Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ

ಕ್ರೀಡೆಯಲ್ಲಿ ಮಕ್ಕಳ ಆರೋಗ್ಯ ಅಡಗಿದೆ :ಎಸ್.ಕೆ.ಬೆಳ್ಳುಬ್ಬಿ

ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ: ಡಿ.೧ ರಂದು ಬೃಹತ್ ಹೋರಾಟಕ್ಕೆ ಕರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ರೈತರ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ರೈತರ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ : ತಾಲೂಕಿನ ಕೃಷ್ಣಾ ನದಿ ತೀರದ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಜಮೀನಿಗೆ ವಿದ್ಯುತ್ ಕಂಬಗಳನ್ನು ಅಳವಡಿಸುವಂತೆ ಕಳೆದ ವರ್ಷದಿಂದ ಮನವಿ ಕೊಡುತ್ತಾ ಬಂದಿದ್ದರೂ ನೀವು(ಹೆಸ್ಕಾಂ ಅಧಿಕಾರಿಗಳು) ಕಂಬ ಅಳವಡಿಸದೇ ಇನ್ನೂ ಅಂದಾಜು ಪತ್ರಿಕೆಯ ನೆಪಗಳನ್ನೇ ಹೇಳುತ್ತಿದ್ದೀರಿ. ಇದರಿಂದ ನಮಗೆ ಸಮರ್ಪಕ ವಿದ್ಯುತ್ ಪೂರೈಕೆ ಆಗದೇ ತೊಂದರೆಯುAಟಾಗಿದೆ. ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ತಾಲೂಕಿನ ಹಂಡರಗಲ್ಲ ಗ್ರಾಮದ ರೈತರು ಪಟ್ಟಣದ ಹೆಸ್ಕಾಂ ಸೆಕ್ಷನ್ ಅಧಿಕಾರಿ ಬಿ.ಎಸ್.ಯಲಗೋಡ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಪಟ್ಟಣದ ಹೆಸ್ಕಾಂ ಕಚೇರಿಗೆ ಬುಧವಾರ ಆಗಮಿಸಿದ್ದ ಹಂಡರಗಲ್ ಗ್ರಾಮದ ರೈತರು ಕೆಲಕಾಲ ಕಚೇರಿ ಮುಂಬಾಗಿಲ ಬಳಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ರೈತರಾದ ಸದಾನಂದ ವಾಲೀಕಾರ, ಶರಣಪ್ಪ ನರಸಣಗಿ, ಬಸವರಾಜ ನರಸಣಗಿ ಮತ್ತಿತರರು, ಕಳೆದ ಹಲವು ವರ್ಷಗಳಿಂದ ಕೃಷ್ಣಾ ನದಿ ತೀರದ ಗ್ರಾಮಗಳ ರೈತರು ತಮ್ಮ ಜಮೀನುಗಳಲ್ಲಿ ಕಬ್ಬು ಇತ್ಯಾದಿ ವಾಣಿಜ್ಯ ಬೆಳೆಗಳನ್ನು ಬಿತ್ತನೆ ಮಾಡಿದ್ದಾರೆ. ಸದ್ಯಕ್ಕೆ ಕಾಲುವೆಗಳ ನೀರು ಬಳಸಿಕೊಳ್ಳಲು ಮತ್ತು ಬೋರ್‌ವೆಲ್ ಮೂಲಕ ನೀರು ಬಳಸಿಕೊಳ್ಳಲು ಹೆಸ್ಕಾಂ ಇಲಾಖೆ ಅಧಿಕಾರಿಗಳು ಸಮರ್ಪಕ ವಿದ್ಯುತ್ ಪೂರೈಕೆ ಮಾಡದೇ ಇರುವುದರಿಂದ ಅಡಚಣೆಯುಂಟಾಗಿದೆ. ಎಲ್ಲೋ ದೂರದ ವಿದ್ಯುತ್ ಕಂಬದಿAದ ವಿದ್ಯುತ್ ಬಳಸಿಕೊಳ್ಳಬೇಕೆಂದರೆ ಅಗತ್ಯ ವೋಲ್ಟೇಜ್ ಇರುವುದಿಲ್ಲ. ಕೇವಲ ಸಿಂಗಲ್ ಫೇಸ್ ವಿದ್ಯುತ್ ಮಾತ್ರ ಇರುತ್ತದೆ. ಇದರಿಂದ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ. ನದಿ ತೀರದ ಜಮೀನುಗಳ ಅಕ್ಕ ಪಕ್ಕದಲ್ಲಿರುವ ವಿದ್ಯುತ್ ಕಂಬಗಳು ಬಿದ್ದು ಹೋಗುವ ಸ್ಥಿತಿಯಲ್ಲಿವೆ. ಜೊತೆಗೆ ವಿದ್ಯುತ್ ತಂತಿಯೂ ಕೂಡ ನೆಲಕ್ಕೆ ತುಂಬಾ ಹತ್ತಿರ ಇರುವುದರಿಂದ ಆಗಾಗ ವಿದ್ಯುತ್ ಪ್ರವಹಿಸುತ್ತಿರುತ್ತದೆ ಹಾಗಾಗಿ ಕಳೆದ ಕೆಲವು ದಿನಗಳ ಹಿಂದೆ ಎಮ್ಮೆಯೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದೆ. ಕಾರಣ ಈ ಭಾಗದ ರೈತರು ಜೀವ ಕೈಯಲ್ಲಿ ಹಿಡಿದು ವ್ಯವಸಾಯ ಮಾಡುವ ಸ್ಥಿತಿ ಎದುರಾಗಿದೆ ಎಂದು ಅಳಲು ತೋಡಿಕೊಂಡರು.
ಈ ಬಗ್ಗೆ ಸಂಬAಧಪಟ್ಟ ಹೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ ಎಂದು ದೂರಿದರು.
ರೈತರಿಂದ ಮನವಿ ಸ್ವೀಕರಿಸಿ ಮಾತನಾಡಿದ ಹೆಸ್ಕಾಂ ಸೆಕ್ಷನ್ ಅಧಿಕಾರಿ ಬಿ.ಎಸ್.ಯಲಗೋಡ, ವಿದ್ಯುತ್ ಕಂಬಗಳನ್ನು ಬದಲಾಯಿಸಲು ಬಂದಾಗಲೆಲ್ಲ ನದೀ ನೀರು ಇರುವುದರಿಂದ ಸಾಧ್ಯವಾಗಿಲ್ಲ. ಸದ್ಯ ಮೇಲಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಮುಂದಿನ ೧೫ ದಿನಗಳಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ರೈತರಾದ ಸಂಗನಗೌಡ ಪಾಟೀಲ, ಮಲ್ಲಿಕಾರ್ಜುನ ಬಾದರದಿನ್ನಿ, ಮಲ್ಲನಗೌಡ ಬಿರಾದಾರ, ಬಸಪ್ಪ ಗಡೇದ, ಹಣಮಂತ ಬೋಳಿ, ಭೀಮಣ್ಣ ಪತ್ತಾರ, ಹುಸೇನಬಾಷಾ ನದಾಫ ಸೇರಿದಂತೆ ಹಲವರು ಇದ್ದರು.

BIJAPUR NEWS muddebhihala public news raita sangha udayarashminews.com
Share. Facebook Twitter Pinterest Email Telegram WhatsApp
  • Website

Related Posts

ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ

ಕ್ರೀಡೆಯಲ್ಲಿ ಮಕ್ಕಳ ಆರೋಗ್ಯ ಅಡಗಿದೆ :ಎಸ್.ಕೆ.ಬೆಳ್ಳುಬ್ಬಿ

ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ: ಡಿ.೧ ರಂದು ಬೃಹತ್ ಹೋರಾಟಕ್ಕೆ ಕರೆ

ಹಿರಿಯರನ್ನು ಗೌರವಿಸುವುದು ಯುವಪೀಳಿಗೆ ಜವಾಬ್ದಾರಿ :ಪ್ರೊ.ಹಿರೇಮಠ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಲ್ಲಿ ಮಕ್ಕಳ ಆರೋಗ್ಯ ಅಡಗಿದೆ :ಎಸ್.ಕೆ.ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ: ಡಿ.೧ ರಂದು ಬೃಹತ್ ಹೋರಾಟಕ್ಕೆ ಕರೆ
    In (ರಾಜ್ಯ ) ಜಿಲ್ಲೆ
  • ಹಿರಿಯರನ್ನು ಗೌರವಿಸುವುದು ಯುವಪೀಳಿಗೆ ಜವಾಬ್ದಾರಿ :ಪ್ರೊ.ಹಿರೇಮಠ
    In (ರಾಜ್ಯ ) ಜಿಲ್ಲೆ
  • ಡಾ.ಸರೋಜನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ
    In (ರಾಜ್ಯ ) ಜಿಲ್ಲೆ
  • ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ
    In (ರಾಜ್ಯ ) ಜಿಲ್ಲೆ
  • ನ.೨೯ ರಂದು ಡಾ.ಅಂಬೇಡ್ಕರ್ ವಿಚಾರಗಳ ಅನಾವರಣ, ಹೊಸ ಬೆಳಕು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮನಗೂಳಿ ಮನೆತನದಿಂದ ಶಿಕ್ಷಣ ಕ್ಷೇತ್ರಕ್ಕೆ ಅಗಾಧ ಕೊಡುಗೆ
    In (ರಾಜ್ಯ ) ಜಿಲ್ಲೆ
  • ದಿ:೨೯ ರಂದು ಕೋರವಾರೇಶನ ಕಾರ್ತಿಕೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.