Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬರಡು ಭೂಮಿಯಲ್ಲಿ ಕಾಡು ಬೆಳೆದ ಯುವಕರು
(ರಾಜ್ಯ ) ಜಿಲ್ಲೆ

ಬರಡು ಭೂಮಿಯಲ್ಲಿ ಕಾಡು ಬೆಳೆದ ಯುವಕರು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿಮ್ಮಡದ ಯುವಕರ ಪರಿಸರ ಪ್ರೇಮ | ಅರಣ್ಯ ಇಲಾಖೆ & ಗ್ರಾಮ ಪಂಚಾಯತಿ ಸಾಥ್

– ಇಲಾಹಿ ಇ. ಜಮಖಂಡಿ
ಚಿಮ್ಮಡ: ಕಾಡು ಬೆಳೆಸಿ, ನಾಡು ಉಳಿಸಿ. ಅರಣ್ಯ ಇಲಾಖೆಯ ಈ ಘೋಷವಾಕ್ಯವನ್ನು ಅಕ್ಷರಶಃ ನಿಜವಾಗಿಸಿದ್ದಾರೆ ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ಪರಿಸರ ಪ್ರೇಮಿ ಯುವಕರು.
ಮನೆಯ ಮಂದೆ ಒಂದು ಸಸಿ ನೆಟ್ಟು ಪೋಷಣೆ ಮಾಡಲಾಗದ ಇಂದಿನ ದಿನಮಾನದಲ್ಲಿ ಯಾವುದೇ ಫಲಾಪೆಕ್ಷೆ ಇಲ್ಲದೇ ಗ್ರಾಮದ ಗುಡ್ಡದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದ ಸುತ್ತ ೨೪ ಎಕರೆ ಬರಡು ತಗ್ಗು ದಿನ್ನೆ ಇರುವ ಪ್ರದೇಶದಲ್ಲಿ ಹಾಗೂ ಹಿಂದೂ ರುದ್ರಭೂಮಿಯ ೮ ಎಕರೆ ಭೂಮಿಯಲ್ಲಿ ವಿವಿಧ ಬಗೆಯ ಸುಮಾರು ೫ ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಣೆ ಮಾಡುವ ಮೂಲಕ ಈ ಭಾಗದಲ್ಲಿ ಪರಿಸರ ಕ್ರಾಂತಿಯನ್ನೇ ಮಾಡಿದ್ದಾರೆ.
ಕಳೆದ ೨೦ ವರ್ಷಗಳ ಹಿಂದೆ ಗ್ರಾಮದ ಲಾಲಸಾಬ ಸರ್ಕಾವಸ ಎಂಬಾತ ದೇವಸ್ಥಾನದ ಆವರಣದಲ್ಲಿ ನೂರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಘಟಪ್ರಭಾ ಎಡದಂಡೆ ಕಾಲುವೆಯಿಂದ ಹೆಗಲ ಮೇಲೆ ನೀರು ಹೊತ್ತು ತಂದು ನೀರುಣಿಸಿ ಅವುಗಳನ್ನು ಪೋಷಣೆ ಮಾಡಿದ್ದರು, ಅನಾರೋಗ್ಯದಿಂದ ಲಾಲಸಾಬ ಮೃತನಾದ ನಂತರ ಆ ಜವಾಬ್ದಾರಿಯನ್ನು ಸಮಾಜ ಮುಖಿ ಯುವಕರು ಸಂಘಟಿತರಾಗಿ ಗಿಡಗಳ ಪೋಷಣೆಗೆ ಮುಂದಾದರು, ಅಂದಿನಿಂದ ಇದುವರೆಗೆ ಮೂರು ಹಂತಗಳಲ್ಲಿ ಸುಮಾರು ಐದು ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟು ಅವುಗಳ ಪೋಷಣೆ ಮಾಡುತಿದ್ದಾರೆ. ನೀರಿನ ಅಭಾವ ಉಂಟಾದಾಗ ಟ್ಯಾಂಕರ ಮೂಲಕ ನೀರು ಪೋರೈಸುತಿದ್ದರು. ನಂತರ ಗ್ರಾಮಸ್ಥರ ಸಹಕಾರ ದೊಂದಿಗೆ ಎರಡು ಸ್ವಂತ ಕೊಳವೇಬಾವಿಗಳನ್ನೇ ಕೊರೆದು ಹನಿ ನೀರಾವರಿ ಪದ್ದತಿಯ ಮೂಲಕ ನೀರು ಪೋರೈಸಿ ನೆಡಲಾದ ಗಿಡಗಳಲ್ಲಿ ಒಂದೂ ಗಿಡ ಹಾಳಾಗದಂತೆ ಬೆಳೆಸುವ ಮೂಲಕ ಗ್ರಾಮವನ್ನು ತಂಪಾಗಿಸಿದ್ದಾರಲ್ಲದೇ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಓರ್ವ ಕಾವಲುಗಾರನನ್ನೂ ನೇಮಕ ಮಾಡಿ ಗಿಡ ಮರಗಳನ್ನು ಪೋಷಿಸಲಾಗುತ್ತಿದೆ.
ಗ್ರಾಮದಲ್ಲಿ ಪ್ರತಿವರ್ಷ ನಡೆಯುವ ಶ್ರೀ ಪ್ರಭುಲಿಂಗೇಶ್ವರ ಜಾತ್ರೆಯಲ್ಲಿ ಲಕ್ಷಾಂತರ ಜನ ಪ್ರಸಾದ ಸ್ವೀಕರಿಸುವ ಮೈದಾನದಲ್ಲಿ ಬಿಸಿಲೇ ಬಾರದಂತೆ ದಟ್ಟ ಮರಗಳನ್ನು ಬೆಳೆಸಿ ಇಡೀ ವಾತಾವರಣವನ್ನೇ ಕಾಡಿನಂತೆ ಬೆಳೆಸಲಾಗಿದೆ. ಇಂಪಾಗಿ ಬೆಳೆದಿರುವ ಈ ಗಿಡಗಳ ಅಂದ ನೇರೆಯ ಗ್ರಾಮ ಪಟ್ಟಣದ ಯುವಕರಿಗೆ ಸೆಲ್ಫಿ ಸ್ಫಾಟ್, ರೀಲ್ಸ ಚಿತ್ರೀಕರಣದ ತಾಣವಾಗಿ ಪರಿಚಿತವಾಗಿದೆ.


“ಸಂಘಟಣೆಯಲ್ಲಿ ಸಮಾನ ಮನಸ್ಕ ಸದಸ್ಯರಿರುವುದರಿಂದ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಹಕಾರಿಯಾಗಿದೆ, ಗ್ರಾಮದುದ್ದಕ್ಕೂ ಹಸಿರು ವನ ನಿರ್ಮಿಸಿ ಬೆಸಿಗೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ಅನುಕೂಲವಾಗುವಂತೆ ನೂರಾರು ಹಣ್ಣು ಹಂಪಲಗಳ ಗಿಡಗಳನ್ನು ನೆಡಲಾಗಿದೆ. ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ, ಗ್ರಾಮ ಪಂಚಾಯತಿ ಹಾಗೂ ಗ್ರಾಮದ ಪ್ರಮುಖರು ನಮ್ಮ ಪ್ರತಿಯೊಂದು ಕಾರ್ಯಕ್ಕೆ ಸಹಕಾರ ನೀಡುತಿದ್ದು ಮುಂಬರುವ ದಿನಗಳಲ್ಲಿ ಗ್ರಾಮವನ್ನು ಪ್ರವಾಸಿ ಸ್ಥಳವನ್ನಾಗಿ ರೂಪಿಸುವ ಯೋಚನೆಯಿದೆ.”

– ಬಸವರಾಜ ಬಳಗಾರ,
ಅಧ್ಯಕ್ಷರು ಬಸವೇಶ್ವರ ಯುವಕ ಸಂಘ ಚಿಮ್ಮಡ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.