Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಮನ – ಮನೆ – ಮನಸ್ಸಿನ ವಾತಾವರಣ..
ವಿಶೇಷ ಲೇಖನ

ಮನ – ಮನೆ – ಮನಸ್ಸಿನ ವಾತಾವರಣ..

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

“ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ”- ವಿವೇಕಾನಂದ. ಎಚ್. ಕೆ. ಬೆಂಗಳೂರು

ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದೆ. ಕೆರೆಕಟ್ಟೆಗಳು, ನದಿ ಕಾಲುವೆಗಳಿಗೆ ನೀರು ಹರಿಯುತ್ತಿದೆ. ಮುಂದಿನ ಕೆಲವು ತಿಂಗಳುಗಳು ಹೀಗೆ ಮಳೆ ಮುಂದುವರಿದರೆ ಕಳೆದ ಬಾರಿಯ ಬರಗಾಲದ ಛಾಯೆ ಮರೆಯಾಗಿ, ಕೃಷಿ ಕ್ಷೇತ್ರ ಒಂದಷ್ಟು ಉತ್ತಮ ಬೆಳವಣಿಗೆ ಕಾಣುತ್ತದೆ. ಇದು ರೈತರ ಮತ್ತು ಕೃಷಿ ಅವಲಂಬಿತರ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಅಸಂಖ್ಯಾತ ಜನ ಮತ್ತು ಸರ್ಕಾರದ ಹಿತ ದೃಷ್ಟಿಯಿಂದ ಅತ್ಯುತ್ತಮ ಬೆಳವಣಿಗೆ..

ನಿಜವಾಗಲೂ ಇಡೀ ಆಡಳಿತ ವ್ಯವಸ್ಥೆ ಮತ್ತು ಅದಕ್ಕೆ ಪೂರಕವಾದ ಎಲ್ಲಾ ಕ್ಷೇತ್ರಗಳು ಈ ಬಗ್ಗೆ ಸಾಕಷ್ಟು ಗಮನಹರಿಸಿ ಒಳ್ಳೆಯ ಕೆಲಸ ಮಾಡಬೇಕಿದೆ. ಬಿತ್ತನೆ ಬೀಜ ಮತ್ತು ರಸಗೊಬ್ಬರಗಳಿಗೆ ಹಾಗು ಹಣಕಾಸು ಸಾಲ ಸೌಲಭ್ಯಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕಿದೆ. ಆದರೆ ದುರಾದೃಷ್ಟವಶಾತ್ ಕಳೆದ ಕೆಲವು ವಾರಗಳಿಂದ ಚುನಾವಣಾ ರಾಜಕೀಯ, ತದನಂತರದಲ್ಲಿ ನೇಹಾ ಕೊಲೆ, ಪ್ರಜ್ವಲ್ ವಿಕೃತ ಕಾಮ, ದರ್ಶನ್ ಕ್ರೌರ್ಯ, ಈಗ ಯಡಿಯೂರಪ್ಪನವರ ಫೋಕ್ಸೋ ಹೀಗೆ ಆಡಳಿತ, ಮಾಧ್ಯಮ ಮತ್ತು ಜನರ ಮನಸ್ಸಿನಲ್ಲಿ ಬಹುತೇಕ ಇದೇ ವಿಷಯ ತಲೆಯಲ್ಲಿ ತುಂಬಿಕೊಂಡಿದೆ..

ಎಲೆಕ್ಟ್ರಾನಿಕ್ ಮಾಧ್ಯಮಗಳು ಮತ್ತು ಪತ್ರಿಕೆಗಳಲ್ಲಿ ಯಾವ ವಿಷಯ ಬ್ರೇಕಿಂಗ್ ನ್ಯೂಸ್ ಮತ್ತು ಲೀಡ್ ಆಗುತ್ತದೆಯೋ ಅದು ಹೆಚ್ಚು ವ್ಯಾಪಕವಾಗಿ ಜನರ ಮನಸ್ಸಿನಲ್ಲಿ ಸುಳಿದಾಡುತ್ತಿರುತ್ತದೆ. ಬೆಳಗಿನ ವಾಯುವಿಹಾರವೇ ಇರಲಿ, ಹೋಟೆಲ್ಗಳೇ ಇರಲಿ, ವಿಶ್ರಾಂತಿ ಮತ್ತು ಹರಟೆ ಕಟ್ಟೆಗಳೇ ಇರಲಿ, ಮೊಬೈಲಿನ ಆತ್ಮೀಯ ಜೊತೆಗಾರೇ ಇರಲಿ ಎಲ್ಲಾ ಕಡೆಯೂ ಈ ವಿಷಯಗಳೇ ಪ್ರಮುಖವಾಗಿ ಸ್ಥಾನ ಪಡೆದು ನಿಜಕ್ಕೂ ಅಭಿವೃದ್ದಿಯ, ನೆಮ್ಮದಿಯ ಮೂಲ ವಿಷಯಗಳು ಮೂಲೆಗುಂಪಾಗುತ್ತವೆ..

ಈ ಸಮಾಜದಲ್ಲಿ, ಆಡಳಿತದಲ್ಲಿ, ಮಾಧ್ಯಮಗಳಲ್ಲಿ, ಜನರ ಮನಸ್ಸಿನಲ್ಲಿ, ಯಾವ ವಿಷಯ ಹೆಚ್ಚು ಪ್ರಾಮುಖ್ಯತೆ ಪಡೆಯಬೇಕು, ಯಾವ ನಿಟ್ಟಿನಲ್ಲಿ ಕೆಲಸ ಕಾರ್ಯಗಳು ಆಗಬೇಕು, ಯಾವ ದೃಷ್ಟಿಕೋನದಿಂದ ಅಭಿವೃದ್ಧಿ ಹೊಂದಬೇಕು ಈ ವಿಷಯಗಳು ಹೆಚ್ಚು ಹೆಚ್ಚು ಸಾರ್ವಜನಿಕ ಚರ್ಚೆಗೆ ಬರದೇ, ಈ ರೀತಿಯ ಕೆಲವು ಪ್ರಖ್ಯಾತ ವ್ಯಕ್ತಿಗಳ ದುಷ್ಕೃತ್ಯಗಳೇ ಮುಖ್ಯ ವಾಹಿನಿಯಲ್ಲಿ ಹರಿದಾಡುವಾಗ ಯುವ ಜನಾಂಗ ಮತ್ತು ಸಾಮಾನ್ಯ ಜನ ಇದರ ಪ್ರಭಾವಕ್ಕೆ ಒಳಗಾಗಿ ನೈಜ, ಕ್ರಿಯಾತ್ಮಕ ಭಾವನೆಗಳನ್ನು ನಿಧಾನವಾಗಿ ಮರೆಯುತ್ತಾರೆ.
ಇಡೀ ವಾತಾವರಣ ಕಲುಷಿತವಾಗಿದೆಯೇನೋ ಎಂಬ ಭಾವನೆ ಸಾಮಾನ್ಯವಾಗಿ ಎಲ್ಲರಲ್ಲೂ ಉಂಟಾಗುತ್ತದೆ..

ಶಿಕ್ಷಣ, ಮಾಧ್ಯಮ, ಹಿರಿಯರ ಹಿತನುಡಿಗಳು ನಿಜವಾಗಲೂ ಸಂಸ್ಕೃತಿಯ ವಾಹಕಗಳು. ಸಾಂಸ್ಕೃತಿಕ ವಾತಾವರಣ ಅತ್ಯಂತ ಮನೋಲ್ಲಾಸದ, ಅರಿವಿನ, ಜ್ಞಾನದ ನೆಲೆಯಲ್ಲಿ ಸಂಚರಿಸುತ್ತಾ ಪ್ರಜ್ಞಾವಸ್ಥೆಯಲ್ಲಿ ಚಲಿಸಿದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಅದನ್ನು ಹೊರತುಪಡಿಸಿ ಈ ರೀತಿಯ ಮಾಲಿನ್ಯವನ್ನೇ ಹೆಚ್ಚು ಹೆಚ್ಚು ಚರ್ಚಾ ರೂಪದ ಪ್ರಚಾರದಲ್ಲಿರಿಸಿದರೆ, ಇಡೀ ವಾತಾವರಣವೇ ಅದರ ಪ್ರತಿಬಿಂಬವಾಗುತ್ತದೆ..

ಕ್ರೀಡೆ ಸಾಹಿತ್ಯ ಸಂಗೀತ ವಿಜ್ಞಾನ ಲಲಿತ ಕಲೆಗಳು ಸಮಾಜ ಸೇವೆ ಸಾಹಸ ಮುಂತಾದ ಕ್ಷೇತ್ರಗಳಲ್ಲಿ ಸಾಕಷ್ಟು ಹೋರಾಟಗಳು, ಸಾಧನೆಗಳು, ನಿರಂತರವಾಗಿ ನಡೆಯುತ್ತಿವೆ. ನಮ್ಮ ಮಕ್ಕಳು ಮತ್ತು ಯುವಜನರಿಗೆ ಈ ವಿಷಯಗಳು ನಿರಂತರವಾಗಿ ತಲುಪುತ್ತಲೇ ಇರಬೇಕು..

ಕೇವಲ ಮನೆಯಲ್ಲಿ, ಶಾಲೆಯಲ್ಲಿ, ಮಾಧ್ಯಮಗಳಲ್ಲಿ ಮಾತ್ರವಲ್ಲ, ಎಲ್ಲ ಕಡೆಯೂ ಸಾಮಾಜಿಕ ಪರಿಸರ ಒಳ್ಳೆಯದನ್ನೇ, ಸಾಧನೆಗಳನ್ನೇ, ಸೇವೆಗಳನ್ನೇ ಹೆಚ್ಚು ಹೆಚ್ಚು ಸುದ್ದಿ – ಚರ್ಚೆ ಮಾಡುತ್ತಿದ್ದರೆ, ಅದರ ಪ್ರಭಾವವು ಎಲ್ಲಾ ಕಡೆ ಪಸರಿಸುತ್ತದೆ..

ಸಾಂಸ್ಕೃತಿಕ ನಾಯಕರಾಗಿ ಬಸವಣ್ಣನವರನ್ನು ಸರ್ಕಾರ ಅಧಿಕೃತವಾಗಿ ಘೋಷಿಸಿರುವ ಈ ಸಂದರ್ಭದಲ್ಲಿ ಆ ವಿಷಯ ಹೆಚ್ಚು ಹೆಚ್ಚು ಜನರಿಗೆ ತಲುಪಬೇಕು. ಬಸವ ತತ್ವಗಳು, ಬೌದ್ಧ ತತ್ವಗಳು, ಗಾಂಧಿ ಚಿಂತನೆಗಳು, ಅಂಬೇಡ್ಕರ್ ಚಿಂತನೆಗಳು, ವಿವೇಕಾನಂದರ ವಿಚಾರಗಳು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳು, ಪ್ರತಿನಿತ್ಯ ಕನಿಷ್ಠ ಮಕ್ಕಳ ಕಿವಿಗೆ ಬೀಳುವಂತಾದರೂ ಆಗಬೇಕು. ಅದನ್ನು ಹೊರತುಪಡಿಸಿ ವಿಕೃತಗಳೇ ಮಕ್ಕಳಿಗೆ ತಿಳಿಯುತ್ತಿದ್ದರೆ ಅವರು ಜೀವಪರ ನಿಲುವುಗಳನ್ನು ಹೊಂದುವುದಾದರೂ ಹೇಗೆ…

ಆದ್ದರಿಂದ ನಾವುಗಳು ಸಹ ಆದಷ್ಟೂ ಒಳ್ಳೆಯ ಮನಸ್ಸಿನ, ಒಳ್ಳೆಯ ವಿಷಯಗಳನ್ನು ಮನ, ಮನೆ, ಶಾಲೆ, ಗೆಳೆಯರು, ವಾಕಿಂಗ್, ಮೊಬೈಲ್ ಮುಂತಾದ ಎಲ್ಲಾ ಕಡೆ ಚರ್ಚಿಸುವ ಮನೋಭಾವ
ಬೆಳೆಸಿಕೊಳ್ಳಬೇಕು. ಆಗ ನಿಧಾನವಾಗಿ ನಮ್ಮ ಸಾಂಸ್ಕೃತಿಕ ವಾತಾವರಣ ಉತ್ತಮಗೊಳ್ಳುತ್ತದೆ. ಇದನ್ನು ದಯವಿಟ್ಟು ಪ್ರಯತ್ನಿಸೋಣ..

– ವಿವೇಕಾನಂದ. ಎಚ್. ಕೆ. ಬೆಂಗಳೂರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.