ಢವಳಗಿ: ಮುಂದಿನ ಪೀಳಿಗೆಗೆ ನಾವು ಪರಿಸರವನ್ನು ಉಳಿಸಿ ಹೋಗಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು ಗಿಡಗಳನ್ನು ನೆಡುವ ಮೂಲಕ ಪ್ರತಿಯೊಬ್ಬರು ಹಸಿರು ಉಳಿಸುವ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಬೆಂಗಳೂರಿನ ಸರ್ದಾರ್ ವಲ್ಲಭಬಾಯಿ ಪಟೇಲ್ ಸೊಸೈಟಿಯ ಮುಖ್ಯಸ್ಥ ಡಾ.ಬಾಲಕೃಷ್ಣ ರೆಡ್ಡಿ ಹೇಳಿದರು.
ತಾಲ್ಲೂಕಿನ ಢವಳಗಿಯ ಮಡಿವಾಳೇಶ್ವರ ಉಚಿತ ಪ್ರಸಾದ ನಿಲಯದ ಆವರಣದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸರ್ದಾರ್ ವಲ್ಲಭಬಾಯಿ ಪಟೇಲ್ ಸೊಸೈಟಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪರಿಸರ ನಮಗೆ ಎಲ್ಲವನ್ನೂ ಕೊಟ್ಟಿದೆ. ಆದರೆ ಮನುಷ್ಯರು ಪರಿಸರಕ್ಕೆ ಹಾನಿಯನ್ನೇ ಮಾಡುತ್ತ ಹೊರಟಿದ್ದು ಉಷ್ಣಾಂಶದ ನಿಯಂತ್ರಣಕ್ಕೆ ಗಿಡಗಳನ್ನು ಬೆಳೆಸಿ ಅವುಗಳನ್ನು ಕಾಪಾಡುವುದೇ ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದರು.
ಮುಖಂಡ ಉಮೇಶ ಕಮ್ಮಾರ ಮಾತನಾಡಿ, ಪರಿಸರದ ಉಳಿವಿನಿಂದ ಜೀವ ಸಂಕುಲದ ಉಳಿವು ಸಾಧ್ಯ. ಬೇಸಿಗೆಯಲ್ಲಿ ಎದುರಿಸಿದ ಕಷ್ಟವನ್ನು ನಾವೆಲ್ಲ ಗಮನಿಸಿದ್ದೇವೆ. ಶಾಖ, ಉಷ್ಣಾಂಶವನ್ನು ಹೆಚ್ಚಳಗೊಳ್ಳಲು ಬಿಡದೇ ಪರಿಸರದ ಸಮತೋಲನಕ್ಕೆ ಅಗತ್ಯವಿರುವ ಕಾರ್ಯಗಳನ್ನು ಸಂಘ ಸಂಸ್ಥೆಗಳು,ಸಾಮಾಜಿಕ ಸಂಘಟನೆಗಳು ಕೈಗೊಳ್ಳಬೇಕು ಎಂದರು.
ಶಿಬಿರದ ಆಯೋಜಕ ಮಲ್ಲಿಕಾರ್ಜುನ ಸಿದರೆಡ್ಡಿ, ನಾನಾಗೌಡ ಕೊಣ್ಣೂರ, ಸಿಬ್ಬಂದಿ ಅಂಜು ಅರವಿಂದ, ಹರೀಶ, ಆಕಾಶ ಸಿದರೆಡ್ಡಿ, ಪತ್ರಕರ್ತ ಶಂಕರ ಹೆಬ್ಬಾಳ, ಮತ್ತು ಗುಲಾಮ ದಪೇದರ ಸೇರಿದಂತೆ ಹಲವರು ಇದ್ದರು.
ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ 50ಕ್ಕೂ ಹೆಚ್ಚು ಜನರಿಗೆ ಬಿಪಿ,ಶುಗರ್ ಹಾಗೂ ವಿವಿಧ ಕಾಯಿಲೆಗಳಿಗೆ ಆಕ್ಯುಪ್ರೆಶರ್ ಮೂಲಕ ತಪಾಸಣೆ ನಡೆಸಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

