Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಪದ ಸಾಹಿತ್ಯಕ್ಕೆ ಮಾರುಹೋದ ವಿದೇಶಿಯರು :ಶಿವಪ್ರಕಾಶ ಶ್ರೀ
(ರಾಜ್ಯ ) ಜಿಲ್ಲೆ

ಜನಪದ ಸಾಹಿತ್ಯಕ್ಕೆ ಮಾರುಹೋದ ವಿದೇಶಿಯರು :ಶಿವಪ್ರಕಾಶ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಜನಪದ ಶೈಲಿ ಪ್ರತಿಯೊಬ್ಬರನ್ನೂ ಮನಸೂರೆಗೊಳ್ಳುತ್ತದೆ. ಜನಪದ ಸಾಹಿತ್ಯಕ್ಕೆ ವಿದೇಶಿಯರು ಮಾರುಹೋಗಿರುವದನ್ನು ನಾವು ಯುಟ್ಯೂಬೊಂದರಲ್ಲಿ ನಾವು ನೋಡಿದ್ದೇವೆ ಎಂದು ಬಸವನಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಮಠದ ಲಿಂ.ಸಿದ್ದಲಿಂಗ ಶಿವಯೋಗಿಗಳವರ ೯೦ ನೇ ಜಾತ್ರಾಮಹೋತ್ಸವದಂಗವಾಗಿ ಶ್ರೀಮಠ, ಜಿಲ್ಲಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಾನಪದ ಸೊಗಡು ಗೋಷ್ಠಿಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಜಾನಪದ ಸೊಗಡು ಇರುವದನ್ನು ಕಾಣುತ್ತೇವೆ. ಇಂದಿನ ಆಧುನಿಕ ಕಾಲದಲ್ಲಿ ಜನಪದ ಸಾಹಿತ್ಯವೆಂದು ಅಶ್ಲೀಲವಾಗಿ ರಚನೆ ಮಾಡಿ ಹಾಡುತ್ತಿರುವುದು ಜನಪದ ಸಾಹಿತ್ಯಕ್ಕೆ ಧಕ್ಕೆ ಬರುವ ಸಾಧ್ಯತೆಯಿದೆ. ಅವರು ಜನಪದ ಸಾಹಿತ್ಯಕ್ಕೆ ಧಕ್ಕೆ ಬಾರದಂತೆ ಜನಪದ ಸಾಹಿತ್ಯವನ್ನು ರಚನೆ ಮಾಡಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಜನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳಿವೆ. ಅದು ಎಂದಿಗೂ ಅಳಿದು ಹೋಗುವುದಿಲ್ಲ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿ ಮಾತನಾಡಿ, ಜನ ಸಾಮಾನ್ಯರ ಸಾಹಿತ್ಯವೇ ಜಾನಪದ ಸಾಹಿತ್ಯ. ಜನಪದ ಸಾಹಿತ್ಯದಲ್ಲಿ ಅನುಭಾವದ ನುಡಿಗಟ್ಟುಗಳಿರುವದರಿಂದ ಮಹತ್ವ ಪಡೆದುಕೊಂಡಿದೆ. ಗ್ರಾಮೀಣ ಜೀವನದಲ್ಲಿ ಜನಪದ ಸಾಹಿತ್ಯ ಹಾಸುಹೊಕ್ಕಾಗಿದೆ. ಜನಪದ ಉಳಿದರೆ ಸಾಹಿತ್ಯ ಉಳಿಯುತ್ತದೆ ಎಂದರು.
ತಾಳಿಕೋಟಿಯ ಶಿವಲೀಲಾ ಮುರಾಳ ಉಪನ್ಯಾಸ ನೀಡಿ ಮಾತನಾಡಿದ ಅವರು ಜಾನಪದವನ್ನು ಉಳಿಸಿ ಬೆಳೆಸಿದ ಕೀರ್ತಿ ಗ್ರಾಮೀಣರಿಗೆ ಸಲ್ಲುತ್ತದೆ. ಮಹಿಳೆ ಪ್ರತಿನಿತ್ಯ ಕುಟುಂಬದ ಕೆಲಸದ ಜೊತೆಗೆ ಜಾನಪದ ಹಾಡುಗಳನ್ನು ಹಾಡುತ್ತಾ ತನ್ನ ಬೇಸರವನ್ನು ಕಳೆಯುತ್ತಾಳೆ ಎಂದರು.
ತಾಲೂಕು ಕನ್ನಡ ಜನಪದ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ದೇವೇಂದ್ರ ಗೋನಾಳ ಉಪನ್ಯಾಸ ನೀಡಿ ಮಾತನಾಡಿದ ಅವರು, ಕನ್ನಡ ಸಾಹಿತ್ಯದ ತವರೂರು ಜನಪದ ಸಾಹಿತ್ಯವಾಗಿದೆ. ವಚನ ಸಾಹಿತ್ಯ ಹಾಗೂ ಜನಪದ ಸಾಹಿತ್ಯ ಇವೆರಡು ಕನ್ನಡ ಸಾಹಿತ್ಯ ಮೂಲಬೇರು ಎಂದರೆ ತಪ್ಪಾಗಲಾರದು. ಜನಪದ ಸಾಹಿತ್ಯ ಮರೆತರೆ ಸಾಹಿತ್ಯಕ್ಕೆ ಅರ್ಥವಿಲ್ಲವೆಂದರು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ಜನಪದ ಗಾಯಕ ಬಸವರಾಜ ಹಾರಿವಾಳ, ಶಿಕ್ಷಕಿ ದ್ರಾಕ್ಷಾಯಿಣಿ ಮಂಟ್ಯಾಳ ಅವರು ಜನಪದ ಹಾಡುಗಳನ್ನು ಹಾಡುವ ಮೂಲಕ ಜನಪದ ಸಾಹಿತ್ಯವನ್ನು ಅನಾವರಣಗೊಳಿಸಿ ಜನರ ಮನಸೂರೆಗೊಂಡರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಮಾತನಾಡಿ, ಜನಪದ ವಿಶಿಷ್ಠ ಸಂಸ್ಕ್ರತಿ ಹೊಂದಿದೆ. ಜನಪದವಿಲ್ಲದೇ ಹೋದರೆ ಬದುಕು ಅಸ್ತಿರವಾಗಲಿದೆ. ಜನಪದ ಸಾಹಿತ್ಯ ಮಾನವೀಯ ಮೌಲ್ಯ ನೀಡಿದೆ. ಇಂದು ಯುವಕರು ದುಶ್ಚಟಗಳಿಗೆ ದಾಸರಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರ ಜಾರಿ ತಂದ ಬೇಟಿ ಪಠಾವೋ, ಬೇಟಿ ಬಚಾವೋ ರೀತಿಯಲ್ಲಿ ಬೇಟಾ ಪಠಾವೋ, ಬೇಟಾ ಬಚಾವೋ ಅಂದೋಲನ ಜಾರಿಗೆ ತರುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಾನಿದ್ಯ ವಹಿಸಿದ್ದ ಮಸಬಿನಾಳದ ಸಿದ್ದರಾಮ ಶಿವಯೋಗಿಗಳು, ಪಡೇಕನೂರಿನ ಮಲ್ಲಿಕಾರ್ಜನ ಸ್ವಾಮೀಜಿ, ಚಡಚಣದ ಷಡಕ್ಷರಿ ಸ್ವಾಮೀಜಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರ, ನಿವೃತ್ತ ಉಪಪ್ರಾಂಶುಪಾಲ ಎಸ್.ಎಸ್.ಝಳಕಿ, ಬಸವರಾಜ ಮೇಟಿ ಇತರರು ಇದ್ದರು.
ರಶ್ಮಿ ಪಾಟೀಲ ಪ್ರಾರ್ಥಿಸಿದರು. ಶಿವು ಮಡಿಕೇಶ್ವರ ಸ್ವಾಗತಿಸಿದರು. ಕೊಟ್ರೇಶ ಹೆಗಡ್ಯಾಳ, ಶಾಂತಾ ಬಾರಿಕಾಯಿ ನಿರೂಪಿಸಿದರು. ಸಿದ್ದು ಬಾಗೇವಾಡಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.