ಸಿಂದಗಿ: ಜೂ.೧೨ ರಂದು ಬೆಳಗ್ಗೆ ೧೦ ಗಂಟೆಗೆ ಕನಕದಾಸ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಹಾಗೂ ಕಿತ್ತೂರ ರಾಣಿ ಚೆನ್ನಮ್ಮ ಪುತ್ಥಳಿಗಳು ಆಗಮಿಸಲಿದ್ದು, ಕನಕದಾಸ ವೃತ್ತದಿಂದ ಅರ್ಥಪೂರ್ಣವಾಗಿ ಮೆರವಣಿಗೆ ಮಾಡುವ ಮೂಲಕ ಸ್ವಾಮಿ ವಿವೇಕಾನಂದ ವೃತ್ತಕ್ಕೆ ಆಗಮಿಸಿ ಅಲ್ಲಿ ಸ್ವಾಮಿ ವಿವೇಕಾನಂದರ ಪುತ್ಥಳಿಯನ್ನು ನಿಲ್ಲಿಸಲಾಗುವುದು. ಮತ್ತು ಎಚ್.ಜಿ.ಕಾಲೇಜು ಮಾರ್ಗವಾಗಿ ಶ್ರೀ ಬಸವೇಶ್ವರ ವೃತ್ತ, ಕನ್ನಡಾಂಬೆ ವೃತ್ತದ ಮಾರ್ಗವಾಗಿ ಚೆನ್ನಮ್ಮ ವೃತ್ತದಲ್ಲಿ ವೀರರಾಣಿ ಕಿತ್ತೂರ ಚೆನ್ನಮ್ಮಳ ಪುತ್ಥಳಿಯನ್ನು ನಿಲ್ಲಿಸಲಾಗುವುದು. ಈ ಮೆರವಣಿಗೆಯಲ್ಲಿ ಹರ ಗುರು ಚರಮೂರ್ತಿಗಳು ಭಾಗವಹಿಸಲಿದ್ದಾರೆ. ಕಾರಣ ಈ ಎರಡು ಪುತ್ಥಳಿಗಳ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಂದಗಿ ಮತ್ತು ಸುತ್ತಮುತ್ತಲಿನ ನಾಗರಿಕರು, ಹಿರಿಯರು, ರಾಜಕೀಯ ಮುಖಂಡರು ಭಾಗವಹಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ತಿಳಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

