ಮುದ್ದೇಬಿಹಾಳ: ವಿಜಯಪುರ ಜಿಲ್ಲೆಯ ಸಂಸದ ರಮೇಶ ಜಿಗಜಿಣಗಿಯವರಿಗೆ ನೂತನ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಮಾಜಿ ಭೂ ನ್ಯಾಯ ಮಂಡಳಿ ಸದಸ್ಯ ಎಸ್.ಎಚ್.ಲೋಟಗೇರಿ ವಕೀಲರು ಬಿಜೆಪಿ ಕೇಂದ್ರ ಹಾಗೂ ರಾಜ್ಯ ನಾಯಕರಿಗೆ ಒತ್ತಾಯಿಸಿದರು.
ಈ ಕುರಿತು ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಗಜಿಣಗಿಯವರು ೨ ಬಾರಿ ಶಾಸಕರಾಗಿ ಹಾಗೂ ೭ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಮತ್ತು ಹೈದರಾಬಾದ ಕರ್ನಾಟಕ ಮತ್ತು ಮುಂಬೈ ಕರ್ನಾಟಕದಲ್ಲಿ ಏಕೈಕ ದಲಿತ ವ್ಯಕ್ತಿ. ಸಾರ್ವಜನಿಕ ಜೀವನದಲ್ಲಿ ಸರಳವಾಗಿ ಬೆರೆಯುವ, ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಇವರಿಗೆ ಸಾಕಷ್ಟು ಅನುಭವವಿದೆ. ರಾಜಕೀಯ ರಂಗದಲ್ಲಿ ೧ ಕಪ್ಪು ಚುಕ್ಕೆ ಇಲ್ಲದ, ಅಜಾತ ಶತ್ರು ಎನ್ನಿಸಿಕೊಂಡ ಇವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಭಾಜಪಾ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಹೇಮರೆಡ್ಡಿ ಮೇಟಿ ಮಾತನಾಡಿ, ಜಿಗಜಿಣಗಿಯವರಿಗೆ ಸಚಿವ ಸ್ಥಾನ ನೀಡಿದಲ್ಲಿ ಅಖಂಡ ವಿಜಯಪುರ ಜಿಲ್ಲೆ ಆದ್ಯತೆ ಕೊಟ್ಟಂತಾಗುತ್ತದೆ. ಜಿಲ್ಲೆಗೆ ಸಾಕಷ್ಟು ಅನುದಾನ ತಂದ ಕೀರ್ತಿ ಅವರಿಗಿದೆ. ಜನಸಾಮಾನ್ಯರ ಜೊತೆ ಹೆಚ್ಚಿನ ಒಡನಾಟ, ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದಾರೆ. ಇವರಿಗೆ ಪ್ರಾಧಾನ್ಯತೆ ನೀಡಬೇಕು ಎಂದರು. ಈ ವೇಳೆ ಮಲ್ಲಯ್ಯ ಬಿರಾದಾರ ಸೇರಿದಂತೆ ಮತ್ತೀತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

