Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಸದ ಜಿಗಜಣಗಿಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ
(ರಾಜ್ಯ ) ಜಿಲ್ಲೆ

ಸಂಸದ ಜಿಗಜಣಗಿಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ೧೮ ನೇ ಲೋಕಸಭಾ ಚುನಾವಣೆಯಲ್ಲಿ ದಲಿತ ನಾಯಕರಾದ ರಮೇಶ ಜಿಗಜಿಣಗಿಯವರು ಸತತ ೭ನೇ ಬಾರಿ ಲೋಕಸಭಾ ಸಂಸದರಾಗಿ ಆಯ್ಕೆ ಆಗಿದ್ದು, ಅವರಿಗೆ ಸಚಿವ ಸ್ಥಾನ ನೀಡುವಂತೆ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಇಬ್ಬರು ದಲಿತ ಬಿಜೆಪಿ ನಾಯಕರು ಆಯ್ಕೆಯಾಗಿರುವದು ಹೆಮ್ಮೆಯ ವಿಷಯವಾಗಿದೆ. ರಮೇಶ ಜಿಗಜಿಣಗಿಯವರು ವಿಜಯಪುರ ಜಿಲ್ಲೆಯಲ್ಲಿ ಭಾರತಿಯ ಜನತಾ ಪಾರ್ಟಿಯನ್ನು ಕಟ್ಟಿ ಬೆಳೆಸುವಲ್ಲಿ ತಮ್ಮ ಹಗಲಿರುಳು ಶ್ರಮವಿದೆ. ಅದೇ ರೀತಿ ವಿಜಯಪುರ ಜಿಲ್ಲೆಯಲ್ಲಿ ಬಿಜೆಪಿಯು ಗಟ್ಟಿಯಾಗಿ ಕೂಡಲು ಹಾಗೂ ಬೆಳೆಯಲು ಜಿಗಜಿಣಗಿಯವರು ಪರಿಶ್ರಮ ಬಹಳಷ್ಟಿದ್ದು, ಜಿಗಜಿಣಗಿಯವರು ತಮ್ಮ ರಾಜಕೀಯ ಜೀವನದಲ್ಲಿ ಎಲ್ಲರೊಂದಿಗೆ ಸ್ನೇಹ ಬಾಂಧವ್ಯ ಇಟ್ಟುಕೊಂಡು ಸೋಲಿಲ್ಲದ ಸರ್ಧಾರರಾಗಿದ್ದು, ಇವರು ರಾಜಕೀಯದಲ್ಲಿ ಅಜಾತಶತೃ ಎನಿಸಿಕೊಂಡವರು. ಇಂತಹ ಮುತ್ಸದ್ದಿ ನಾಯಕರಾದ ರಮೇಶ ಜಿಗಜಿಣಗಿಯವರು ೧೮ನೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಸುಮಾರು ೨೪೦ ಶೀಟುಗಳನ್ನು ಗೆಲ್ಲುವ ಮೂಲಕ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ.
ಇಂತಹ ಮುತ್ಸದ್ದಿ ರಾಜಕಾರಣಿಯು ೧೯೮೩, ೧೯೮೫ ಮತ್ತು ೧೯೯೪ರಲ್ಲಿ ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರ(ಈಗಿನ ನಾಗಠಾಣ ವಿಧಾನಸಭಾ ಕ್ಷೇತ್ರ)ದಿಂದ ೩ ಬಾರಿ ಶಾಸಕರಾಗಿ ಆಯ್ಕೆಯಾಗಿ ರಾಮಕೃಷ್ಣ ಹೆಗಡೆ ಅವರ ಸಚಿವ ಸಂಪುಟದಲ್ಲಿ ಗೃಹ ಸಚಿವರಾಗಿ, ಅಬಕಾರಿ ಸಚಿವರಾಗಿ, ಹಾಗೂ ಜೆ.ಎಚ್. ಪಟೇಲ್ ಸಂಪುಟದಲ್ಲಿ ಸಮಾಜ ಕಲ್ಯಾಣ ಮತ್ತು ಕಂದಾಯ ಸಚಿವರಾಗಿ ಹಲವಾರು ಜನಪರ ಕೆಲಸಗಳನ್ನು ಮಾಡಿದ ಹೆಮ್ಮೆ ಇವರಿಗೆ ಸಲ್ಲುತ್ತದೆ. ೧೯೯೮ರಲ್ಲಿ ಲೋಕಶಕ್ತಿ ಪಕ್ಷದಿಂದ, ೧೯೯೯ರಲ್ಲಿ ಜನತಾದಳದಿಂದ ಮತ್ತು ೨೦೦೪ರಲ್ಲಿ ಬಿಜೆಪಿಯಿಂದ ಚಿಕ್ಕೋಡಿ (ಲೋಕ ಸಭೆ ಚುನಾವಣಾ ಕ್ಷೇತ್ರ)ದಿಂದ ಸಂಸದರಾಗಿ ಹ್ಯಾಟ್ರಿಕ್ ಸಾಧಿಸಿದ್ದಾರೆ. ೨೦೦೯, ೨೦೧೪ ಮತ್ತು ೨೦೧೯ರಲ್ಲಿ ನಡೆದ ಚುನಾವಣೆಯಲ್ಲಿ ವಿಜಯಪುರ ಲೋಕ ಸಭಾ ಕ್ಷೇತ್ರದಿಂದ ಸಂಸದರಾಗಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ.
ಇಂತಹ ರಾಜಕೀಯ ಮುತ್ಸದ್ದಿಯಾಗಿರುವ ರಮೇಶ ಜಿಗಜಿಣಗಿಯವರು ರಾಜ್ಯದಲ್ಲಿ ಶಾಸಕರಾದ ಸಮಯದಲ್ಲಿ, ಗೃಹ ಸಚಿವರಾಗಿ, ಕಂದಾಯ ಸಚಿವರಾಗಿ, ಜವಳಿ ಸಚಿವರಾಗಿ, ಅಬಕಾರಿ ಸಚಿವರಾಗಿ, ಸಮಾಜ ಕಲ್ಯಾಣ ಸಚಿವರಾಗಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ನಾಯಕನಿಗೆ ಇಲ್ಲಿಯವರೆಗೆ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ತಮ್ಮ ರಾಜಕೀಯ ಜೀವನವನ್ನು ಸಾಗಿಸಿದ್ದಾರೆ.
ಕಾರಣ ಈ ಬಾರಿಯ ಎನ್.ಡಿ.ಎ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ದೇಶದ ಹಾಗೂ ವಿಜಯಪುರ ಜಿಲ್ಲೆಯ ಜನರಿಗಾಗಿ ಅಭಿವೃದ್ದಿ ಕೆಲಸ ಮಾಡಲು ಅವಕಾಶ ನೀಡಬೇಕೆಂದು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ವತಿಯಿಂದ ವಿಜಯಪುರ ಜಿಲ್ಲೆಯ ಅಧ್ಯಕ್ಷರಾದ ಮುತ್ತಣ್ಣ ಬ. ಸಾಸನೂರ (ವಕೀಲರು), ಹಣಮಂತ ಆಹೇರಿ, ಅಶೋಕ ಮದಭಾವಿ, ಪುಂಡಲೀಕ ಮಾದರ, ಸಾಯಬಣ್ಣ ರಾಮರಥ, ಪ್ರಕಟಣೆಯಲ್ಲಿ ಆಗ್ರಹಡಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.