ಆಲಮಟ್ಟಿ: ಜಮೀನು ವಿವಾದದ ಹಿನ್ನಲೆಯಲ್ಲಿ ವೃದ್ಧನೊಬ್ಬನನ್ನು ಕೊಲೆ ಮಾಡಿದ ಘಟನೆ ತಾಲ್ಲೂಕಿನ ಚಿಮ್ಮಲಗಿ ಭಾಗ ೨ ಗ್ರಾಮದಲ್ಲಿ ಜರುಗಿದೆ.
ಕೊಲೆಯಾದ ವ್ಯಕ್ತಿ ಹನುಮಂತ ನಾನಪ್ಪ ಲಮಾಣಿ (೮೦).
ರಾಮು ಸಗರಪ್ಪ ಲಮಾಣಿ ಸೇರಿದಂತೆ ೧೨ ಜನರು ಸೇರಿ ಕೊಲೆ ಮಾಡಿದ್ದಾರೆಂದು ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಮೀನಿನ ಬದುವಿನ ಸಲುವಾಗಿ ಎರಡು ಕುಟುಂಬಗಳ ಮಧ್ಯೆ ಬುಧವಾರ ರಾತ್ರಿ ಜಗಳವಾಗಿದ್ದು, ಜಗಳ ವಿಕೋಪಕ್ಕೆ ಹೋಗಿ ವೃದ್ಧನಿಗೆ ತೀವ್ರ ಗಾಯಗಳಾಗಿದ್ದು ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ ಸೋನಾವಾಲೆ, ಹೆಚ್ಚುವರಿ ಎಸ್ ಪಿ ಶಂಕರ ಮಾರಿಹಾಳ, ಡಿವೈಎಸ್ ಪಿ ಬಲ್ಲಪ್ಪ ನಂದಗಾವಿ ಸೇರಿದಂತೆ ಇತರರು ಭೇಟಿ ನೀಡಿದರು.
ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
