Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಂಬಾಕು ಸೇವನೆ ತ್ಯಜಿಸಿ ಆರೋಗ್ಯ & ಪರಿಸರ ರಕ್ಷಿಸಿ :ನ್ಯಾ.ಕಟ್ಟಿಮನಿ
(ರಾಜ್ಯ ) ಜಿಲ್ಲೆ

ತಂಬಾಕು ಸೇವನೆ ತ್ಯಜಿಸಿ ಆರೋಗ್ಯ & ಪರಿಸರ ರಕ್ಷಿಸಿ :ನ್ಯಾ.ಕಟ್ಟಿಮನಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ತಂಬಾಕು ಸೇವನೆಯಿಂದಾಗುವ ಅಪಾಯಗಳ ಕುರಿತು ಸಾರ್ವಜನಿಕರಲ್ಲಿ ಸಾಕಷ್ಟು ಜಾಗೃತಿ ಮೂಡಿಸುತ್ತಿದ್ದರೂ ತಂಬಾಕು ಬಳಕೆ ಕಡಿಮೆಯಾಗುತ್ತಿಲ್ಲ. ಸಾರ್ವಜನಿಕರು ಎಚ್ಚೆತ್ತು ಪ್ರಾಣಕ್ಕೆ ಅಪಾಯ ತಂದೊಡ್ಡುವ ತಂಬಾಕು ಸೇವನೆಯನ್ನು ಸಂಪೂರ್ಣ ತ್ಯಜಿಸಿ ತಮ್ಮ ಆರೋಗ್ಯದ ಜೊತೆಗೆ ಪರಿಸರವನ್ನು ರಕ್ಷಿಸಲು ಮುಂದಾಗಬೇಕು ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಹೇಳಿದರು.
ಪಟ್ಟಣದ ಹೊರಪೇಟೆ ಗಲ್ಲಿಯಲ್ಲಿರುವ ಸಿದ್ಧಗಂಗಾ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಶುಕ್ರವಾರ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿದ್ಧಗಂಗಾ ಪ್ಯಾರಾ ಮೆಡಿಕಲ್ ಕಾಲೇಜು ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಂಬಾಕು ಮುಕ್ತ ವಲಯಗಳಲ್ಲಿ ತಂಬಾಕು ಮಾರಾಟ ಮಾಡುವವರ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲಂದರಲ್ಲಿ ಬೀಡಿ, ಸಿಗರೇಟ್, ಗುಟಕಾ ಜಗಿದು ಉಗಿಯುವವರಿಗೆ ಪೊಲೀಸರು ಸೂಕ್ತ ಶಿಕ್ಷೆಗೆ ಗುರಿಪಡಿಸಬೇಕು. ತಂಬಾಕು ಸೇವನೆಯಿಂದಾಗುವ ಗಂಭೀರ ಪರಿಣಾಮಗಳ ಕುರಿತು ಆರೋಗ್ಯ ಇಲಾಖೆ ಮೇಲಿಂದ ಮೇಲೆ ಜಾಗೃತಿ ಮೂಡಿಸಬೇಕು ಅಂದಾಗ ತಂಬಾಕು ಬಳಕೆಯ ಪ್ರಮಾಣ ಕಡಿಮೆಯಾಗಲು ಸಾಧ್ಯವಿದೆ ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿ ತಂಬಾಕು ಸೇವನೆಯಿಂದ ಜಾಗತಿಕ ಮಟ್ಟದಲ್ಲಾಗುವ ಹಾನಿಯ ಅರಿವು ಮೂಡಿಸುವ ಉದ್ದೇಶದಿಂದ ಪ್ರತೀ ವರ್ಷ ಮೇ೩೧ ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಗುತ್ತದೆ. ಯುವಕರಲ್ಲಿ ಶೋಕಿಗಾಗಿ ಪ್ರಾರಂಭವಾಗುವ ಈ ತಂಬಾಕು ಸೇವನೆ ಅಭ್ಯಾಸ ಮುಂದೆ ಚಟವಾಗಿ ಮಾರ್ಪಡುತ್ತದೆ. ಜೇಬಿಗೆ ಕತ್ತರಿ ಹಾಕಿಕೊಂಡು ಪ್ರಾಣಕ್ಕೆ ಆಪತ್ತು ತಂದುಕೊಳ್ಳುವ ಬದಲು ತಂಬಾಕು ಸೇವನೆಯಿಂದ ದೂರವಿರುವದು ಉತ್ತಮ ಎಂದರು.
ತಾಲೂಕು ಆರೋಗ್ಯ ಆಧಿಕಾರಿ ಡಾ.ಸತೀಶ ತಿವಾರಿ ಮಾತನಾಡಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ, ಸೇವನೆಯಿಂದ ಹೊರಬಂದಲ್ಲಿ ಆರೋಗ್ಯದಲ್ಲಾಗುವ ಲಾಭಗಳ ಕುರಿತು ಸುಧೀರ್ಘವಾಗಿ ವಿವರಿಸಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅನಸೂಯಾ ತೇರದಾಳ ವಿಶೇಶ ಉಪನ್ಯಾಸ ನೀಡಿದರು. ಇದೇ ವೇಳೆ ತಾಲೂಕು ಆರೋಗ್ಯ ಇಲಾಖೆಯ ವತಿಯಿಂದ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಇರುವ ವಾಲ್‌ಪೋಸ್ಟರ್‌ಗಳನ್ನು ಬಿಡುಗಡೆ ಗೊಳಿಸಲಾಯಿತು. ಗ್ರೇಡ್ ೨ ತಹಶೀಲ್ದಾರ ಜಿ.ಎನ್.ಕಟ್ಟಿ, ತಾಲೂಕು ಪಂಚಾಯತ ಕಾರ್ಯಾಲಯದ ಡಿ.ಬಿ.ಅಂಜುಟಗಿ, ಸಿಡಿಪಿಓ ಶಿವಮೂರ್ತಿ ಕುಂಬಾರ, ಪ್ರಾಂಶುಪಾಲೆ ರಾಜಶ್ರೀ ಮೇಟಿ, ಎಂ.ಎಸ್.ನಾಶಿ, ನ್ಯಾಯಾಲಯದ ಸಿಬ್ಬಂದಿ ಅರವಿಂದ ಕುಂಬಾರ ಮತ್ತು ಮಹಾಂತೇಶ ಹಚರಡ್ಡಿ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ಸೇರಿದಂತೆ ಮತ್ತೀತರರು ಇದ್ದರು.


ತಂಬಾಕು ಸೇವನೆಗೆ ಅಂಡಿಕೊಂಡು ಅದರಿಂದಾಚೆ ಬರಲು ಇಚ್ಛಿಸುವ ಆಸಕ್ತರಿಗೆ ವಿಜಯಪುರದ ಜಿಲ್ಲಾ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವ ಅವಕಾಶ ಕಲ್ಪಿಸಲಾಗಿದೆ. ಈ ಚಿಕಿತ್ಸೆ ಪಡೆದಲ್ಲಿ ತಂಬಾಕು ಸೇವನೆಯಿಂದ ಆಚೆ ಬರಲು ಖಂಡಿತ ಸಾಧ್ಯವಿದೆ. ಈ ಬಗ್ಗೆ ತಾಲೂಕು ಆಸ್ಪತ್ರೆಗಳಲ್ಲಿ ಓಪಿಡಿ ಮಾಡಿಸುವ ಮೂಲಕವೂ ಭೇಟಿ ನೀಡಬಹುದು.”
– ಡಾ.ಸತೀಶ ತಿವಾರ., ತಾಲೂಕು ಆರೋಗ್ಯ ಅಧಿಕಾರಿ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಾವೇ ಬದಲಾವಣೆಯ ಭಾಗವಾಗಬೇಕು

’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ

ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ

ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಾವೇ ಬದಲಾವಣೆಯ ಭಾಗವಾಗಬೇಕು
    In (ರಾಜ್ಯ ) ಜಿಲ್ಲೆ
  • ’ವೀರ ರತ್ನ’ ಪ್ರಶಸ್ತಿ ಪಡೆದ ಚೇತನ ಶಿವಶಿಂಪಿ
    In (ರಾಜ್ಯ ) ಜಿಲ್ಲೆ
  • ಹಕ್ಕುಗಳ ಅರಿವು ಮೂಡಿದಾಗಲೇ ಶೋಷಣೆಗೆ ಕಡಿವಾಣ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ :ಮಠಪತಿ
    In (ರಾಜ್ಯ ) ಜಿಲ್ಲೆ
  • ಅಹಿರಸಂಗ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಹೈದ್ರಾಬಾದ್ ವಿಮೋಚನಾ ದಿನಾಚರಣೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಗುರಾನಿ ಎಸ್ಟೇಟ್ಸ್ ತಂಡದಿಂದ ಗಣೇಶೋತ್ಸವ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯಗಳಿಗೆ ವಿಶ್ವ ಮಟ್ಟದಲ್ಲಿ ಭಾರಿ ಬೇಡಿಕೆ :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜನಸಾಮಾನ್ಯರ ಸಮಸ್ಯೆಗೆ ಜೆಡಿಎಸ್ ದಿಂದ ಮಾತ್ರ ಪರಿಹಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.