ಆಲಮಟ್ಟಿ: ಇಲ್ಲಿಯ ಆರ್ ಎಸ್ ಪುನರ್ವಸತಿ ಕೇಂದ್ರದಲ್ಲಿ ಮಳೆಯಿಂದ ನಾನಾ ಕಡೆಯಿಂದ ಮಳೆ ನೀರು ಚರಂಡಿಯಲ್ಲಿ ಹರಿದಿದೆ. ಚರಂಡಿಗೆ ಸಮರ್ಪವಾದ ಟೇಲ್ ಎಂಡ್ ಇಲ್ಲದ್ದರಿಂದ ಚರಂಡಿಯ ಕೊಳಚೆ ಎಲ್ಲವೂ ಆಲಮಟ್ಟಿ ಪೆಟ್ರೋಲ್ ಪಂಪ್ ಆಲಮಟ್ಟಿ ಆರ್ ಎಸ್ ಮುಖ್ಯರಸ್ತೆಯ ಮೇಲೆ ಹರಿದಿದೆ.
ಇದೇ ರಸ್ತೆಯ ಮೇಲೆ ಸಂಚರಿಸುವ ಸಹಸ್ರಾರು ಜನ ಮೂಗು ಮುಚ್ಚಿಕೊಂಡೇ ಚರಂಡಿ ನೀರಿನಲ್ಲೇ ಸಂಚರಿಸಬೇಕಾದ ಅನಿವಾರ್ಯತೆ ಉಂಟಾಯಿತು. ಈಗಿರುವ ಚರಂಡಿಗೆ ಟೇಲ್ ಎಂಡ್ ವರೆಗೆ ನಿರ್ಮಿಸಿ ಹಳ್ಳಕ್ಕೆ ಜೋಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ರಸ್ತೆ ಮೇಲೆ ನಿಂತ ನೀರು;
ಆಲಮಟ್ಟಿ ಪೆಟ್ರೋಲ್ ಪಂಪ್ ನಿದ
ಆಲಮಟ್ಟಿಗೆ ತೆರಳುವ ಪ್ರವೇಶವ ದ್ವಾರ ಬಳಿ ಹರಿದು ಬರುವ ನೀರು ಹೋಗಲು ಯಾವುದೇ ವ್ಯವಸ್ಥೆ ಮಾಡದ್ದರಿಂದ ನೀರು ರಸ್ತೆಯಲ್ಲಿಯೇ ನಿಂತು ವಾಹನಗಳು ನೀರಿನಲ್ಲಿಯೇ ಹೋಗಬೇಕಾಯಿತು. ರಸ್ತೆ ನಿರ್ಮಿಸುವಾಗಲೇ ಮಳೆ ಮತ್ತೀತರ ನೀರು ಹರಿದು ಹೋಗುವ ಯಾವುದೇ ವ್ಯವಸ್ಥೆ ಯನ್ನು ಮಾಡಿಲ್ಲ. ರಸ್ತೆ ನಿರ್ಮಾಣಕ್ಕಾಗಿ ಕೋಟ್ಯಂತರ ರೂ ಖರ್ಚು ಮಾಡುವ ಕೆಬಿಜೆಎನ್ ಎಲ್ ರಸ್ತೆ ಪಕ್ಕ ಚರಂಡಿಯಾಗಲೀ, ಡ್ರೈನೇಜ್ ಆಗಲಿ ನಿರ್ಮಿಸದಿರುವುದೇ ನೀರು ನಿಲ್ಲಲು ಕಾರಣ ಎಂದು ಗ್ರಾಮಸ್ಥರು ಆರೋಪಿಸಿದರು.
ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಸಂಚರಿಸುವ ಈ ರಸ್ತೆಯಲ್ಲಿ ಸ್ವಲ್ಪ ಮಳೆಯಾದರೂ ಇದೇ ರೀತಿ ನೀರು ನಿಲ್ಲುತ್ತದೆ.
ಇನ್ನು ನಾನಾ ಹೊಲಗಳ ತುಂಬಾ ನೀರು ನಿಂತಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

