Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೂ.೧೩ – ೧೪ ರಂದು ಇಂಗಳೇಶ್ವರ ಉತ್ಸವ
(ರಾಜ್ಯ ) ಜಿಲ್ಲೆ

ಜೂ.೧೩ – ೧೪ ರಂದು ಇಂಗಳೇಶ್ವರ ಉತ್ಸವ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಮಠದ ಲಿಂ.ಸಿದ್ದಲಿಂಗ ಶಿವಯೋಗಿಗಳವರ ೯೦ ನೇ ಜಾತ್ರಾಮಹೋತ್ಸವದಂಗವಾಗಿ ಜೂ. ೧೩ ಹಾಗೂ ೧೪ ರಂದು ಎರಡು ದಿನಗಳ ಕಾಲ ಇಂಗಳೇಶ್ವರ ಉತ್ಸವ, ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಜೂ.೧೩ ರಂದು ಸಂಜೆ ೪ ಗಂಟೆಗೆ ಬಸವೇಶ್ವರ ವಚನ ಶಿಲಾ ಮಂಟಪದ ರೂವಾರಿ ಚನ್ನಬಸವ ಶಿವಯೋಗಿಗಳವರ ಅಭಿನಂದನಾ ಗ್ರಂಥ ನಿರಂಜನ ಜ್ಯೋತಿ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ನಿಡಸೋಸಿ ಜಗದ್ಗುರು ಪಂಚಮಶಿವಲಿಂಗೇಶ್ವರ ಸ್ವಾಮೀಜಿ, ಧಾರವಾಡದ ಮಲ್ಲಿಕಾರ್ಜುನ ಸ್ವಾಮೀಜಿ, ಸಿಂದಗಿಯ ಪ್ರಭುಸಾರಂಗದೇವ ಶಿವಾಚಾರ್ಯ ಸ್ವಾಮೀಜಿ, ವಿಜಯಪುರದ ಬಸವಲಿಂಗ ಸ್ವಾಮೀಜಿ, ಇಲಕಲ್ಲದ ಗುರುಮಹಾಂತ ಸ್ವಾಮೀಜಿ, ಕಪ್ಪತಗುಡ್ಡದ ಶಿವಕುಮಾರ ಸ್ವಾಮೀಜಿ ಸಾನಿಧ್ಯ ವಹಿಸುವರು. ಈ ಕಾರ್ಯಕ್ರಮಕ್ಕೆ ಸಚಿವ ಎಂ.ಬಿ.ಪಾಟೀಲ, ಸೋಪು ಮತ್ತು ಡಿಟರ್ಜಂಟ ಲಿಮಿಟೆಡ್ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡ, ಮಾಜಿ ಸಚಿವ ಎಸ್.ಆರ್.ಪಾಟೀಲ, ವನ್ಯಜೀವಿ ಸಂರಕ್ಷಕ ಡಾ.ಎಂ.ಆರ್.ದೇಸಾಯಿ, ಮಾಜಿ ಶಾಸಕ ಎ.ಪಾಪರೆಡ್ಡಿ, ಶಸಾಕ ಜಿ.ಟಿ.ಪಾಟೀಲ,ಅದೃಶಪ್ಪ ವಾಸಣ್ಣ ದೇಸಾಯಿ, ಡಾ.ಸೋಮನಾಥ ಯಾಳವಾರ, ಈರಣ್ಣ ಬೆಕಿನಾಳ, ವ್ಹಿ.ಡಿ.ಐಹೊಳ್ಳಿ, ಅಶೋಕಗೌಡ ಪಾಟೀಲ, ಜಂಬುನಾಥ ಕಂಚ್ಯಾಣಿ, ಸಿದ್ದಬಸವ ಕುಂಬಾರ, ನಿಂಗಪ್ಪ ಬೊಮ್ಮನಹಳ್ಳಿ ಇತರರು ಆಗಮಿಸುವರು.
ಜೂ.೧೪ ರಂದು ಬೆಳಗ್ಗೆ ೫ ಗಂಟೆಗೆ ಲಿಂ.ಸಿದ್ದಲಿಂಗ ಶಿವಯೋಗಿಗಳವರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ಹಾಗೂ ಸಹಸ್ರ ಬಿಲ್ವಾರ್ಚನೆ ನಡೆಯಲಿದೆ. ನಂತರ ೯ ಗಂಟೆಗೆ ಮುಗಳಖೋಡದ ಡಾ.ಮುರುಘರಾಜೇಂದ್ರ ಸ್ವಾಮೀಜಿಯವರನ್ನು ಸಾರೋಟದಲ್ಲಿ ಮೆರವಣಿಗೆ ಹಾಗೂ ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜರುಗಲಿದೆ. ನಂತರ ೧೨ ಗಂಟೆಗೆ ನಡೆಯುವ ಧರ್ಮಸಭೆ ಸಾನಿಧ್ಯವನ್ನು ಮಗಳಖೋಡದ ಡಾ.ಮುರುಘೇಂದ್ರ ಸ್ವಾಮೀಜಿ, ಯರನಾಳದ ಸಂಗನಬಸವ ಸ್ವಾಮೀಜಿ, ಸೊನ್ನದ ಶಿವಾನಂದ ಸ್ವಾಮೀಜಿ, ನೆಲೋಗಿಯ ಸಿದ್ದಲಿಂಗ ಸ್ವಾಮೀಜಿ, ಜಮಖಂಡಿಯ ಅಭಿನವ ಕುಮಾರ ಚನ್ನಬಸವ ಸ್ವಾಮೀಜಿ, ಕೊಡೆಕಲ್ದ ಶಿವಕುಮಾರ ಸ್ವಾಮೀಜಿ, ಢವಳಗಿಯ ಘನಮಠ ಸ್ವಾಮೀಜಿ, ಸೋಲಾಪುರದ ಸ್ವಾಮಿನಾಥ ಸ್ವಾಮೀಜಿ, ಅಥಣಿಯ ಶಿವಬಸವ ಸ್ವಾಮೀಜಿ, ನಾಗರಾಳದ ಶೇಷಪ್ಪಯ್ಯ ಸ್ವಾಮೀಜಿ, ಲಿಂಗನಾಯಕಹಳ್ಳಿಯ ಚನ್ನವೀರ ಸ್ವಾಮೀಜಿ ಸೇರಿದಂತೆ ನಾಡಿನ ವಿವಿಧ ಶ್ರೀಗಳು ಸಾನಿಧ್ಯ ವಹಿಸುವರು. ಕಾರ್ಯಕ್ರಮಕ್ಕೆ ಸಚಿವ ಶಿವಾನಂದ ಪಾಟೀಲ, ಬಸವ ಸಮಿತಿಯ ಅರವಿಂದ ಜತ್ತಿ, ಮಾಜಿ ಸಚಿವ ಮುರುಗೇಶ ನಿರಾಣಿ, ಸಂಸದ ಗೋವಿಂದ ಕಾರಜೋಳ, ಮಾಜಿ ಶಾಸಕ ಚಂದ್ರಕಾತ ಬೆಲ್ಲದ, ಶಾಸಕ ರವಿ ಬೆಲ್ಲದ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಅಶೋಕ ಮನಗೂಳಿ, ವಿಠ್ಠಲ ಕಟಕದೊಂಡ, ರಾಜುಗೌಡ ಪಾಟೀಲ, ಪ್ರಕಾಶ ರಾಠೋಡ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಇತರರು ಆಗಮಿಸುವರು.
ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಬೆಳಗ್ಗೆ ೧೦.೩೦ ಗಂಟೆಗೆ ಮಹಿಳಾ ಸಬಲೀಕರಣ ಮಧ್ಯಾನ್ಹ ೨.೩೦ ಗಂಟೆಗೆ ಜಾನಪದ ಸೊಗಡು ಎಂಬ ಎರಡು ಗೋಷ್ಠಿಗಳನ್ನು ಹಮ್ಮಿಕೊಂಡಿದೆ. ಮಧ್ಯಾನ್ಹ ೧ ಗಂಟೆಗೆ ಸಾಂಸ್ಕ್ರತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಕಿರಿಯ ಶ್ರೀಗಳಾದ ಡಾ. ಸಿದ್ದಲಿಂಗ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.