Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪುರಸಭೆ ಸದಸ್ಯರ ಅವಧಿ ವಿಸ್ತರಣೆ ಒತ್ತಾಯಿಸಿ‌ ರಾಜ್ಯಪಾಲರಿಗೆ ಮನವಿ
(ರಾಜ್ಯ ) ಜಿಲ್ಲೆ

ಪುರಸಭೆ ಸದಸ್ಯರ ಅವಧಿ ವಿಸ್ತರಣೆ ಒತ್ತಾಯಿಸಿ‌ ರಾಜ್ಯಪಾಲರಿಗೆ ಮನವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪುರಸಭೆ ಸದಸ್ಯರ ಅವಧಿ ವಿಸ್ತರಣೆ ಒತ್ತಾಯಿಸಿ‌ ರಾಜ್ಯಪಾಲರಿಗೆ ಮನವಿ

ಇಂಡಿ: ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಮೀಸಲಾತಿ ನಿಗದಿ ಪಡಿಸದ ಹಿನ್ನೆಲೆಯಲ್ಲಿ ಕಳೆದ 14 ತಿಂಗಳಿನಿಂದ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿವೆ. ಹಾಗಾಗಿ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ನಿಗದಿ ಪಡಿಸಿ ಪುರಸಭೆ ಸದಸ್ಯ ಅವಧಿ ವಿಸ್ತರಿಸಬೇಕು ಎಂದು ಪುರಸಭೆ ಸದಸ್ಯರು ತಹಶಿಲ್ದಾರ ಮಂಜುಳಾ ನಾಯಿಕ‌ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಗುರುವಾರ ಪಟ್ಟಣದ ಆಡಳಿತ ಸೌಧಕ್ಕೆ ತೆರಳಿದ ಪುರಸಭೆಯ ಸದಸ್ಯರು, ಪ್ರತಿ ವಾರ್ಡಗಳಲ್ಲಿ‌‌ ಮೂಲಭೂತ ಸೌಲಭ್ಯ, ಸೌಕರ್ಯ ಹಾಗೂ ಅಭಿವೃದ್ಧಿ ಪಡಿಸಲಿಕೆ ತೊಂದರೆಯಾಗುತ್ತಿದೆ,ವಾರ್ಡಗಳಲ್ಲಿ ಕಾಮಗಾರಿ ಕುಂಠಿತಗೊಂಡಿವೆ.‌ ಎರಡನೆ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಮೀಸಲಾತಿ ನಿಗದಿ ಪಡಿಸಿ ಸದಸ್ಯರ ಅವಧಿ ವಿಸ್ತರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಭೀಮನಗೌಡ ಪಾಟೀಲ ಮಾತನಾಡಿದ ಅವರು, 2019ನೇ ಸಾಲಿನಲ್ಲಿ ಚುನಾವಣೆ ಮುಕ್ತಾಯವಾಗಿ ಪುರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದೆವೆ. ನಂತರ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿಯನ್ನು 1 ವರ್ಷ 06 ತಿಂಗಳ ನಂತರ ನಿಗದಿಪಡಿಸಿದ್ದರ ಪ್ರಕಾರ ಮೊದಲನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಯಾಗಿದ್ದು, ವಾರ್ಡಗಳಲ್ಲಿ ಕಾಮಗಾರಿಗಳು ಮಾಡಲು ಅವಕಾಶ ಸಿಕ್ಕಿದೆ. ಆದರೆ ಮೊದಲನೇ ಅವಧಿ ಎಪ್ರೀಲ್ 28, 2023 ನಿಗದಿಪಡಿಸಿದರ ಅವಧಿ ಮುಕ್ತಾಯವಾಗಿರುತ್ತದೆ. ಅಲ್ಲಿಂದ ಇಲ್ಲಿಯವರೆಗೂ ಎರಡನೇ ಅವಧಿಗೆ ಮೀಸಲಾತಿಯನ್ನು ಇಲ್ಲಿಯವರೆಗೆ ನಿಗದಿಪಡಿಸಿರುವುದಿಲ್ಲ. ಆದ ಕಾರಣ ಎರಡನೇ ಅವಧಿಯಲ್ಲಿ ಮಿಸಲಾತಿ ನೀಡದೆ ಸುಮಾರು 14 ತಿಂಗಳ ಗತಿಸಿದರೂ ಕೂಡ ಇನ್ನು ಮೀಸಲಾತಿ ಹೊರಡಿಸದೆ ಪುರಸಭೆ ಸದಸ್ಯರ ಅವಧಿ ಮುಕ್ತಾವಾಗುತ್ತಿದೆ. ಅನೇಕ ನೀರಿಕ್ಷೆಗಳಿಟ್ಟು ಜನ ಸೇವೆ ಮಾಡಲು ಬಂದ ನಮಗೆ, ವಾರ್ಡಗಳಲ್ಲಿ ಅಭಿವೃದ್ಧಿ ಬದಲಾವಣೆ ಮಾಡದೆ, ಜನ‌ ಸೇವೆ ಮಾಡದೆ, ಅಧಿಕಾರಿಗಳ ಜೊತೆ ‌ಮಾತಾಡಿ ಅವಧಿ ಮುಗಿಸದಂತಾಗಿದೆ.
ಕೂಡಲೇ ಸರಕಾರ ಈ ಬಗ್ಗೆ ಗಮನ ಹರಿಸಿ ಎರಡನೇ ಅವಧಿಗೆ ಮೀಸಲಾತಿ ನಿಗಧಿಪಡಿಸಬೇಕು ಹಾಗೂ ಮೀಸಲಾತಿ ನಿಗಧಿಪಡಿಸಿದ ದಿನಾಂಕದಿಂದ 30 ತಿಂಗಳವರೆಗಿನ ಅವಧಿ ವಿಸ್ತರಿಸಬೇಕೆಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರೇಖಾ‌ ಭೀಮಾಶಂಕರ ಮೂರಮನ, ರೇಣುಕಾ ತಿಪ್ಪಣ್ಣ ಉಟಗಿ, ಶೈಲಜಾ ಶ್ರೀಶೈಲ ಪೂಜಾರಿ, ಸೈಪನ ಲಕ್ಷ್ಮಣ ಪವಾರ, ಸುಜಾತ ಬುದ್ದುಗೌಡ ಪಾಟೀಲ, ಜಹಾಂಗೀರ್ ಮಹಿಬೂಬಸಾಬ್ ಸೌದಾಗರ, ಭಾಗೀರಥಿ ನಾಗಪ್ಪ ಕುಂಬಾರ, ಸಂಗೀತಾ ಸುದೀರ ಕರಕಟ್ಟಿ, ಅನೀಲಗೌಡ ಚಂದ್ರಶೇಖರ ಬಿರಾದಾರ, ಮುಸ್ತಾಕ ಅಹ್ಮದ್ ಅಲ್ಲಾಭಕ್ಷ ಇಂಡಿಕರ, ಶಬ್ಬೀರ್ ಖಾಜಿ, ಅಸ್ಲಂ ಕಡಣಿ, ಅಯ್ಯುಬ್ ರಾಜೇಸಾಬ ಬಾಗವಾನ, ಸಾಯಬಣ್ಣ ವಾಸುದೇವ ಮೂರಮನ, ಉಮೇಶ್ ಬಾವಾಸಾಬ ದೇಗಿನಾಳ, ಲಿಂಬಾಜಿ ತುಕಾರಾಮ ರಾಠೋಡ, ಜ್ಯೋತಿ ಪ್ರಕಾಶ ರಾಠೋಡ, ಕವಿತಾ ಜಯಚಂದ್ರ ರಾಠೋಡ, ದೇವೇಂದ್ರ ಬೆಳ್ಳಪ್ಪ ಕುಂಬಾರ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
  • ಸಾರವಾಡ ಸುತ್ತಮುತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯಕ್ಕೆ ಬದ್ಧ
    In (ರಾಜ್ಯ ) ಜಿಲ್ಲೆ
  • ದೇಹ ದಾರ್ಡ್ಯ ಸ್ಪರ್ಧೆ: ಎಸ್.ಎಸ್.ಬಿ. ಪ್ರತಿಭೆ ಪ್ರಜ್ವಲ ಗೆ ಬೆಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.