ವಿಜಯಪುರ: ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ಸಿರಿಗೆರೆ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಮಲ್ಲಿ ಕಂಬ, ಮಲ್ಲಿ ಹಗ್ಗ ಸಾಹಸ ಕ್ರೀಡೆ ಪ್ರದರ್ಶನ ಹಾಗೂ ತರಳಬಾಳು ಕಲಾ ಸಂಘದಿಂದ ಶರಣ ಸಂಕುಲ ನೃತ್ಯ ಸಂಗೀತ ಮತ್ತು ಅಭಿನಯ ವಿಶೇಷ ಕಾರ್ಯಕ್ರಮ ಜ್ಞಾನಯೋಗಾಶ್ರಮ ವಿಜಯಪುರದಲ್ಲಿ ದಿ.15 ಶನಿವಾರ ಸಂಜೆ 6.30ಗಂ. ಜರುಗಲಿದೆ.
ಈ ಕಾರ್ಯಕ್ರಮದ ಸಾನಿಧ್ಯವನ್ನು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಿರಿಗೆರೆ ಇವರು ವಹಿಸಲಿದ್ದು, ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಲಿದ್ದು, ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವರು ಮತ್ತು ವಿಜಯಪುರ ಜಿಲ್ಲೆ ಉಸ್ತಿವಾರಿ ಸಚಿವರಾದ ಎಂ.ಬಿ.ಪಾಟೀಲ ಉಪಸ್ಥಿತರಿರಲಿದ್ದಾರೆ. ಸಾರ್ವಜನಿಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

