ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಅರವಿಂದ ಬಡಾವಣೆಯಲ್ಲಿ ಜೂ.೫ ರಂದು ಬೆಳಿಗ್ಗೆ ೧೦ಗಂಟೆಗೆ ವಿಶ್ವ ಪರಿಸರ ದಿನಾಚರಣೆಯ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಅರಣ್ಯ ಇಲಾಖೆ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜರುಗುವ ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಉದ್ಘಾಟಿಸುವರು. ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಳಗಿಡದ ಉಪಸ್ಥಿತಿಯಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ನಾಗರಾಜ ಪೂಜಾರ ಮತ್ತು ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ತಹಶೀಲ್ದಾರ ಬಸವರಾಜ ನಾಗರಾಳ, ತಾಲೂಕು ಪಂಚಾಯತ ಪ್ರಭಾರ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಎಸ್.ಕಲ್ಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ, ವಲಯ ಅರಣ್ಯಾಧಿಕಾರಿ ಬಿ.ಐ.ಬಿರಾದಾರ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಸ್.ಜಿ.ಸಂಗಾಲಕ, ಹಸಿರುತೋರಣ ಗೆಳೆಯರ ಬಳಗದ ಡಾ.ವಿರೇಶ ಇಟಗಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಸಿಡಿಪಿಓ ಶಿವಮೂರ್ತಿ ಕುಂಬಾರ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
