ಬಸವನಬಾಗೇವಾಡಿ: ಪಟ್ಟಣದ ನಂದಿ ಬಡಾವಣೆಯ ಉದ್ಯಾನವನದಲ್ಲಿ ವಿವೇಕ ಬ್ರಿಗೇಡ್ ದಿಂದ ಬುಧವಾರ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆಯಲ್ಲಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಸಸಿ ನೆಟ್ಟು ನೀರುಣಿಸುವ ಮೂಲಕ ಸಸಿಗಳ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂದಿ ಬಡಾವಣೆ ಉದ್ಯಾವನದ ಆವರಣದಲ್ಲಿ ವಿವೇಕ ಬ್ರಿಗೇಡ್ ದಿಂದ ಸಸಿಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಯಲ್ಲಾಲಿಂಗ ಮಠದ ಪೂಜ್ಯರು, ಮುಖಂಡರಾದ ರವಿಗೌಡ ಚಿಕ್ಕೊಂಡ, ವಿನುತ ಕಲ್ಲೂರ, ಮಲ್ಲಿಕಾರ್ಜುನ ಅವಟಿ, ಸಂಗಮೇಶ ಹುಜರತಿ, ಸಚಿನ್ ಕಲ್ಲೂರ, ಶ್ರೀಕಾಂತ್ ಕೊಟ್ರಶೆಟ್ಟಿ, ಕುಮಾರ್ ಕಲ್ಲೂರ, ಪ್ರಭಾಕರ ಖೇಡ, ಸಂಗಮೇಶ ಕುಂಬಾರ, ಶಿವಾನಂದ ತೋಳನೂರ, ಪೃಥ್ವಿರಾಜ ನಾಯ್ಕೋಡಿ, ಕುಶಾಲ ಕೊಟ್ರಶೆಟ್ಟಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

