ವಿಜಯಪುರ: ಎನ್.ಆರ್. ಕುಲಕರ್ಣಿ ಅವರ “ಬಕುಲ ಪುಷ್ಪ” ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ಗ್ರಂಥ ತುಲಾಭಾರ ಸಮಾರಂಭವನ್ನು ನಗರದ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಷನ್ ರಸ್ತೆ, ವಿಜಯಪುರದಲ್ಲಿ ೧೬-೦೬-೨೦೨೪ ರಂದು ರವಿವಾರ ಬೆಳಿಗ್ಗೆ ೧೦.೦೦ ಗಂಟೆಗೆ ಜರುಗಲಿದೆ.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀಕಂಠ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಗುರು ಬಮ್ಮಲಿಂಗೇಶ್ವರ ಬೃಹನ್ಮಠ, ನಾಗಣಸೂರ ವಹಿಸುವರು. ಮಾಜಿ ಸಚಿವರಾದ ಅಪ್ಪಾಸಾಹೇಬ ಎಮ್. ಪಟ್ಟಣಶೆಟ್ಟಿ ಉದ್ಘಾಟನೆ ಮಾಡುವರು. ಅಧ್ಯಕ್ಷತೆಯನ್ನು ಹಿರಿಯ ಸಂಶೋಧಕ ಡಾ. ಕೃಷ್ಣ ಕೋಲ್ಹಾರ ಕುಲಕರ್ಣಿ ವಹಿಸುವರು. ವಿಶ್ರಾಂತ ಇಂಗ್ಲೀಷ ಪ್ರಾಧ್ಯಾಪಕರಾದ ಡಾ.ಆರ್.ಕೆ. ಕುಲಕರ್ಣಿ ಇವರು ಗ್ರಂಥ ಬಿಡುಗಡೆ ಮಾಡುವರು. ವಿಶ್ರಾಂತ ಪ್ರಾಚಾರ್ಯರಾದ ಜಿ.ಆರ್. ಕುಲಕರ್ಣಿ ಗ್ರಂಥಾವಲೋಕನ ನೆರವೇರಿಸುವರು ಎಂದು ಎನ್.ಆರ್. ಕುಲಕರ್ಣಿ ಅವರ ಅಭಿನಂದನ ಸಮಿತಿ ಹಾಗೂ ಅಭಿನಂದನ ಗ್ರಂಥ ಸಂಪಾದಕ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

