Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿ.ಎನ್.ಬಿ ಫೌಂಡೇಶನ್ ಕಾರ್ಯ ಶ್ಲಾಘನೀಯ :ಸಂಸದ ಜಿಗಜಿಣಗಿ
(ರಾಜ್ಯ ) ಜಿಲ್ಲೆ

ಬಿ.ಎನ್.ಬಿ ಫೌಂಡೇಶನ್ ಕಾರ್ಯ ಶ್ಲಾಘನೀಯ :ಸಂಸದ ಜಿಗಜಿಣಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಬಿ.ಎನ್.ಬಿ ಫೌಂಡೇಶನ್ ಸಂಸ್ಥೆಯನ್ನು ಹುಟ್ಟು ಹಾಕಿದ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹಾಗೂ ಅವರ ಕುಟುಂಬ ಮುಂದಿನ ಯುವ ಪೀಳಿಗೆಗೆ ಸ್ಫೂರ್ತಿದಾಯಕವಾಗಿದ್ದಾರೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದರು.
     ಭಾನುವಾರದಂದು ಪಟ್ಟಣದ ಮಾಂಗಲ್ಯ ಭವನದಲ್ಲಿ ಬಿ.ಎನ್.ಬಿ ಫೌಂಡೇಶನ್ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಸಮಾರಂಭವನ್ನು  ಉದ್ಘಾಟಿಸಿ ಮಾತನಾಡಿದ ಅವರು, ಕೃಷಿ ಕುಟುಂಬದಿಂದ ಬಂದಂತಹ ದಿ.ಭೀಮರಾಯಗೌಡರು ಈ ಸಮಾಜದಲ್ಲಿ ನೆನಪು ಉಳಿಯುವಂತಹ ಸಾಧನೆಗಳನ್ನು ಮಾಡಿ ಹೋಗಿದ್ದಾರೆ. ಸಾಧಕರಾಗಬೇಕಾದರೆ ದೃಢ-ಮನಸ್ಸು ಅಗತ್ಯ,ಜೀವನದ ಉತ್ತಮ ಆಲೋಚನೆಗಳು ಮಾತ್ರ ಉತ್ತಮ ಭವಿಷ್ಯದ ಬದುಕನ್ನು ನಿರ್ಧರಿಸುತ್ತವೆ. ಇಂತಹ ಕಾರ್ಯಕ್ರಮಗಳು ಈ ಸಮಾಜದಲ್ಲಿ ಮೇಲಿಂದ ಮೇಲೆ ಜರುಗಬೇಕು. ವಿದ್ಯಾರ್ಥಿಗಳಲ್ಲಿ ಉತ್ತೇಜನ ನೀಡಬೇಕು. ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಅವರಿಗೆ ಪುರಸ್ಕರಿಸುವ ಬಿ.ಎನ್.ಬಿ ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದರು.
    ಈ ವೇಳೆ ಮಾಜಿ ವಿಪ ಸದಸ್ಯ ಅರುಣ ಶಹಾಪುರ ಮಾತನಾಡಿ, ಈ ಹಿಂದೆ ರಾಜ್ಯದ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಮಾಜಿ ಸಚಿವ, ಹಾಲಿ ಸಂಸದ ರಮೇಶ ಜಿಗಜಿಣಗಿ ಅವರು ಕರ್ನಾಟಕ ರಾಜ್ಯದಲ್ಲಿ ಮುರಾರ್ಜಿ ವಸತಿ ಶಾಲೆಯ ಕಲ್ಪನೆಯನ್ನು ತಂದಿದ್ದಕ್ಕೂ ಇಂದು ಸಾರ್ಥಕವಾಗಿದೆ. ಕಾರಣ ಸಾಧನೆ ಮಾಡಿ ಇಂದು ಈ ಕಾರ್ಯಕ್ರಮದಲ್ಲಿ ವಿಶೇಷ ಸನ್ಮಾನಗೊಳ್ಳಲಿರುವ ಅಂಕಿತಾ ಕೊಣ್ಣೂರ ಅಧ್ಯಯನ ಮಾಡಿದ್ದು ಮುರಾರ್ಜಿ ವಸತಿ ಶಾಲೆ.ಈ ಶಾಲೆ ಸಂಸದ ರಮೇಶ ಜಿಗಜಿಣಗಿ ಅವರ ಕಲ್ಪನೆ ಎಂಬುದು ಹೆಮ್ಮೆಯ ವಿಷಯ. ಬಡವರು, ದಿನ-ದಲಿತರು, ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣವನ್ನು ಪಡೆದುಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಮುರಾರ್ಜಿ ವಸತಿ ಶಾಲೆಯ ಕಲ್ಪನೆ ತಂದಿದ್ದು ಇಂದು ಈ ವಿದ್ಯಾರ್ಥಿ ಸಾಧನೆ ಮಾಡುವ ಮೂಲಕ ಸಾರ್ಥಕಗೊಳಿಸಿದ್ದಾಳೆ ಎಂದರು.
        ಈ ವೇಳೆ ಯಾದಗಿರಿಯ ಸಾಹಿತಿ ಶಿವಶರಣಪ್ಪ ಶಿರೂರ ಉಪನ್ಯಾಸ ನೀಡಿದರು. ವಿಜಯಪುರ ವನಶ್ರೀ ಮಠದ ಡಾ.ಜಯಬಸವ ಕುಮಾರ ಸ್ವಾಮಿಗಳು, ಯಂಕಂಚಿ ಶ್ರೀಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಗಳು, ಕನ್ನೊಳ್ಳಿ ಶ್ರೀಮಠದ ಸಿದ್ದಲಿಂಗ ಶಿವಾಚಾರ್ಯರು ಆಶೀರ್ವಚನ ನೀಡಿದರು.
ಈ ವೇಳೆ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾ ಕೊಣ್ಣೂರ ಹಾಗೂ ೨೫ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಸನ್ಮಾನಿಸುವುದರ ಜೊತೆಗೆ ಮಾಜಿ ಸೈನಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಫೌಂಡೇಶನ್ ಅಧ್ಯಕ್ಷ ಶ್ರೀಶೈಲಗೌಡ ಬಿರಾದಾರ ಸ್ವಾಗತಿಸಿದರು. ಸಿದ್ದಲಿಂಗ ಚೌದರಿ ನಿರೂಪಿಸಿ, ವಂದಿಸಿದರು.
          ಇದೇ ಸಂದರ್ಭದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ, ಡಾ.ಚನ್ನವೀರ ಮನಗೂಳಿ, ಗೋಲಗೇರಿಯ ಸಿದ್ದರಾಮ ಸ್ವಾಮೀಜಿ, ಮುಖಂಡ ಗುರಣ್ಣಗೌಡ ಬಿರಾದಾರ, ಸಿಪಿಐ ಪರಶುರಾಮ ಮನಗೂಳಿ, ಅಶೋಕ ವಾರದ, ಸಂತೋಷ ಪಾಟೀಲ್ ಡಂಬಳ, ಸಿದ್ದು ಬಳ್ಳಾ, ಸಿದ್ದನಗೌಡ ಬಿರಾದಾರ, ಬಸವರಾಜ ಬಿರಾದಾರ, ಭಗವಂತರಾಯಗೌಡ ಬಿರಾದಾರ, ಸೇವಾಲಾಲ ಸಿಂಗ್, ಮಡಿವಾಳಪ್ಪಗೌಡ ಬಿರಾದಾರ, ಮಲ್ಲನಗೌಡ ಬಿರಾದಾರ, ಡಾ.ವಿಶ್ವನಾಥ ಬಿರಾದಾರ್ ನಿಂಗನಗೌಡ ಬಿರಾದಾರ್ ಗೊಲ್ಲಾಳಪ್ಪಗೌಡ ಬಿರಾದಾರ ಸುರೇಶ ಮಳಲಿ, ಪೀರು ಕೆರೂರ, ಶ್ರೀಮಂತ ಪಾಟೀಲ ಕಾಶಿರಾಯಗೌಡ ಪಾಟೀಲ ಸೇರಿದಂತೆ, ದಿ.ಭೀಮರಾಯಗೌಡರ ಕುಟುಂಬಸ್ಥರು, ಅಭಿಮಾನಿಗಳು ಸಿಂದಗಿ, ಆಲಮೇಲ, ಮಾಗಣಗೇರಿ ಗ್ರಾಮಸ್ಥರು ಉಪಸ್ಥಿತರಿದ್ದರು. 

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.