ಚಡಚಣ: 2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತ ಎಣಿಕೆ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಚಿತ್ರದುರ್ಗ ಕ್ಷೇತ್ರದಿಂದ ಗೋವಿಂದ ಕಾರಜೋಳ ಅವರು ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಚಡಚಣ ಪಟ್ಟಣದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆಯನ್ನು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಆಚರಿಸಿದರು.
ಪಟ್ಟಣದ ಬಸವೇಶ್ವರ ವೃತ್ತ, ಬಜಾರ್ ರಸ್ತೆ ಹಾಗೂ ದೇವರ ದಾಸಿಮಯ್ಯ ವೃತ್ತ, ಹೀರೋ ಶೋ ರೂಮ್ ನ ಮುಂಭಾಗದಲ್ಲಿ ಸೇರಿ ಪ್ರಮುಖ ಬೀದಿಗಳಲ್ಲಿ ನೂರಾರು ಬೈಕ್ ರ್ಯಾಲಿ ನಡೆಸಿ, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹರ್ಷವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಸಚಿನ್ ಅವಟಿ, ಕಾರ್ಯಕರ್ತರಾದ ಗಣಪತಿ ಅವಟಿ, ಮಂಜುನಾಥ ಅವಟಿ, ಕಲ್ಲಪ್ಪ ಮೇತ್ರಿ, ಸುಭಾಸ ಮೇತ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

