ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಹಿರೇಮಠದಲ್ಲಿ ಶತಾಯುಷಿ ಲಿಂ. ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ೪೧ ನೇ ಪುಣ್ಯಸ್ಮರಣೋತ್ಸವ ಹಾಗೂ ಲಿಂ. ೨೦೦೮ ಜಗದ್ಗುರು ಡಾ.ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ ೧೧ ನೇ ಜಾತ್ರಾಮಹೋತ್ಸವದಂಗವಾಗಿ ಜೂ. ೧,೨ ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜೂ. ೧ ರಂದು ಬೆಳಗ್ಗೆ ೬.೨೦ ಗಂಟೆಗೆ ಪಂಚಾಚಾರ್ಯ ಧ್ವಜಾರೋಹಣ, ೬.೩೦ ಗಂಟೆಗೆ ಸಾಮೂಹಿಕ ಶಿವದೀಕ್ಷೆ ಕಾರ್ಯಕ್ರಮ ಜರುಗಲಿದೆ. ರಾತ್ರಿ ೧೦ ಗಂಟೆಗೆ ಮನಗೂಳಿ, ಕುಬಕಡ್ಡಿ, ಹತ್ತರಕಿಹಾಳ, ನಂದಿಹಾಳ ಪಿಯು, ವಿಜಯಪುರ ಅಡಿಕೆ ಗಲ್ಲಿ ಹಾಗೂ ಬಬಲೇಶ್ವರ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಜೂ. ೨ ರಂದು ಬೆಳಗ್ಗೆ ೭ ಗಂಟೆಗೆ ಬಸಪ್ಪ ಹುಣಶಿಕಟ್ಟಿ ಅವರ ತೋಟದಿಂದ ವಿವಿಧ ವಾದ್ಯಮೇಳದೊಂದಿಗೆ ಕುಂಭ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶ್ರೀಮಠಕ್ಕೆ ಆಗಮಿಸುವದು. ನಂತರ ೮ ಗಂಟೆಗೆ ಉಭಯ ಶ್ರೀಗಳ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ ನಿಂಗನಗೌಡ ಪಾಟೀಲ, ಶಿವಪ್ಪ ಅನಗವಾಡಿ, ಬಸವರಾಜ ಸಣಕಲ್ ಹಾಗೂ ಮನಗೂಳಿ ವೈದಿಕರಿಂದ ನಡೆಯಲಿದೆ. ೯ ಗಂಟೆಗೆ ಉಭಯ ಶ್ರೀಗಳ ರಜತ ಮೂರ್ತಿಗಳ ಪಲ್ಲಕ್ಕಿ ಉತ್ಸವ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳದೊಂದಿಗೆ ಸಂಚರಿಸಿ ಶ್ರೀಮಠಕ್ಕೆ ಆಗಮಿಸುವದು. ಮಧ್ಯಾನ್ಹ ೧೨.೩೦ ಗಂಟೆಗೆ ಧರ್ಮಸಭೆ ನಡೆಯಲಿದೆ. ಈ ಎಲ್ಲ ಕಾರ್ಯಕ್ರಮಗಳಿಗೆ ಸದ್ಭಕ್ತರು ಆಗಮಿಸಿ ಗುರುಕೃಪೆಗೆ ಪಾತ್ರರಾಗಬೇಕೆಂದು ಶ್ರೀಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

