ಮುದ್ದೇಬಿಹಾಳ: ಆಸ್ತಿ ವಿಚಾರವಾಗಿ ವ್ಯಕ್ತಿಯ ಹತ್ಯೆ ನಡೆದಿರುವ ಘಟನೆ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ವರದಿಯಾಗಿದೆ.
ಬಾಲಪ್ಪ ಅಮರಪ್ಪ ಕ್ಷತ್ರಿ (೪೫) ಕೊಲೆಗೀಡಾದ ದುರ್ದೈವಿ. ಜಮೀನಿನ ಬದುವಿಗೆ ಸಂಬಂಧಿಸಿದಂತೆ ಈ ಕೊಲೆ ನಡೆದಿದೆ ಎನ್ನಲಾಗಿದೆ.
ಮೊದಲಿನಿಂದಲೂ ಜಮೀನಿನ ವಿಷಯದಲ್ಲಿ ಕಲಹಗಳಿದ್ದು ಗುರುವಾರವೂ ಜಮೀನಿನ ಬದುವಿಗೆ ಸಂಬಂಧಿಸಿದಂತೆ ಪುನಃ ಗಲಾಟೆಗಳಾಗಿವೆ. ಮಾತಿಗೆ ಮಾತು ಬೆಳೆದು ಅತಿರೇಕಕ್ಕೇರಿ ಮಾರಕಾಸ್ತçಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮೃತ ದೇಹದ ತಲೆಯ ಭಾಗ ಸೊಂಟದ ಭಾಗದಲ್ಲಿ ಹೆಚ್ಚು ಪೆಟ್ಟು ಬಿದ್ದಿದ್ದು ಅತೀಯಾದ ರಕ್ತಸ್ರಾವವಾಗಿದೆ. ಮೃತ ದೇಹದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಪಿಎಸ್ಐ ಸಂಜೀವ ತಿಪರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

