ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ಜೂ.೧೧ ರಂದು ವಿಜಯಪುರದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿವಿಧ ಬೆಳೆಗಳಲ್ಲಿ ಬೀಜೋಪಚಾರ ಮಹತ್ವ ಹಾಗೂ ವಿಧಾನಗಳ ಕುರಿತು ಉಚಿತ ತರಬೇತಿ ಆಯೋಜಿಸಲಾಗಿದೆ.
ಆಸಕ್ತ ರೈತರು ತರಬೇತಿಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಕೋರಿದ್ದಾರೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಹಾಗೂ ನೊಂದಣಿಗಾಗಿ ಕೃಷಿ ಅಧಿಕಾರಿ ಶ್ರೀಮತಿ ಫಾತಿಮಾ ಬಾನು ಸುತಾರ್ ಮೊ: ೯೮೮೬೧೩೪೩೧೦ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
