ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣ ಅಂಚೆಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಥಳೀಯರಾದ ಯಲ್ಲಪ್ಪ ಗೋಪಾಲ ಭಜಂತ್ರಿ (೫೧) ಇವರು ಸೋಮವಾರ ಎಂದಿನಂತೆ ಕಚೇರಿಗೆ ಕಾರ್ಯನಿರ್ವಹಿಸಲು ಬಂದಾಗ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜರುಗಿದೆ.
ಕಳೆದ ೨೦ ವರ್ಷಗಳಿಂದ ಮನಗೂಳಿ ಅಂಚೆಕಚೇರಿಯಲ್ಲಿ ಜಿಡಿಎಸ್ ಪ್ಯಾಕರ್ಯಾಗಿ ಸೇವೆ ಸಲ್ಲಿಸುತ್ತಿದ್ದರು.ಇವರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಇವರ ಅಂತ್ಯಕ್ರಿಯೆ ಮನಗೂಳಿ ಪಟ್ಟಣದಲ್ಲಿ ಸಂಜೆ ನೆರವೇರಿತು.
ಹಿಂದೆ ಆರು ತಿಂಗಳ ಹೃದಯಾಘಾತ ಆಗಿತ್ತು. ಚಿಕಿತ್ಸೆ ಪಡೆದುಕೊಂಡು ಮಾತ್ರೆಯನ್ನು ನಿರಂತರವಾಗಿ ತೆಗೆದುಕೊಳ್ಳುತ್ತಿದ್ದರು. ಇವರು ಒಂದೆರಡು ದಿನ ಬಿಟ್ಟು ವೈದ್ಯರ ಹತ್ತಿರ ತಪಾಸಣೆ ಮಾಡಿಸಿಕೊಳ್ಳಲು ಹೋಗುವವರಿದ್ದರು ಎಂದು ಅವರ ಸಂಬಂಧಿ ಶಿವಾನಂದ ಭಜಂತ್ರಿ ಹೇಳಿದರು.
Subscribe to Updates
Get the latest creative news from FooBar about art, design and business.
Related Posts
Add A Comment

