Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಧರಣಿ ನಿರತರಿಂದ ರಾಜ್ಯಪಾಲರಿಗೆ ರಕ್ತದಲ್ಲಿ ಪತ್ರ ಬರೆದು ಮನವಿ
(ರಾಜ್ಯ ) ಜಿಲ್ಲೆ

ಧರಣಿ ನಿರತರಿಂದ ರಾಜ್ಯಪಾಲರಿಗೆ ರಕ್ತದಲ್ಲಿ ಪತ್ರ ಬರೆದು ಮನವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೧೪ ದಿನ ಪೂರೈಸಿದ ಡಾ.ಅಂಬೇಡ್ಕರ್ ಸಂಘದ ಅಹೋರಾತ್ರಿ ಧರಣಿ ಸತ್ಯಾಗ್ರಹ

ವಿಜಯಪುರ: ನಗರದ ಮನಗೂಳಿ ಅಗಸಿ ಹತ್ತಿರದ ಡಾ. ಬಿ.ಆರ್. ಅಂಬೇಡ್ಕರ ಸಮುದಾಯ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಡಾ ಬಿ ಆರ್ ಅಂಬೇಡ್ಕರ್ ಯುವಕ ಸಂಘದಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಸೋಮವಾರ ೧೪ನೇ ದಿನ ಪೂರೈಸಿದೆ.
೧೪ ದಿನ ಕಳೆದರೂ ವಿಜಯಪುರ ಜಿಲ್ಲಾಡಳಿತ ನೊಂದ ದಲಿತರಿಗೆ ನ್ಯಾಯ ಒದಗಿಸಲು ಮೀನಾಮೀಷ ಎಣಿಸುತ್ತಿರುವ ಕಾರಣ ಹೋರಾಟಗಾರರಾದ ಪ್ರದೀಪ ಚಲವಾದಿ ಅವರು ರಕ್ತದಲ್ಲಿ ಗೌರವಾನ್ವಿತ ರಾಜ್ಯಪಾಲರಿಗೆ ಪತ್ರ ಬರೆಯುವ ಮೂಲಕ ಕೂಡಲೇ ಸರ್ಕಾರ ದಲಿತರ ಬೇಡಿಕೆ ಸ್ಪಂದಿಸಿ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಮನಗೂಳಿ ಅಗಸಿ ಬಡಾವಣೆಯ ಹತ್ತಿರದ ಸರ್ಕಾರಿ ಜಾಗೆಯಲ್ಲಿ ೧೦೦ * ೧೦೦ ಜಾಗವನ್ನು ಮಂಜೂರು ಮಾಡಿ ನ್ಯಾಯ ಒದಗಿಸಬೇಕೆಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರದೀಪ ಚಲವಾದಿ ಅವರು ಮಾತನಾಡಿ, ಕಳೆದ ೧೪ ದಿನಗಳಿಂದ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರೂ ಕೂಡ ವಿಜಯಪುರ ಜಿಲ್ಲಾಡಳಿತ ಸಮಸ್ಯೆಯನ್ನು ಬಗೆಹರಿಸದೆ ಕಾಲ ಹರಣಮಾಡುತ್ತಿರುವ ಕಾರಣ ನಮ್ಮ ಮನಸ್ಸಿಗೆ ತೀವ್ರ ಘಾಸಿಯಾಗಿದೆ. ಕಾರಣ ನಮ್ಮ ಹಕ್ಕನ್ನು ನ್ಯಾಯಯುತವಾಗಿ ಪಡೆದುಕೊಳ್ಳಲು ಶಾಂತರೀತಿಯಿಂದ ಮಾಡುತ್ತಿದ್ದ ಪ್ರತಿಭಟನೆ ಇನ್ನುಮುಂದೆ ಉಗ್ರಸ್ವರೂಪ ಪಡೆದುಕೊಳ್ಳಲಿದೆ ಎಂಬುದರ ಸಂಕೇತವಾಗಿ ಇಂದು ನನ್ನ ರಕ್ತದಲ್ಲಿ ರಾಜ್ಯಪಾಲರಿಗೆ ಪತ್ರ ಬರೆಯುವ ಮೂಲಕ ನ್ಯಾಯ ಒದಗಿಸುವಂತೆ ಮನವಿ ಮಾಡಿಕೊಂಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಡಿಎಸ್‌ಎಸ್ ಅಂಬೇಡ್ಕರ್ ವಾದದ ಜಿಲ್ಲಾ ಪ್ರಧಾನ ಸಂಚಾಲಕ ಸಂಜು ಕಂಬಾಗಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವನ ನಿರ್ಮಾಣ ಮಾಡಲು ಜಾಗೆಯನ್ನು ನೀಡಲು ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಖಂಡನೀಯವಾದದು ಕೂಡಲೇ ಜಿಲ್ಲಾಡಳಿತ ನ್ಯಾಯ ಒದಗಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಯುವ ಮುಖಂಡ ಪ್ರತಾಪ ಚಿಕ್ಕಲಕಿ ಅವರು ಮಾತನಾಡಿ, ನ್ಯಾಯಯುತವಾಗಿ ನಮಗೆ ಸಿಗಬೇಕಾದ ಹಕ್ಕಿನ ಕುರಿತು ಹೋರಾಟ ಮಾಡುತ್ತಿದ್ದೇವೆ. ನಾವು ಕೇಳುತ್ತಿರುವುದು ಸರ್ಕಾರಿ ಜಾಗೆ, ಅನಧಿಕೃತ ಖಾಸಗಿ ವ್ಯಕ್ತಿಗಳು ಸರ್ಕಾರಿ ಜಾಗೆಯನ್ನು ನೀಡಲು ತಕರಾರು ತೆಗೆಯುತ್ತಿರುವುದು ಎಷ್ಟು ಸರಿ ಇದು ಅವರ ಸಂವಿಧಾನ ಬಾಹೀರ ನೀತಿಯನ್ನು ಎತ್ತಿ ತೋರಿಸುತ್ತದೆ. ವಿಜಯಪುರ ಜಿಲ್ಲಾಡಳಿತ ಪಾರದರ್ಶಕವಾಗಿ ನಮಗೆ ನ್ಯಾಯ ಒದಗಿಸುವ ಮೂಲಕ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ನೈಜ ಗೌರವ ಸಲ್ಲಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷ ಶ್ರೀಶೈಲ ಕಾಖಂಡಕಿ, ಕಾರ್ಯದರ್ಶಿ ಸತೀಶ ಕುಬಕಡ್ಡಿ, ಬಸವರಾಜ ಕುಬಕಡ್ಡಿ, ಬಸವಕುಮಾರ ಕಾಂಬಳೆ, ರಾಜು ಕಾಖಂಡಕಿ, ಜಗದೀಶ ಕೂಡಗಿ, ಚೇತನ ಜವಳಿ, ಆಕಾಶ ಕಾಂಬಳೆ, ಕೀರ್ತಿ ಕಾಖಂಡಕಿ, ಕೀರ್ತಿಕಮಾರ ಕಾಖಂಡಕಿ, ರಾಜು ಕಾಖಂಡಕಿ, ಪರಶುರಾಮ ಕಾಖಂಡಕಿ, ರವಿ ಕಾಖಂಡಕಿ, ಚಿಕ್ಕಯ್ಯ ಕಾಖಂಡಕಿ, ಕಿರಣ ಕಾಖಂಡಕಿ, ರಾಜು ವಾಲೀಕಾರ, ರೋಹಿತ ಮಲಕಣ್ಣವರ, ರಾಜರತನ ಕಾಂಬಳೆ, ಶಿವರಾಜ ಕೂಡಗಿ, ಬಾಬು ಶಿವಶರಣ, ಕೃಷ್ಣಾ ಚಲವಾದಿ, ರಿತೇಶ ಕಾಖಂಡಕಿ, ಶಿವು ಕೂಡಗಿ, ಸಚೀನ ಕಾಖಂಡಕಿ, ಅರವಿಂದ ಕಾಖಂಡಕಿ, ಮುದಕಪ್ಪ ವಾಲೀಕಾರ, ಆಕಾಶ ಚಲವಾದಿ, ಶನ್ನಿ ಕಾಖಂಡಕಿ, ಬಸವರಾಜ ಕಾಖಂಡಕಿ, ಅಜಯ ಕಾಖಂಡಕಿ, ಆಶಾ ಮಾನೆ, ಅಶ್ವಿನಿ ಕುಬಕಡ್ಡಿ, ಮಧು ಕಾಖಂಡಕಿ, ಮೀನಾಕ್ಷಿ ಕಾಖಂಡಕಿ, ಸುನಂದಾ ಕಾಖಂಡಕಿ, ಕಸ್ತೂರಿ ಕಾಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ

ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ

ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಪ್ರವಾಸಗಳು :ಹಿರೇಮಠ
    In (ರಾಜ್ಯ ) ಜಿಲ್ಲೆ
  • ಸಾತಿಹಾಳ-ರಬಿನಾಳ ಸಂಪರ್ಕ ರಸ್ತೆ ಸುಧಾರಣೆಗೆ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಹಿಂದುತ್ವದ ಮೂಲಕ ದೇಶ, ಸಂವಿಧಾನವನ್ನು ಗೌರವಿಸೋಣ
    In (ರಾಜ್ಯ ) ಜಿಲ್ಲೆ
  • ಶಾಸಕ ಮನಗೂಳಿ ಯಿಂದಅಹವಾಲು ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಇಂದು ವ್ಯಸನಮುಕ್ತ ಶಿಬಿರದ ಸಮಾರೋಪ :ಅಲ್ಲಾಪೂರ
    In (ರಾಜ್ಯ ) ಜಿಲ್ಲೆ
  • ಸಿಂದಗಿ: ಇಂದು ವಿದ್ಯುತ್ ವ್ಯತ್ಯೆಯ
    In (ರಾಜ್ಯ ) ಜಿಲ್ಲೆ
  • ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಈ ಜಗವೆಲ್ಲ..
    In ವಿಶೇಷ ಲೇಖನ
  • ಕುಡಿವ ನೀರಿನ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಶರಣ ಭೋಗಣ್ಣನವರ ಕುರಿತು ಸಂಶೋಧನೆ ಅಗತ್ಯ :ಗೋಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.