ವಿಜಯಪುರ: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ವಿಜಯಪುರ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳು ಕರ್ನಾಟಕ ರಾಜು ಉಚ್ಛ ನ್ಯಾಯಾಲಯವು ೨೦೨೪ ಎ.೨೩ ರಂದು ನೀಡಿರುವ ಆದೇಶದಂತೆ ರಾಜ್ಯ ವಕ್ಫ್ ಮಂಡಳಿಯ ಮಾದರಿ ನಿಯಮಾವಲಿ ನಮೂನೆ ನಂ-೪೨(ಬೈಲಾ)ನ್ನು ಅಂಗೀಕರಿಸಿಕೊಳ್ಳುವುದು ಕಡ್ಡಾಯವಾಗಿದೆ. ಈವರೆಗೂ ಮಾದರಿ ನಿಯಮಾವಳಿಯನ್ನು ಪಾಲಿಸದ ವಕ್ಫ್ ಸಂಸ್ಥೆಗಳು ಮಾದರಿ ನಿಯಮಾವಳಿಯ ನಮೂನೆ ನಂ.೪೨ನ್ನು ಸಂಬಂಧಪಟ್ಟ ದಾಖಲೆಗಳೊಂದಿಗೆ ವಿಜಯಪುರದ ವಕ್ಫ್ ಕಚೇರಿಯ ಮೂಲಕ ರಾಜ್ಯ ವಕ್ಫ್ ಮಂಡಳಿಯ ಅಂಗೀಕಾರಕ್ಕಾಗಿ ಅತೀ ಶೀಘ್ರ ಸಲ್ಲಿಸಬೇಕು ಎಂದು ವಿಜಯಪುರದ ಜಿಲ್ಲಾ ವಕ್ಫ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
