Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಭ್ರಮದ ಈರಕಾರ ಮುತ್ಯಾನ ಜಡಿ ತೊಳೆವ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ಸಂಭ್ರಮದ ಈರಕಾರ ಮುತ್ಯಾನ ಜಡಿ ತೊಳೆವ ಕಾರ್ಯಕ್ರಮ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಈರಕಾರ ಮುತ್ಯಾ ದೇವಸ್ಥಾನದ ಈರಕಾರ ಮುತ್ಯಾರ ಜಡಿ ತೊಳೆಯುವ ಕಾರ್ಯಕ್ರಮ ಹಾಗೂ ಜಾತ್ರಾಮಹೋತ್ಸವ ಭಾನುವಾರ, ಸೋಮವಾರ ಎರಡು ದಿನಗಳ ಕಾಲ ಸಂಭ್ರಮ, ಸಡಗರದಿಂದ ಜರುಗಿತು.
ಜಾತ್ರಾಮಹೋತ್ಸವದಂಗವಾಗಿ ಭಾನುವಾರ ಡೊಳ್ಳುವಾದ್ಯಗಳ ಮೇಳಗಳೊಂದಿಗೆ ಪಲ್ಲಕ್ಕಿಯು ಶಿವಪ್ಪ ಈರಕಾರ ಮುತ್ಯಾರ ದೇವರಮನಿಯಿಂದ ಪಟ್ಟಣದ ಪ್ರಮುಖ ಬೀದಿಗಳ ಮೆರವಣಿಗೆ ಮೂಲಕ ಬಸವೇಶ್ವರರ ದೇವಸ್ಥಾನದ ಬಸವ ತೀರ್ಥ ಬಾವಿಗೆ ತೆರಳಿ ಗಂಗಸ್ಥಳ ಪೂಜೆ ನೆರವೇರಿಸಲಾಯಿತು. ನಂತರ ಮೂಲನಂದೀಶ್ವರ(ಬಸವೇಶ್ವರರ) ದೇವರ ದರ್ಶನ ಪಡೆದುಕೊಂಡ ನಂತರ ಪಲ್ಲಕ್ಕಿ ಉತ್ಸವ ಡೊಳ್ಳಿನ ವಾದ್ಯಮೇಳದೊಂದಿಗೆ ಬಸವೇಶ್ವರರ ಭಾವಚಿತ್ರದೊಂದಿಗೆ ಈರಕಾರ ಮುತ್ಯಾರ ದೇವಸ್ಥಾನಕ್ಕೆ ಸಂಜೆ ತಲುಪಿತು. ಭಾನುವಾರ ರಾತ್ರಿ ಇಡೀ ಸುಪ್ರಸಿದ್ದ ಡೊಳ್ಳಿನ ಹಾಡಕಿ ಕಾರ್ಯಕ್ರಮ ಜರುಗಿದವು.
ಪಟ್ಟಣದ ಶಿವಪ್ಪ ಮುತ್ಯಾರ ದೇವರಮನಿಯಿಂದ ಸೋಮವಾರ ಸಂಪ್ರದಾಯದಂತೆ ಶಿವಾನಂದ ಈರಕಾರ ಮುತ್ಯಾರನ್ನು ಡೊಳ್ಳಿನ ವಾದ್ಯಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಈರಕಾರ ಮುತ್ಯಾರ ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಯಿತು. ನಂತರ ಶಿವಾನಂದ ಈರಕಾರ ಮುತ್ಯಾ ಅವರು ಈ ವರ್ಷದ ಮಳೆ-ಬೆಳೆ ಕುರಿತಾಗಿ ಹೇಳಿಕೆಗಳನ್ನು ನುಡಿದರು.
ಶಿವಾನಂದ ಈರಕಾರ ಮುತ್ಯಾರು ನುಡಿದ ಹೇಳಿಕೆಗಳುಃ ತುರ್ತು ರೋಹಿಣಿ ಮಿರಗಾ ಮಂಡಿ ಕಟ್ಟಿಸಿನಿ, ಹಿಂಗಾರಿ ಮಳಿ ಪುಷ್ಯ,ಪುನರ್ವಸು ಮಳಿಗೆ ಕುರಗಿ ಕಡಿಯಾಕ ಆಯಿತು, ಮುಂಗಾರಿ ಹತ್ತು ಕಾಳಿನಲ್ಲಿ ಸಜ್ಜಿ ಬೇಳಿ ಕಟ್ಗೆ ವಕ್ಕಳ ಆಯಿತು,ಕೆಂಪು ಕಾಳು ಸಜ್ಜಿ ಬೆನ್ನು ಹತ್ತೆದ, ಹಿಂಗಾರಿ ಮಳಿ ಹುಬ್ಬಿ ಉತ್ತರಿಗೆ ಮಂಡಿ ಕಟ್ಟಿಸಿನಿ, ಸ್ವಾತಿ ಮಳಿ ಸೋಸಿ ನೋಡುವದರೊಳಗ ಒಂದು ಮೂಲಿ ಕಸರ ಉಳಿತು,ಹಿಂಗಾರಿ ಹತ್ತು ಕಾಳಿನಲ್ಲಿ ಬಿಳಿ ಕಾಳು ಮೇಲು, ಗೋಧಿ ,ಕುಸಬಿ, ಕಡ್ಲಿ, ಜೋಳದ ಬೆನ್ನುಹತ್ಯಾವ, ಹತ್ತಿ ಸಾಲಾಗ ಹಮಿಣಿ ಒಗದಿನ್ನಿ …. ಎಂದು ಶಿವಾನಂದ ಈರಕಾರ ಮುತ್ಯಾ ನುಡಿಗಳನ್ನು ನುಡಿದರು. ರೈತ ಬಾಂಧವರು ಮುತ್ಯಾರ ನುಡಿಗಳನ್ನು ಕೇಳಿ ಧನ್ಯತಾ ಭಾವ ಅನುಭವಿಸಿದರು.
ಜಾತ್ರಾಮಹೋತ್ಸವದಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು. ಜನತೆ ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಆಗಮಿಸಿ ದೇವರಿಗೆ ನೈವೇದ್ಯ,ಕಾಯಿ-ಕರ್ಪೂರ ಸಮರ್ಪಿಸಿದ ನಂತರ ದೇವಸ್ಥಾನದಲ್ಲಿನ ಪ್ರಸಾದ ಸ್ವೀಕರಿಸಿದರು.
ಜಾತ್ರಾಮಹೋತ್ಸವದಲ್ಲಿ ಬಸವರಾಜ ಹಾರಿವಾಳ, ನಿಂಗಪ್ಪ ಜೈನಾಪೂರ, ಮುರಗೆಪ್ಪ ಪೂಜಾರಿ, ಸಂಗಪ್ಪ ಡಂಬಳ, ಶರಣಪ್ಪ ನಾಡಗೌಡ, ಪಾವಡೆಪ್ಪ ಕರಮಳಕರ, ಅಪ್ಪಾಸಾಹೇಬ ಕಲ್ಲೂರ, ಸಿದ್ದಲಿಂಗಪ್ಪ ಪೂಜಾರಿ, ಆನಂದ ಮೇಟಿ, ಬಸಪ್ಪ ಹೆರಕಲ್ಲ, ಹಣಮಂತ ಅಡಗಿಮನಿ,ಸಂಗಪ್ಪ ಕೋಣಿನ, ಯಲ್ಲಪ್ಪ ಗುಂಡಿ, ಶ್ರೀಕಾಂತ ಪೈಠಾಣ, ಶರಣಪ್ಪ ಗುಡ್ಡದ, ಮುದಕಪ್ಪ ಕುಳಗೇರಿ, ಅಪ್ಪುಸಾ ಮಟ್ಯಾಳ, ಸುರೇಶ ಹಾರಿವಾಳ, ಸಂತೋಷ ಕೂಡಗಿ, ಜಗದೀಶ ನಿಕ್ಕಂ, ಮಲ್ಲಿಕಾರ್ಜುನ ಪಾದಯಾತ್ರಾ ಸಮಿತಿ ಪದಾಧಿಕಾರಿಗಳು ಇತರರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.