ಬಸವನಬಾಗೇವಾಡಿ: ತಾಲೂಕಿನ ಯಂಬತ್ನಾಳ ಗ್ರಾಮದ ಶಿಕ್ಷಕ, ರೈತ ಶಿವಾನಂದ ಮಂಗನಾವರ ಅವರು ಕೃಷಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವದನ್ನು ಗಮನಿಸಿ ಬೆಂಗಳೂರಿನ ಪರಿಪೂರ್ಣ ಪ್ರತಿಷ್ಠಾನ, ಕರ್ನಾಟಕ ನೇತಾಜಿ ಚಾರಿಟೇಬಲ್ ಟ್ರಸ್ಟ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಯೋಗದಲ್ಲಿ ಭಾನುವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ೨೦೨೪ ನೇ ಸಾಲಿನ ನಾಲ್ವಡಿ ಕೃಷ್ಣರಾಜ ಒಡೆಯರ ಪ್ರಶಸ್ತಿಯನ್ನು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗಡೆ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಪರಿಪೂರ್ಣ ಪ್ರತಿಷ್ಠಾನ ಪೌಂಡೇಶನ ಸಂಸ್ಥಾಪಕ ಅಧ್ಯಕ್ಷ ರವಿಕೋಟಿ ಸೂರ್ಯ, ಕರ್ನಾಟಕ ನೇತಾಜಿ ಚಾರಿಟೇಬಲ್ ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷ ರವಿಕುಮಾರ ಇತರರು ಇದ್ದರು ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

