ಸಿಂದಗಿ: ಪಟ್ಟಣದ ಸಾರಂಗಮಠದ ಪೂಜ್ಯ ಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನದ ವತಿಯಿಂದ ಜೂ.೨೧ ಶುಕ್ರವಾರ ಸಾಯಂಕಾಲ ೭ಗಂಟೆಗೆ ಕಾರ ಹುಣ್ಣಿಮೆಯ ದಿನದಂದು ಸಾರಂಗಮಠದ ಆವರಣದಲ್ಲಿ ೩೩೧ನೆಯ ಸದ್ವಿಚಾರ ಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕರು ತಿಳಸಿದ್ದಾರೆ.
ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸಿಕೊಳ್ಳಲಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಿಂದ ಕಾಡು ಬೆಳಸಿ ನಾಡು ಉಳಿಸಿ ಕುರಿತಾಗಿ ಭಾಷಣ ಮಾಡಿಸಲಾಗುವುದು. ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಆರ್.ಡಿ. ಪಾಟೀಲ ಕಾಲೇಜಿನ ನಿವೃತ್ತ ಪ್ರಾಚಾರ್ಯ ವಿ.ಡಿ.ಪಾಟೀಲ, ನಿವೃತ್ತ ಪ್ರಯೋಗಾಲಯ ಸಹಾಯಕ ಈರಣ್ಣ ಶಿವಸಿಂಪಿಗೇರ, ನಿವೃತ್ತ ಚಿತ್ರಕಲಾ ಶಿಕ್ಷಕ ಎಂ.ಬಿ.ಅಲ್ದಿ, ಶ್ರೀಕಾಂತ ಕುಂಬಾರ ಅವರಿಗೆ ಸನ್ಮಾನಿಸಿ ಗೌರವಿಸಲಾಗುವುದು. ಮಲ್ಲಯ್ಯ ಸಿದ್ರಾಮಯ್ಯ ನಂದಿಕೋಲ ಸಿಂದಗಿ ಪರಿವಾರದಿಂದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರಿಗೆ ನಾಣ್ಯ ತುಲಾಭಾರ ಸೇವೆ ನಡೆಯಲಿದೆ. ಕಾರಣ ಸಿಂದಗಿ ತಾಲೂಕಿನ ಸುತ್ತಮುತ್ತಲಿನ ಶ್ರೀಮಠದ ಭಕ್ತರು ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಂಚಾಲಕರು ತಿಳಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
