ಸಂತರಲ್ಲಿ ಒಬ್ಬರಾಗಿದ್ದಾರೆ. ಹಾಲಳ್ಳಿ ಗ್ರಾಮದ ಖಾಜಾ ಬಂದೇನವಾಜ ದೇವರ ಉರುಸು ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಸರ್ವಧರ್ಮೀಯರು ಉರುಸಿನಲ್ಲಿ ಭಾಗಿಯಾಗಿ ತಮ್ಮ ತನುಮನ ಧನ ಅರ್ಪಿಸಿ ಜಾತ್ರೆಯನ್ನು ಯಶಸ್ವಿಗೊಳಿಸಿದರು. ಸೂಫಿ ಸಂತ ಬಂದೇನವಾಜರು ಪವಾಡ ಪುರುಷರಾಗಿದ್ದರು. ಮಾನವಧರ್ಮ ಜಾಗೃತಿಗಾಗಿ ಊರೂರು ಸಂಚರಿಸುತ್ತಾ ಹಾಲಳ್ಳಿ ಗ್ರಾಮದಲ್ಲಿ ಬಂದು ವಿಶ್ರಾಂತಿ ಪಡೆದು ಅಲ್ಲಿಯ ಭಕ್ತರಿಗೆ ಕೆಲವೊಂದು ಪವಾಡ ಮಾಡಿ ತಮ್ಮ ಕುರುಹನ್ನು ಬಿಟ್ಟು ಹೋದರಂತೆ. ಅಂದಿನಿಂದ ಇಂದಿನ ವರೆಗೆ ಗ್ರಾಮಸ್ಥರು ಭಕ್ತಿಭಾವದಿಂದ ಅವರ ಉರುಸನ್ನು ವಿಜೃಂಭಣೆಯಿಂದ ಆಚರಿಸುತ್ತಾ ಬಂದಿರುತ್ತಾರೆ. ಇದು ಗ್ರಾಮಕ್ಕೆ ದೊಡ್ಡ ಜಾತ್ರೆಯಾಗಿದ್ದು, ಎಲ್ಲರೂ ಹಬ್ಬದಂತೆ ಆಚರಿಸುವರು. ಕರ್ನಾಟಕ ಮಹಾರಾಷ್ಟ್ರ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದರು.
ಶುಕ್ರವಾರ ಸಂಜೆ ೦೮ ರಿಂದ ೧೦ ಗಂಟೆಯವರೆಗೆ ‘ಗಂಧ ಲೇಪನ’ ಕಾರ್ಯಕ್ರಮ ನಡೆಯಿತು. ಶನಿವಾರ ಮುಂಜಾನೆ ೦೬ ರಿಂದ ರಾತ್ರಿ ೧೦ ಗಂಟೆಯವರೆಗೆ ‘ಮಹಾ ನೈವೇದ್ಯ’ ಸಂಜೆ ೦೭ ರಿಂದ ೧೦ ಗಂಟೆಯವರೆಗೆ ‘ಗಲಿಪ’ ಕಾರ್ಯಕ್ರಮವು ನೇರವೇರಿತು. ರಾತ್ರಿ ೧೦ ಗಂಟೆಗೆ ಹಾಲಳ್ಳಿಯ ಶ್ರೀ ಖಾಜಾ ಬಂದೇನವಾಜ ನಾಟ್ಯ ಸಂಘದಿಂದ ‘ಮಗ ಹೋದರು ಮಾಂಗಲ್ಯ ಬೇಕು’ ಎಂಬ ಸುಂದರ ಸಾಮಾಜಿಕ ನಾಟಕವು ಜರುಗಿತು.
Subscribe to Updates
Get the latest creative news from FooBar about art, design and business.
Related Posts
Add A Comment

