Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಾಲ ವಿಕಾಸ ಅಕಾಡೆಮಿಗೆ ಹೊಸ ಸ್ವರೂಪ ನೀಡುವ ಕನಸು ನನ್ನದು :ಬಬಲೇಶ್ವರ
(ರಾಜ್ಯ ) ಜಿಲ್ಲೆ

ಬಾಲ ವಿಕಾಸ ಅಕಾಡೆಮಿಗೆ ಹೊಸ ಸ್ವರೂಪ ನೀಡುವ ಕನಸು ನನ್ನದು :ಬಬಲೇಶ್ವರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ಬಾಲ ವಿಕಾಸ ಅಕಾಡೆಮಿ ನೂತನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರಿಗೆ ’ಉದಯರಶ್ಮಿ’ ಬಳಗದ ಪರವಾಗಿ ಸನ್ಮಾನ

ವಿಜಯಪುರ: ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ನೂತನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ದಂಪತಿಗೆ ’ಉದಯರಶ್ಮಿ’ ಪತ್ರಿಕಾ ಬಳಗದ ಪರವಾಗಿ ಸಂಪಾದಕ ಇಂದುಶೇಖರ ಮಣೂರ ದಂಪತಿ ಸೋಮವಾರ ಸನ್ಮಾನಿಸಿ ಗೌರವಿಸಿದರು‌.
ಈ ಸಂದರ್ಭದಲ್ಲಿ ಸಂಪಾದಕರೊಂದಿಗೆ ಹಲವು ವಿಚಾರಗಳನ್ನು ಹಂಚಿಕೊಂಡ ಸಂಗಮೇಶ ಬಬಲೇಶ್ವರ ಅವರು, ಮೂರು ವರ್ಷದ ತಮ್ಮ ಅಧಿಕಾರಾವಧಿಯಲ್ಲಿ ಬಾಲ ಮಂದಿರದ ನಿರ್ಗತಿಕ ಮಕ್ಕಳ ಮನಸ್ಸು ಅರಳಿಸುವ ಜೊತೆ ಬಾವ, ಸಂಸ್ಕಾರ, ಸಂಸ್ಕೃತಿ ಕಲಿಸಿ ಸಮಾಜಕ್ಕೆ ಬೆಳಕಾಗುವಂತೆ ಹೊಸ ಭಾಷ್ಯ ಬರೆಯುವ ವಿಶ್ವಾಸ ವ್ಯಕ್ತಪಡಿಸಿದರು.
ಈಗಾಗಲೇ “ಅಮ್ಮನ ಮಡಿಲು” ಟ್ರಸ್ಟ್ ಸ್ಥಾಪಿಸಿ ಅನಾಥ ಮಕ್ಕಳಿಗೆ ವಸತಿ, ಶಿಕ್ಷಣ ನೀಡಿ ಆತ್ಮವಿಶ್ವಾಸ ತುಂಬಿ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದ್ದೇನೆ ಎಂದರು.
ಈ ಹುದ್ದೆಗಾಗಿ ತಾವು ಯಾವುದೇ ತೆರನಾದ ಪ್ರಯತ್ನ ಮಾಡಿರಲಿಲ್ಲ. ಇದು ಅನಿರೀಕ್ಷಿತವಾಗಿ ಒದಗಿದ ಗೌರವ. ತಾವು ಈ ಹುದ್ದೆಗೆ ನ್ಯಾಯ ಒದಗಿಸಿ ಅಕಾಡೆಮಿಗೆ ಹೊಸ ಸ್ವರೂಪ ನೀಡುವ ಕನಸು ಹೊಂದಿರುವುದಾಗಿ ತಿಳಿಸಿದರು.
ಈ ವೇಳೆ ಶ್ರೀಮತಿ ಶ್ವೇತಾ ಸಂಗಮೇಶ ಬಬಲೇಶ್ವರ, ಪ್ರದೀಪ ಲಿಂಗದಳ್ಳಿ, ಗೌರಮ್ಮ ಬಬಲೇಶ್ವರ, ಮಾ.ಅಪ್ಪು ಬಬಲೇಶ್ವರ ಹಾಗೂ ’ಉದಯರಶ್ಮಿ’ ಪ್ರಕಾಶಕಿ ಶ್ರೀಮತಿ ಶೈಲಾ ಮಣೂರ ಇದ್ದರು.

” ಬಾಲ ವಿಕಾಸ ಅಕಾಡೆಮಿಗೆ ಸರ್ಕಾರದಿಂದ ಹೆಚ್ತು ಅನುದಾನ ತಂದು ರಚನಾತ್ಮಕ ಕಾರ್ಯಗಳಿಗೆ ಬಳಕೆ ಮಾಡುವೆ. ೦-೧೮ ವರ್ಷದ ಮಕ್ಕಳು ಈ ಅಕಾಡೆಮಿ ವ್ಯಾಪ್ತಿಗೆ ಬರಲಿದ್ದು ಅವರಿಗೆ ಫೋಕ್ಸೋ ಕಾಯ್ದೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅಕಾಡೆಮಿಯ ನೌಕರರಿಗೆ ಅಭದ್ರತೆ ಕಾಡದಂತೆ ನೋಡಿಕೊಳ್ಳುವೆ.”

– ಸಂಗಮೇಶ ಬಬಲೇಶ್ವರ
ನೂತನ ಅಧ್ಯಕ್ಷರು, ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಧಾರವಾಡ

ಸರ್ಕಾರಿ ಕಾರು ಬಳಕೆ ಖಾಸಗಿ ಕಾರ್ಯಕ್ಕಲ್ಲ :ಬಬಲೇಶ್ವರ

ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ನೂತನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಸರ್ಕಾರಿ ಕಾರಿನಲ್ಲಿ ಬಾರದೇ ತಮ್ಮ ಸ್ವಂತ ವಾಹನದಲ್ಲಿ ಆಗಮಿಸಿ ಮಾದರಿಯ ನಡೆ ಅನುಸರಿಸಿದರು.
ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ವಾಹನ ಅಕಾಡೆಮಿ ಕಾರ್ಯಗಳಿಗಾಗಿ ಅದರ ಅಧ್ಯಕ್ಷನಾದ ನನಗೆ ಉಪಯೋಗಿಸಲು ಸರ್ಕಾರ ನನಗೆ ಕೊಡಮಾಡಿದೆ. ಹೀಗಿರುವಾಗ ಅದನ್ನು ನನ್ನ ಕುಟುಂಬ ವರ್ಗದವರಿಗಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದರು.
ಅನೇಕ ಅಧಿಕಾರಿಗಳು, ಜನಪ್ರತಿನಿಧಿಗಳು ಸರ್ಕಾರಿ ವಾಹನಗಳನ್ನು ತಮ್ಮ ಖಾಸಗಿ ಕಾರ್ಯಗಳಿಗೆ ಎಗ್ಗಿಲ್ಲದೇ ಉಪಯೋಗಿಸುವ ಇಂಥವರು ನಮ್ಮ ನಡುವೆ ಇರುವಾಗ ಸಂಗಮೇಶ್ವರ ಬಬಲೇಶ್ವರ ಅವರ ನಡೆ ಅಂಥವರಿಗೆ ಮಾದರಿಯಾಗುವಂತಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.