Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಹುಲ್ ಗಾಂಧಿಗೆ ಲೋಕಸಭೆಯ ವಿಪಕ್ಷ ನಾಯಕನ ಪಟ್ಟ?
(ರಾಜ್ಯ ) ಜಿಲ್ಲೆ

ರಾಹುಲ್ ಗಾಂಧಿಗೆ ಲೋಕಸಭೆಯ ವಿಪಕ್ಷ ನಾಯಕನ ಪಟ್ಟ?

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೋಕಸಭೆಯಲ್ಲಿ ಬಿಜೆಪಿ ಬಳಿಕ 99 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ | ಸಿಡಬ್ಲ್ಯುಸಿ ಸದಸ್ಯರಿಂದ ನಿರ್ಣಯ ಅಂಗೀಕಾರ

ನವದೆಹಲಿ: ರಾಹುಲ್ ಗಾಂಧಿ ‘ಮ್ಯಾನ್ ಆಫ್ ದಿ ಮ್ಯಾಚ್’ ಆಗಿದ್ದಾರೆ. ಅವರು ಸದನದಲ್ಲಿ ವಿರೋಧ ಪಕ್ಷದ ನಾಯಕನಾಗಬೇಕು ಎಂದು ಕಾಂಗ್ರೆಸ್‌ ಹಿರಿಯ ನಾಯಕ ಶಶಿ ತರೂರ್ ಆಗ್ರಹಿಸಿದ್ದು, ಇದೇ ರೀತಿಯ ಬೇಡಿಕೆಯನ್ನು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಸೇರಿ ಹಲವು ಕಾಂಗ್ರೆಸ್‌ ನಾಯಕರು ಮುಂದಿಟ್ಟಿದ್ದಾರೆ.
ಇದಲ್ಲದೆ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಬೇಕು ಎಂದು ಸಿಡಬ್ಲ್ಯುಸಿ ಸದಸ್ಯರು ನಿರ್ಣಯ ಅಂಗೀಕರಿಸಿದ್ದಾರೆ.
ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶಶಿ ತರೂರ್, ಈ ಜನಾದೇಶವು ಬಿಜೆಪಿಯ ದುರಹಂಕಾರ ಮತ್ತು ವರ್ತನೆಗೆ ಮತದಾರರು ನೀಡಿರುವ ಜನಾದೇಶದ ಸಂದೇಶವಾಗಿದೆ. ಸರ್ಕಾರವನ್ನು ನಡೆಸುವಾಗ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಮೋದಿ ಮತ್ತು ಅಮಿತ್ ಶಾ ಅವರಿಗೆ ಇದು ಒಂದು ಸವಾಲಾಗಿದೆ ಮತ್ತು ಇದು ಅವರ ಕಾರ್ಯಚಟುವಟಿಕೆಯನ್ನು ಬದಲಾಯಿಸುವ ಮತ್ತು ಹೆಚ್ಚು ಹೊಂದಿಕೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಈ ಬಾರಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಕೆಲವು ವಿಷಯಗಳಲ್ಲಿ ‘ಮಜ್ಬೂರ್ ಸರ್ಕಾರ’ (ಅಸಹಾಯಕ ಸರ್ಕಾರ) ಎಂದು ಸಾಬೀತುಪಡಿಸಬಹುದು, ಏಕೆಂದರೆ ಎನ್‌ಡಿಎ ಭಾಗವಾಗಿರುವ ಎಲ್ಲಾ ಪಕ್ಷಗಳು ಎಲ್ಲವನ್ನೂ ಒಪ್ಪಿಕೊಳ್ಳಬೇಕಾಗುತ್ತದೆ ಹೇಳಿದ್ದಾರೆ.
ಈಗಾಗಲೇ ಅಗ್ನಿವೀರ್ ಯೋಜನೆಯ ಬಗ್ಗೆ ಒಂದು ಪಕ್ಷವು ಪ್ರಶ್ನೆಗಳನ್ನು ಎತ್ತಿದೆ, ಅದನ್ನು ಪರಿಶೀಲಿಸಬೇಕಾಗಿದೆ. ಆಂದ್ರಕ್ಕೆ ಬಿಜೆಪಿ ಸರ್ಕಾರವು ಈವರೆಗೆ ನೀಡಲು ನಿರಾಕರಿಸಿದ್ದ ವಿಶೇಷ ವರ್ಗದ ಸ್ಥಾನಮಾನಕ್ಕೆ ಬೇಡಿಕೆ ಕೇಳಿ ಬಂದಿದೆ, ಅದನ್ನು ಮರುಪರಿಶೀಲಿಸಬೇಕಾಗಿದೆ ಎಂದು ಅವರು ಹೇಳಿದರು.
ಮೋದಿ ಸರಕಾರವು ಕಳೆದ 10 ವರ್ಷಗಳಲ್ಲಿ ಸಂಸತ್ತನ್ನು ಸೂಚನಾ ಫಲಕದಂತೆ ಪರಿಗಣಿಸಿದೆ. ಈಗ 230ಕ್ಕೂ ಹೆಚ್ಚು ಸಂಸದರ ಪ್ರಬಲ ವಿರೋಧವಿರುವ ಕಾರಣ ಈಗ ಅದು ಸಾಧ್ಯವಿಲ್ಲ. ರಾಹುಲ್ ಹಾಗೂ ಮಲ್ಲಿಕಾರ್ಜುನ ಖರ್ಗೆ ದೇಶದಾದ್ಯಂತ ವ್ಯಾಪಕ ಪ್ರಚಾರ ನಡೆಸಿದ್ದಾರೆ. ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಾಗಾಗಿ ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹುದ್ದೆ ವಹಿಸುವುದು ಸೂಕ್ತವೆನಿಸಲಿದೆ ಎಂದು ಹೇಳಿದ್ದಾರೆ.
ಲೋಕಸಭೆಯಲ್ಲಿ ಬಿಜೆಪಿ ಬಳಿಕ 99 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅಲ್ಲದೆ ಆಡಳಿತ ಪಕ್ಷವನ್ನು ಎದುರಿಸಲು ಹೆಚ್ಚಿನ ಸಂಖ್ಯಾ ಬಲ ಹೊಂದಿರುವ ಪಕ್ಷದ ಜನಪ್ರಿಯ ನಾಯಕ ವಿಪಕ್ಷದ ಸ್ಥಾನ ವಹಿಸುವುದು ಹೆಚ್ಚು ಸೂಕ್ತವೆನಿಸಲಿದೆ ಎಂದು ಶಶಿ ತರೂರ್‌ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳಬೇಕು ಎಂದು ಹಲವಾರು ಕಾಂಗ್ರೆಸ್ ನಾಯಕರು ತಮ್ಮ ಬೇಡಿಕೆಯನ್ನು ವ್ಯಕ್ತಪಡಿಸಿದ್ದಾರೆ.
ಎಲ್ಲವನ್ನೂ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ರಾಹುಲ್ ಗಾಂಧಿ ಅವರು ಪ್ರತಿಪಕ್ಷದ ಪ್ರಮುಖ ನಾಯಕರಾಗಿ ಹೊರಹೊಮ್ಮಬೇಕು ಎಂದು ಇಡೀ ದೇಶ ಒತ್ತಾಯಿಸುತ್ತದೆ. ಈ ಸ್ಥಾನವು ಅವರಿಗೆ ಸೂಕ್ತವಾಗಿದೆ ಎಂದು ಪ್ರತಾಪ್ ಸಿಂಗ್ ಬಾಜ್ವಾ ಹೇಳಿದ್ದಾರೆ.
ಲುಧಿಯಾನದಿಂದ ಆಯ್ಕೆಯಾಗಿರುವ ಸಂಸದ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಅಂತಿಮ ನಿರ್ಧಾರವು ಪಕ್ಷದ ನಾಯಕತ್ವದ ಮೇಲಿದೆ ಮತ್ತು ಈ ಪಾತ್ರವನ್ನು ವಹಿಸಬೇಕೇ ಎಂಬುದನ್ನು ನಿರ್ಧರಿಸುವುದು ರಾಹುಲ್ ಗಾಂಧಿ ಅವರದ್ದಾಗಿದೆ. ರಾಹುಲ್ ಗಾಂಧಿ ಮುಂದೆ ಬಂದು ಎಲ್ಲವನ್ನೂ ನಿಭಾಯಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಆದರೆ ನಾಯಕತ್ವದ ಅಂತಿಮ ನಿರ್ಧಾರ ರಾಹುಲ್ ಗಾಂಧಿ ಅವರೇ ನಿರ್ಧರಿಸಬೇಕು ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಅಲಂಕರಿಸಬೇಕು. ರಾಹುಲ್ ಗಾಂಧಿ ಮಹಿಳೆಯರು ಮತ್ತು ನಿರುದ್ಯೋಗಿಗಳ ಪರ ಹೋರಾಟ ನಡೆಸುತ್ತಿದ್ದಾರೆ. ಇದು 140 ಕೋಟಿ ಭಾರತೀಯರ ಬೇಡಿಕೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ.
ಗುರುದಾಸ್‌ಪುರದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಕಾಂಗ್ರೆಸ್ ಸಂಸದ ಸುಖ್‌ಜಿಂದರ್ ಸಿಂಗ್ ರಾಂಧವಾ ಈ ಬಗ್ಗೆ ಮಾತನಾಡಿದ್ದು, ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಪ್ರಧಾನಿಗೆ ಪ್ರತ್ಯುತ್ತರ ನೀಡಬಲ್ಲವರು ಮತ್ತು ಆದ್ದರಿಂದ ಅವರು ವಿಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.