ದೇವರಹಿಪ್ಪರಗಿ: ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಲ್ಲೆಯ ಅಹಿಂದ ವರ್ಗಕ್ಕೆ ಪ್ರಾಧಾನ್ಯತೆ ನೀಡಬೇಕು ಎಂದು ಕೋಲಿ ಕಬ್ಬಲಿಗ ಯುವ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಶಿವಾಜಿ ಮೆಟಗಾರ ಹೇಳಿದ್ದಾರೆ.
ಪಟ್ಟಣದಲ್ಲಿ ಬುಧವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿಕೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷ ಕಳೆದ ಚುನಾವಣೆಯಲ್ಲಿ ಅಹಿಂದ ಮತಗಳ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಜೊತೆಗೆ ಜಿಲ್ಲೆಯಲ್ಲಿ ಅಹಿಂದ ಮತದಾರರ ಸಂಖ್ಯೆಯೂ ಸಹ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ, ಹಿಂದುಳಿದ, ದಲಿತಪರ ನಾಯಕರು ಸಹ ಸಾಕಷ್ಟು ಅವಕಾಶವಂಚಿತರಾಗಿದ್ದಾರೆ.
ಜಿಲ್ಲೆಯ ದೇವರಹಿಪ್ಪರಗಿ, ವಿಜಯಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಮಾಜಿಕ ನ್ಯಾಯದಡಿ ಅಹಿಂದ ಅಭ್ಯರ್ಥಿಗಳಿಗೆ ಅವಕಾಶ ನೀಡಿತ್ತು. ಈ ಕಾರಣದಿಂದ ಜಿಲ್ಲೆಯ ಎಲ್ಲ ಅಹಿಂದ ಮತಗಳು ಒಂದಾಗಿ ಇತರ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸುವಂತಾಯಿತು.
ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಅಹಿಂದ ವರ್ಗಗಳನ್ನು ಹೆಚ್ಚಾಗಿ ನೆಚ್ಚಿಕೊಂಡಿದ್ದು ಈಗ ಅವುಗಳಿಗೆ ಕೃತಜ್ಞತೆ ಸಲ್ಲಿಸುವ ಅವಕಾಶ ತಾನಾಗಿ ಒದಗಿ ಬಂದಿದ್ದು,ಈ ಮೂಲಕ ಜಿಲ್ಲೆಯ ಅಹಿಂದ ವರ್ಗದ ಯಾವುದೇ ಸೂಕ್ತ ನಾಯಕರಿಗೆ ಅವಕಾಶ ನೀಡುವುದರ ಮೂಲಕ ಸಾಮಾಜಿಕ ನ್ಯಾಯ ಎಂಬ ತತ್ವಕ್ಕೆ ಮತ್ತೇ ಮನ್ನಣೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಪರಿಷತ್ ಚುನಾವಣೆಯಲ್ಲಿ ಅಹಿಂದ ವರ್ಗಕ್ಕೆ ಪ್ರಾಧಾನ್ಯತೆ ನೀಡಿ :ಮೆಟಗಾರ
Related Posts
Add A Comment

