Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಬೇಡ್ಕರ್ ಭವನ ಸಮಸ್ಯೆ ಇತ್ಯರ್ಥಪಡಿಸದಿದ್ದರೆ ಉಗ್ರ ಹೋರಾಟ
(ರಾಜ್ಯ ) ಜಿಲ್ಲೆ

ಅಂಬೇಡ್ಕರ್ ಭವನ ಸಮಸ್ಯೆ ಇತ್ಯರ್ಥಪಡಿಸದಿದ್ದರೆ ಉಗ್ರ ಹೋರಾಟ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೧೧ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ | ಯುವ ಘರ್ಜನೆ ರಾಜ್ಯಾಧ್ಯಕ್ಷ ಖಂಡೇಕರ ಎಚ್ಚರಿಕೆ

ವಿಜಯಪುರ: ನಗರದ ಮನಗೂಳಿ ಅಗಸಿ ಹತ್ತಿರದ ಡಾ. ಬಿ.ಆರ್. ಅಂಬೇಡ್ಕರ ಸಮುದಾಯ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಡಾ ಬಿ ಆರ್ ಅಂಬೇಡ್ಕರ್ ಯುವಕ ಸಂಘದಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರ ೧೦ ದಿನ ಪೂರೈಸಿದೆ.
ಧರಣಿ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದ ಕರ್ನಾಟಕ ಯುವ ಘರ್ಜನೆ ರಾಜ್ಯಾಧ್ಯಕ್ಷ ಬಸವರಾಜ ಖಂಡೇಕರ ಮಾತನಾಡಿ, ಅಂಬೇಡ್ಕರ ಭವನ ಸಮಸ್ಯೆ ಇತ್ಯರ್ಥಪಡಿಸುವಂತೆ ಒತ್ತಾಯಿಸಿ ಇಲ್ಲಿಯವರೆಗೆ ನಿರಂತರ ೧೦ ದಿನಗಳ ವರೆಗೆ ಧರಣಿ ನಡೆಸುತ್ತಿರುವ ಹೋರಾಟಗಾರರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ ಸಮಸ್ಯೆಯನ್ನು ಶೀಘ್ರವೇ ಪರಿಹರಿಸಬೇಕು. ಇಲ್ಲವಾದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟವನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಬೇಕಾಗುತ್ತದೆ. ಡಾ. ಬಾಬಾಸಾಹೇಬರು ದೇಶದ ಅತ್ಯುನ್ನತವಾದ ಸಂವಿಧಾನವನ್ನು ಭಾರತಕ್ಕೆ ಕೊಡುಗೆಯನ್ನು ನೀಡಿದ್ದಾರೆ. ಸಂವಿಧಾನದ ಅಡಿಯಲ್ಲಿ ನಾವೆಲ್ಲರು ಸುರಕ್ಷಿತವಾಗಿದೆ. ಅಂತಹ ಮಹಾತ್ಮರ ಹೆಸರಿನಲ್ಲಿ ನಿರ್ಮಾಣಮಾಡುತ್ತಿರುವ ಭವನಕ್ಕೆ ಅಡ್ಡಿಪಡಿಸುತ್ತಿರುವುದು ದುರಂತದ ಸಂಗತಿ ಎಂದರು.
ದಲಿತರಿಗೆ ನ್ಯಾಯ ಒದಗಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಮುಂದಾಗಬೇಕೆಂದು ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಯುವ ಘರ್ಜನೆ ಸಂಘಟನೆಯ ಮಹೇಶ ವಠಾರ, ಗಣೇಶ ಉಪ್ಪಾರ, ಅನೀಲ ಚಲವಾದಿ ಹಾಗೂ ಸರೋಜಿನ ಕುಬಕಡ್ಡಿ, ಸುಧಾ ಚಲವಾದಿ, ಸರೋಜಿನ ಖತಿಜಾಪೂರ, ಆಶಾ ಮಾನೆ, ದುಂಡವ್ವ ಕಾಖಂಡಕಿ, ರೇಣುಕಾ ಬನಸೋಡೆ, ಶ್ರೀಶೈಲ ಕಾಖಂಡಕಿ, ಶ್ರೀದೇವಿ ವಾಲಿಕಾರ, ಮುದಕವ್ವ ವಾಲಿಕಾರ, ಮೀನಾಕ್ಷಿ ಕಾಖಂಡಕಿ, ರುಕ್ಮೀಣಿ ಕಾಖಂಡಕಿ, ಪಮ್ಮಕ್ಕ ವಾಲಿಕಾರ, ಮಾದೇವಿ ಕಾಖಂಡಕಿ, ಮಂಜುನಾಥ ಶಿವಶರಣ, ಮಲ್ಲಿಕಾರ್ಜುನ ಸಾವಳಗಿ, ಸಚೀನ ಕಾಖಂಡಕಿ, ಶಂಕರ ಕಾಖಂಡಕಿ, ರಾಮು ವಾಲೀಕಾರ, ಕೀರ್ತಿ ಕುಮಾರ ಕಾಖಂಡಕಿ, ಬಸವಕುಮಾರ ಕಾಂಬಳೆ, ಕೃಷ್ಣಾ ಚಲವಾದಿ, ಸತೀಶ ಕಾಖಂಡಕಿ, ಪ್ರತಾಪ ಚಿಕ್ಕಲಕಿ, ರಾಜು ವಾಲಿಕಾರ, ಸಂತೋಷ ಕಾಂಬಳೆ, ಚಂದ್ರಶೇಖರ ಬಿರಾದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ
    In (ರಾಜ್ಯ ) ಜಿಲ್ಲೆ
  • ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ
    In (ರಾಜ್ಯ ) ಜಿಲ್ಲೆ
  • ಶಾಸಕ ಮನಗೂಳಿ ಯಿಂದಅಹವಾಲು ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಇಂದು ವ್ಯಸನಮುಕ್ತ ಶಿಬಿರದ ಸಮಾರೋಪ :ಅಲ್ಲಾಪೂರ
    In (ರಾಜ್ಯ ) ಜಿಲ್ಲೆ
  • ಸಿಂದಗಿ: ಇಂದು ವಿದ್ಯುತ್ ವ್ಯತ್ಯೆಯ
    In (ರಾಜ್ಯ ) ಜಿಲ್ಲೆ
  • ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಈ ಜಗವೆಲ್ಲ..
    In ವಿಶೇಷ ಲೇಖನ
  • ಕುಡಿವ ನೀರಿನ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಶರಣ ಭೋಗಣ್ಣನವರ ಕುರಿತು ಸಂಶೋಧನೆ ಅಗತ್ಯ :ಗೋಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.