ವಿಜಯಪುರ: ಸರ್ಕಾರಿ ಸೌಲಭ್ಯಗಳು, ಬ್ಯಾಂಕ್ ಸೌಲಭ್ಯಗಳು, ಕೃಷಿ ಇಲಾಖೆ ಸೌಲಭ್ಯಗಳು ಮತ್ತು ಬೆಳೆ ಪರಿಹಾರಗಳನ್ನು ಪಡೆಯಲು ಜಮೀನಿನ ಪಹಣಿ ಪತ್ರಕ್ಕೆ ಆಧಾರ ಕಾರ್ಡ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಹಣಿ ಪತ್ರಕ್ಕೆ ಆಧಾರ್ ಜೋಡಣೆ ಮಾಡಲು ಅನುಕೂಲವಾಗುವಂತೆ ಹೊಸದಾದ ತಂತ್ರಾಂಶವನ್ನು ಸಿದ್ಧಗೊಳಿಸಿದ್ದು, ಈ ಕಾರ್ಯವನ್ನು ಮಾಡಲು ಗ್ರಾಮ ಆಡಳಿತ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿರುತ್ತದೆ.
ಸರಕಾರದ ವಿವಿಧ ಪ್ರಯೋಜನಗಳನ್ನು ಪಡೆಯಲು ಶಾಶ್ವತ ಪರಿಹಾರದ ಅಂಗವಾಗಿ ಜಮೀನಿನ ಪಹಣಿ ಪತ್ರಕ್ಕೆ ಆಧಾರ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಲು ಗ್ರಾಮ್ ಒನ್ ಕೇಂದ್ರ, ಗ್ರಾಮ ಆಡಳಿತ ಕಚೇರಿ, ಅಥವಾ ಅಥವಾ ಆಧಾರ್ ಕಾರ್ಡ್ ಲಿಂಕ್ ಮಾಡಲು ಆಡಳಿತ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿದಾಗ ಅವರಿಗೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
