ವಿಜಯಪುರ: ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಬಂಜಾರಾ ಪ್ರೌಢ ಶಾಲೆಯ ಮುಖ್ಯ ಗುರು ಇ.ಡಿ.ಲಮಾಣಿ ಹೇಳಿದರು.
ಶುಕ್ರವಾರದಂದು ಶಾಲಾ ಆರಂಭೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ಶಿಕ್ಷಣ ಎಂದರೆ ಕೇವಲ ಪಠ್ಯಕ್ರಮದ ಅಧ್ಯಯನ ಪರೀಕ್ಷೆ, ಫಲಿತಾಂಶ ಮಾತ್ರವಲ್ಲ ಅದು ವಿದ್ಯಾರ್ಥಿಯ ಪರಿಪೂರ್ಣ ವ್ಯಕ್ತಿತ್ವದ ವಿಕಾಸ. ಅವನಲ್ಲಿ ಸುಪ್ತವಾಗಿರುವ ಅನನ್ಯ ಪ್ರತಿಭೆಯ ಅನಾವರಣ. ಹಾಗಾದಾಗ ಮಾತ್ರ ಶಿಕ್ಷಣಕ್ಕೆ ಒಂದು ಅರ್ಥಪೂರ್ಣತೆ ಬರುತ್ತದೆ ಎಂದು ಹೇಳಿದರು.
ಈ ವೇಳೆಯಲ್ಲಿ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಎಂ.ಬಿ.ಪೂಜಾರಿಯವರು ಮಾತನಾಡುತ್ತ. ವಿದ್ಯೆ ಎಂಬುದು ಯಾರೂ ದೋಚಲಾಗದ, ಬಳಸದಷ್ಟು ಸಮೃದ್ಧವಾಗಿ ಬೆಳೆಯುವ, ಎಲ್ಲ ಸಂಪತ್ತಿಗಿಂತ ಮಿಗಿಲಾದದ್ದು. ಅದಕ್ಕಾಗಿ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ. ಸಂಸ್ಕಾರ ನೀಡಿ ಮಕ್ಕಳ ಜ್ಞಾನ ಭಂಡಾರದ ಶ್ರೀಮಂತಿಕೆ ಹೆಚ್ಚಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಸ್.ವ್ಹಿ.ದೇಶಪಾಂಡೆ, ಎ.ಎಂ.ನಾಗೊಂಡ, ಆರ್.ಎನ್.ಬಕಾಟೆ, ಜೆ.ಕೆ.ರಾಠೋಡ, ಎಸ್.ಡಿ.ಚವ್ಹಾಣ್, ಎಸ್.ಬಿ.ಒಡೆಯರ, ಎಸ್.ಕೆ.ಶಿಂಧೆ, ಎಸ್.ಪಿ.ಧಡೇಕರ, ಎಸ್.ಎಂ.ಮಾಳಿ, ಆರ್.ಎಸ್.ಹಿರೇಮಠ, ಪಿ.ಎಸ್.ಕೌಲಗಿ, ಆರ್.ಕೆ.ರಜಪೂತ, ಎಂ.ಎಲ್.ಚವ್ಹಾಣ್, ಡಿ.ಬಿ.ದೊಡಮನಿ, ಎಚ್.ಎಂ.ಬೋರಾವತ ಹಾಗೂ ಎಲ್ಲ ಶಿಕ್ಷಕ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

